ಅಭಿಮಾನಿಗಳನ್ನು ರಂಜಿಸುವುದಷ್ಟೇ ನನ್ನ ಕೆಲಸ


Team Udayavani, Oct 27, 2018, 10:42 AM IST

abimani.jpg

“ದಿ ವಿಲನ್‌’ ಮೂಲಕ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದ ಶಿವರಾಜಕುಮಾರ್‌ ಇದೀಗ ಮತ್ತೂಂದು ಹೊಸ ಅವತಾರದಲ್ಲಿ ಅಭಿಮಾನಿಗಳನ್ನು ಖುಷಿಪಡಿಸಲು ಸಜ್ಜಾಗಿದ್ದಾರೆ. ಇದುವರೆಗೆ ಶಿವರಾಜಕುಮಾರ್‌ ಅವರನ್ನು ನೋಡದೇ ಇರುವಂತಹ ಪಾತ್ರದಲ್ಲಿ ಅಭಿಮಾನಿಗಳು ನೋಡಿ ಖುಷಿಯಾಗುವ ಸಮಯ ಹತ್ತಿರವಾಗುತ್ತಿದೆ. ಸ್ವತಃ ಶಿವರಾಜಕುಮಾರ್‌ ಅವರೇ ತಮ್ಮ ಮುಂದಿನ ಚಿತ್ರ ಮತ್ತು ಪಾತ್ರ ಕುರಿತು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಅದು “ಕವಚ’. ಈಗಾಗಲೇ ಬಿಡುಗಡೆಗೆ ಸಿದ್ಧವಾಗಿದ್ದು, ಇಷ್ಟರಲ್ಲೇ ಟ್ರೇಲರ್‌ ಬಿಡುಗಡೆ ಮಾಡಲು ಚಿತ್ರತಂಡ ಅಣಿಯಾಗುತ್ತಿದೆ. ಆ ಬಗ್ಗೆ ಹೇಳಿಕೊಳ್ಳುವ ಶಿವರಾಜಕುಮಾರ್‌, “ನನ್ನ ಅಭಿನಯದ “ಮಫ್ತಿ’, “ಟಗರು’, “ದಿ ವಿಲನ್‌’ ಚಿತ್ರಗಳ ಪಾತ್ರ ಬಿಟ್ಟು, “ಕವಚ’ ಚಿತ್ರ ನೋಡಬೇಕು. ಯಾಕೆಂದರೆ, ಮೊದಲ ಸಲ ನಾನು ಆ ಚಿತ್ರದಲ್ಲಿ ಅಂಧ ಪಾತ್ರ ನಿರ್ವಹಿಸಿದ್ದೇನೆ. ನನಗೂ ಆ ಚಿತ್ರದ ಮೇಲೆ ಕುತೂಹಲವಿದೆ.

“ಮಫ್ತಿ’ ಚಿತ್ರ ನೋಡಿದವರು, ಶಿವಣ್ಣ, ಬರೀ ಕಣ್ಣಲ್ಲೇ ಮಾತಾಡುತ್ತಾರೆ ಅಂತ ಹೇಳುವ ಮೂಲಕ ಮೆಚ್ಚುಗೆ ಸೂಚಿಸಿದ್ದರು. ಆದರೆ, “ಕವಚ’ ಚಿತ್ರದಲ್ಲಿ ಕಣ್ಣಿಲ್ಲದ ಪಾತ್ರ ಮಾಡಿದ್ದೇನೆ. ಕಣ್ಣಿರುವ ನಾನು ಕಣ್ಣು ಕಾಣಿಸದ ವ್ಯಕ್ತಿಯಾಗಿ ನಟಿಸಿರುವುದೇ ವಿಶೇಷ. ಅಂತಹ ಪಾತ್ರ ನಟರಿಗೆ ಚಾಲೆಂಜ್‌ ಕೂಡ. ಇಷ್ಟರಲ್ಲೇ “ಕವಚ’ ಕೂಡ ಬರುತ್ತದೆ. ವಿಭಿನ್ನ ಕಥೆ, ಪಾತ್ರ ಮೂಲಕ ಕಾಣಿಸಿಕೊಳ್ಳುತ್ತಿರುವುದಕ್ಕೆ ಹೆಮ್ಮೆಯೂ ಇದೆ’ ಎಂಬುದು ಶಿವರಾಜಕುಮಾರ್‌ ಅವರ ಮಾತು.

ನನಗೆ ನಿರ್ದೇಶಕರ ಕಲ್ಪನೆ ಕೆಡಿಸಲು ಬರಲ್ಲ: ಇನ್ನು, “ದಿ ವಿಲನ್‌’ ಸಕ್ಸಸ್‌ ಬಗ್ಗೆ ಖುಷಿ ಹಂಚಿಕೊಳ್ಳುವ ಅವರು, ಎಲ್ಲೆಡೆ ಜನರು ಇಷ್ಟಪಟ್ಟಿದ್ದಾರೆ. ದೊಡ್ಡ ಮಟ್ಟದ ಮೆಚ್ಚುಗೆಯೂ ಸಿಕ್ಕಿದೆ. ಚಿತ್ರರಂಗದ ದಾಖಲೆ ಎನ್ನಲಾಗುತ್ತಿದೆ. ಒಳ್ಳೆಯ ಚಿತ್ರದಲ್ಲಿ ನಾನು ಭಾಗಿಯಾಗಿದ್ದೇನೆಂಬ ಖುಷಿ ಇದೆ. ನನ್ನ ಅಭಿಮಾನಿಗಳಿಗೆ ಬೇಸರವಾಗಿರಬಹುದು.

ಆದರೆ, ಅದನ್ನು ಮನಸ್ಸಿಗೆ ತೆಗೆದುಕೊಳ್ಳಬಾರದು. ಲೈಫ್ ಇಷ್ಟೇ ಅಲ್ಲ, ಇನ್ನೂ ದೊಡ್ಡದಿದೆ. ನನಗೀಗ ವಯಸ್ಸು 56. ಇನ್ನೂ ಹೊಸಬಗೆಯ ಪಾತ್ರ ಮಾಡುತ್ತಲೇ ಅಭಿಮಾನಿಗಳನ್ನು ರಂಜಿಸುತ್ತೇನೆ. ಅಭಿಮಾನಿಗಳಿಗೆ ನಿರಾಸೆಯಾಗಿರಬಹುದು. ಯಾರೂ ಬೇಸರ ಮಾಡಿಕೊಳ್ಳದೆ, ಎಂಜಾಯ್‌ ಮಾಡಿಕೊಂಡು ಚಿತ್ರ ನೋಡಿ. ನನ್ನ ಅಭಿಮಾನಿಗಳಿಗೆ ಎಲ್ಲವೂ ಅರ್ಥ ಆಗುತ್ತೆ.

ನನಗೆ ಸಿಕ್ಕ ಪಾತ್ರವನ್ನು ಅಚ್ಚುಕಟ್ಟಾಗಿ ಮಾಡಿದ ತೃಪ್ತಿ ಇದೆ. ನಿರ್ದೇಶಕರ ಕಲ್ಪನೆಯನ್ನು ಕೆಡಿಸುವುದಕ್ಕೆ ನನಗೆ ಬರಲ್ಲ. ಯಾವುದು ತಪ್ಪು, ಸರಿ ಎಂಬುದನ್ನು ಅವರಿಗೇ ಬಿಟ್ಟು ಬಿಡ್ತೀನಿ. ಪಾತ್ರದ ತಕ್ಕಂತೆ ಮಾಡುವುದು ನನ್ನ ಜವಾಬ್ದಾರಿ. “ದಿ ವಿಲನ್‌’ ಗಳಿಕೆಯಲ್ಲಿ ಚೆನ್ನಾಗಿದೆ. ಫ್ಯಾಮಿಲಿ ಆಡಿಯನ್ಸ್‌ ಕೂಡ ನೋಡುತ್ತಿದ್ದಾರೆಂಬುದೇ ಖುಷಿ’ ಎನ್ನುತ್ತಾರೆ ಶಿವರಾಜಕುಮಾರ್‌.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.