“ನಟಸಾರ್ವಭೌಮ’ನ ಓಟ ಜೋರು


Team Udayavani, Feb 12, 2019, 5:46 AM IST

natasarva.jpg

ಕಳೆದ ವಾರ ತೆರೆಕಂಡಿರುವ ಪುನೀತ್‌ರಾಜಕುಮಾರ್‌ ಅವರ “ನಟಸಾರ್ವಭೌಮ’ ಚಿತ್ರ ದಿನದಿಂದ ದಿನಕ್ಕೆ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಾ ಸಾಗುತ್ತಿದೆ. ಈ ಮೂಲಕ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಖುಷಿಯಾಗಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡುವ ರಾಕ್‌ಲೈನ್‌ ವೆಂಕಟೇಶ್‌, “ಸಿನಿಮಾ ಬಿಡುಗಡೆಗೆ ಮುನ್ನ ನಾವೇನು ಅಂದುಕೊಂಡಿದ್ದೆವೋ ಅದರಂತೆ ಚಿತ್ರಕ್ಕೆ ಪ್ರತಿಕ್ರಿಯೆ ಸಿಗುತ್ತಿದೆ. ದಿನದಿಂದ ದಿನಕ್ಕೆ ಚಿತ್ರ ನೋಡುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಆರಂಭದಲ್ಲಿ ಅಭಿಮಾನಿಗಳು, ಮಾಸ್‌ ಪ್ರಿಯರು ಸಿನಿಮಾ ನೋಡಿ ಖುಷಿಪಟ್ಟರೆ ಈಗ ಫ್ಯಾಮಿಲಿ ಆಡಿಯನ್ಸ್‌ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಚಿತ್ರದ ಪ್ರತಿ ಅಂಶಗಳನ್ನು ಅವರು ಇಷ್ಟಪಡುತ್ತಿದ್ದಾರೆ. ಒಂದು ಸಿನಿಮಾದ ಗೆಲುವಿನಲ್ಲಿ ಫ್ಯಾಮಿಲಿ ಆಡಿಯನ್ಸ್‌ ಪಾತ್ರ ಪ್ರಮುಖವಾಗಿರುತ್ತದೆ. ಆ ನಿಟ್ಟಿನಲ್ಲಿ “ನಟಸಾರ್ವಭೌಮ’ ಫ್ಯಾಮಿಲಿ ಮಂದಿಯನ್ನು ಖುಷಿಪಡಿಸುವಲ್ಲಿ ಯಶಸ್ವಿಯಾಗಿದ್ದಾನೆ’ ಎನ್ನುವುದು ರಾಕ್‌ಲೈನ್‌ ವೆಂಕಟೇಶ್‌ ಮಾತು.

ರಾಕ್‌ಲೈನ್‌ ವೆಂಕಟೇಶ್‌ ಈ ಹಿಂದೆ ಪುನೀತ್‌ ರಾಜಕುಮಾರ್‌ ಜೊತೆ “ಅಜಯ್‌’ ಸಿನಿಮಾ ಮಾಡಿದ್ದರು. ಆ ನಂತರ ಅವರಿಬ್ಬರು ಸಿನಿಮಾ ಮಾಡುವ ಬಗ್ಗೆ ಸುದ್ದಿ ಹರಿದಾಡುತ್ತಿದ್ದರೂ ಮಾಡಿರಲಿಲ್ಲ. ಈಗ “ನಟಸಾರ್ವಭೌಮ’ ಮೂಲಕ ಒಂದಾಗಿದ್ದಾರೆ. “ನನಗೆ ಈ ಕಥೆ ಕೇಳಿದಾಗಲೇ ತುಂಬಾ ಇಷ್ಟವಾಯಿತು. ಏಕೆಂದರೆ ಕಥೆಯಲ್ಲಿ ಎಲ್ಲಾ ವರ್ಗದವರು ಇಷ್ಟಪಡುವ ಅಂಶಗಳಿವೆ. ಆ್ಯಕ್ಷನ್‌, ಕಾಮಿಡಿ, ಸೆಂಟಿಮೆಂಟ್‌, ಹಾರರ್‌, ಲವ್‌ … ಹೀಗೆ ಎಲ್ಲಾ ಅಂಶಗಳನ್ನು ಹೊಂದಿರುವ ಕಥೆಯಾದ್ದರಿಂದ ನನಗೆ ಈ ಸಿನಿಮಾವನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿತ್ತು.

ಅದರಂತೆ ಈಗ ಸಿನಿಮಾಕ್ಕೆ ಎಲ್ಲೆಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಈಗಾಗಲೇ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು, ಅಲ್ಲಿನ ಪ್ರೇಕ್ಷಕರು ಕೂಡಾ ಸಿನಿಮಾವನ್ನು ಇಷ್ಟಪಡುತ್ತಿದ್ದಾರೆ’ ಎನ್ನುತ್ತಾರೆ ರಾಕ್‌ಲೈನ್‌ ವೆಂಕಟೇಶ್‌. ಪವನ್‌ ಒಡೆಯರ್‌ ನಿರ್ದೇಶಿಸಿರುವ ಈ ಚಿತ್ರದಲ್ಲಿ ಪುನೀತ್‌ರಾಜಕುಮಾರ್‌, ರಚಿತಾ ರಾಮ್‌, ಅನುಪಮಾ, ಬಿ.ಸರೋಜಾದೇವಿ, ರವಿಶಂಕರ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.  

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.