ಸುಳ್ಳು ಸುದ್ದಿ ಹಬ್ಬಿಸಿದ ಸೋಷಿಯಲ್ ಮೀಡಿಯಾಗಳ ವಿರುದ್ಧ ಅರ್ಜುನ್ ಜನ್ಯ ಗರಂ


Team Udayavani, Apr 17, 2021, 1:27 PM IST

ghfgyhrt

ಬೆಂಗಳೂರು : ತಮ್ಮ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡುತ್ತಿರುವ ಸೋಷಿಯಲ್ ಮೀಡಿಯಾಗಳ ( ಯುಟ್ಯೂಬ್ ವಾಹಿನಿಗಳ) ವಿರುದ್ಧ ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಗರಂ ಆಗಿದ್ದಾರೆ. ಹಾಗೂ ಈ ಕುರಿತು ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಅರ್ಜುನ್ ಜನ್ಯ ಅವರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿತ್ತು. ಈ ವೇಳೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸುದ್ದಿಯನ್ನು ಕೆಲವು ಯುಟ್ಯೂಬ್ ಹಾಗೂ ವೆಬ್‍ ಸೈಟ್‍ಗಳು ವಿಡಂಭನೆ ಮಾಡಿದ್ದವು. ಅರ್ಜುನ್ ಜನ್ಯ ಹಾಗೂ ಅವರ ಕುಟುಂಬದ ಬಗ್ಗೆ ತಪ್ಪು ಮಾಹಿತಿ ಬಿತ್ತರಿಸಿದ್ದವು. ಇವುಗಳನ್ನು ಗಮನಿಸಿರುವ ಜನ್ಯ, ಈ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಶುಕ್ರವಾರ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸದಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಅರ್ಜುನ್ ಪತ್ರ :

‘ಎಲ್ಲರಿಗೂ ನಿಮ್ಮ ಅರ್ಜುನ್ ಜನ್ಯ ಮಾಡುವ ನಮಸ್ಕಾರಗಳು ಈ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಯೂಟ್ಯೂಬ್ ಚಾನೆಲ್‌ಗಳು ನನ್ನ ಬಗ್ಗೆ ನನ್ನ ಕುಟುಂಬದ ಬಗ್ಗೆ, ನನ್ನ ಆರೋಗ್ಯದ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸುತ್ತಿದ್ದಾರೆ. ಇದು ಸರಿ ಹೋಗಬಹುದು ಎಂದು ನಾನು ಸಮಾಧಾನವಾಗಿದ್ದೆ, ಆದರೆ ದಿನೆ ದಿನೇ ಇದು ಹೆಚ್ಚಾಗುತ್ತಿದೆ.

ಜನರಲ್ಲಿ ನಾನು ವಿನಂತಿಸಿಕೊಳ್ಳುವುದೇನೆಂದರೆ ಈ ಕೆಲವು ಯೂಟ್ಯೂಬ್ ಚಾನಲ್‌ಗಳು ನೀಡಿದ ಮಾಹಿತಿಗಳು ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ನನಗೆ ಕೋವಿಡ್ ಬಂದು ಗುಣಮುಖನಾಗಿ ವೈದ್ಯರ ಸಲಹೆಯಂತೆ ಈಗ ಮನೆಯಲ್ಲಿಯೇ ಹತ್ತು ದಿನದ ಐಸೋಲೇಶನ್‌ನಲ್ಲಿದ್ದೇನೆ. ಇದರಲ್ಲಿ ಈಗಾಗಲೇ ಆರು ದಿನಗಳು ಪೂರ್ಣಗೊಂಡಿವೆ, ಇನ್ನು ಉಳಿದ ನಾಲ್ಕೈದು ದಿನಗಳು ಕಳೆದ ನಂತರ ನನ್ನ ದೈನಂದಿನ ಕೆಲಸಗಳನ್ನು ಮುಂದುವರಿಸುತ್ತೇನೆ. ಮತ್ತೊಮ್ಮೆ ಈ ರೀತಿಯ ಹೀನ ಕಾರ್ಯಗಳನ್ನು ಮಾಡುತ್ತಿರುವ ಯೂಟ್ಯೂಬ್‌ ಚಾನಲ್‌ಗಳನ್ನು ವಿನಂತಿಸಿಕೊಳ್ಳುತ್ತಿದ್ದೇನೆ.

ಇನ್ನು ಮುಂದಾದರೂ ಈ ರೀತಿಯ ಸುಳ್ಳು ಸುದ್ದಿಗಳನ್ನು ಹಬ್ಬಿಸದಂತೆ ವಿನಂತಿಸಿಕೊಳ್ಳುತ್ತಿದ್ದೇನೆ. ಇದರಿಂದ ಜನರಲ್ಲಿ ಕಳವಳ ಹಾಗೂ ಕುಟುಂಬದವರಿಗೂ ಇದರಿಂದ ಮಾನಸಿಕವಾಗಿ ನೋವು ಹಾಗೂ ತೊಂದರೆಯಾಗುತ್ತದೆ. ಈಗಾಗಲೇ ನನ್ನ ಗಮನಕ್ಕೆ ಬಂದಂತಹ ಎಲ್ಲ ಸಾಕ್ಷಿಗಳನ್ನು ಸೈಬರ್ ಪೊಲೀಸ್‌ಗೆ ನೀಡಿದ್ದೇನೆ. ದಯವಿಟ್ಟು ನೀವು ಮಾಡಿದ ವಿಡಿಯೋಗಳನ್ನು ಈ ಕೂಡಲೇ ತೆಗೆಯಬೇಕೆಂದು ಕೇಳಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.