ನವರಸ ನಟನಾ ಸಂಸ್ಥೆ


Team Udayavani, Feb 7, 2018, 10:39 AM IST

Navarasa_(107).jpg

ನೃತ್ಯ ನಿರ್ದೇಶಕ ಮಾಲೂರು ಶ್ರೀನಿವಾಸ್‌ ಈ ಹಿಂದೆ ನೃತ್ಯ ತರಬೇತಿ ಶಾಲೆ ನಡೆಸುತ್ತಿದ್ದರು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟು, ಸಿನಿಮಾ ನಟನ ತರಬೇತಿ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ ಅವರಿಟ್ಟ ಹೆಸರು ನವರಸ ನಟನಾ ಅಕಾಡೆಮಿ ಚಲನಚಿತ್ರ ತರಬೇತಿ ಸಂಸ್ಥೆ. ಇತ್ತೀಚೆಗೆ ಈ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು  ಮತ್ತು ನಟಿ ತಾರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಾಲೂರು ಶ್ರೀನಿವಾಸ್‌ ಅವರ ಡ್ಯಾನ್ಸ್‌ ಸ್ಕೂಲ್‌ಗೆ ಒಮ್ಮೆ ಭೇಟಿ ನೀಡಿದ ಶಿವರಾಜಕುಮಾರ್‌, ಕೇವಲ ಡ್ಯಾನ್ಸ್‌ ಕ್ಲಾಸಿಗೆ ಮೀಸಲಿರಿಸದೆ ನಟನೆ ತರಬೇತಿಯನ್ನು ಶುರು ಮಾಡುವಂತೆ ಸಲಹೆ ನೀಡಿದರಂತೆ.

ಅದರಂತೆ ಈಗ ನಟನಾ ತರಬೇತಿ ಸಂಸ್ಥೆಯನ್ನು ಆರಂಭಿಸಿದ್ದಾಗಿ ಹೇಳುತ್ತಾರೆ ಮಾಲೂರು ಶ್ರೀನಿವಾಸ್‌.  ಇಲ್ಲಿ ಸಿನಿಮಾಕ್ಕೆ ಸಂಬಂಧಿಸಿದಂತೆ 24 ವಿಭಾಗಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿಸಲಾಗುತ್ತದೆ. ಕಥೆಯ ಚರ್ಚೆ ಹೇಗೆ ನಡೆಯುತ್ತದೆ, ಕಥೆ ಹೇಗೆ ಕಟ್ಟಬೇಕು, ಚಿತ್ರಕಥೆ ಮಾಡುವುದು ಹೇಗೆ ಎಂಬಲ್ಲಿಂದ ಹಿಡಿದು, ಸಿನಿಮಾ ಮಾರುಕಟ್ಟೆಗೆ ತರುವವರೆಗೂ ಹೇಳಿಕೊಡಲಾಗುತ್ತದೆ.

ಅದರಲ್ಲಿ ಪೋಸ್ಟರ್‌ ಹಚ್ಚುವವನಿಂದ ಹಿಡಿದು, ಎಲ್ಲಾ ವಿಭಾಗ ಬಗ್ಗೆಯೂ ಪಾಠ ಮತ್ತು ಪ್ರಯೋಗ ಕುರಿತು ಹೇಳಲಾಗುತ್ತದೆ. ಶಾಲೆಗೆ ಎಲ್ಲಾ ವಿಭಾಗದ ನುರಿತರನ್ನು ಆಹ್ವಾನಿಸಿ, ವಿದ್ಯಾರ್ಥಿಗಳಿಗೆ ಅವರಿಂದ ಪಾಠ ಮಾಡಿಸಲಾಗುತ್ತದೆ. ಅದು ಸ್ಟಂಟ್‌ ಮಾಸ್ಟರ್, ಗೀತಸಾಹಿತಿಗಳು, ಕಾಸ್ಟೂéಮ್‌ ಡಿಸೈನರ್, ಕಲಾನಿರ್ದೇಶನ ಸೇರಿದಂತೆ ಇತರೆ ವಿಭಾಗಗಳ ಕುರಿತು ಅಲ್ಲಿ ಹೇಳಿಕೊಡಲಾಗುತ್ತದೆ. ಒಬ್ಬ ನಟನಾಗುವವನಿಗೆ ಏನೆಲ್ಲಾ ಅರ್ಹತೆಗಳಿರಬೇಕು.

ಕೇವಲ ದೇಹ ಸೌಂದರ್ಯ ಇದ್ದ ಮಾತ್ರಕ್ಕೆ ಹೀರೋ ಆಗೋಕೆ ಸಾಧ್ಯವಿಲ್ಲ. ಆದರೆ, ಅಭಿನಯ ಹೇಗೆ ಕಲಿಯಬೇಕು. ಡೈಲಾಗ್‌ ಹೇಗೆ ಹೇಳಬೇಕು. ನವರಸವನ್ನು ಹೇಗೆಲ್ಲಾ ವ್ಯಕ್ತಪಡಿಸಬೇಕೆಂಬುದು ಶಾಲೆಯಲ್ಲಿ ಹೇಳಿಕೊಡಲಾಗುತ್ತದೆ. ಅದರೊಂದಿಗೆ ಹೀರೋ ಆಗುವವರಿಗೆ ವಾಯ್ಸ ಡಬ್ಬಿಂಗ್‌ ಮಾಡುವುದು ಹೇಗೆ, ನಟರು ಹೇಗೆಲ್ಲಾ ನಟನೆ ಮಾಡ್ತಾರೆ, ಡಬ್ಬಿಂಗ್‌ ಮಾಡ್ತಾರೆ ಎಂಬುದನ್ನು ತಿಳಿದುಕೊಳ್ಳಲು ಸ್ಟುಡಿಯೋ ಭೇಟಿ ಕೂಡ ಮಾಡಲಾಗುತ್ತದೆ ಎಂದು ಸಂಸ್ಥೆಯ ಬಗ್ಗೆ ವಿವರ ನೀಡಿದರು. 

ಆರು ತಿಂಗಳ ಅವಧಿಯ ಕೋರ್ಸ್‌ಗೆ  20 ಹುಡುಗಿಯರು ಸೇರಿದಂತೆ 110 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.ಪ್ರತಿಭಾವಂತ ವಿದ್ಯಾರ್ಥಿಗಳಿಂದ  ಕತೆ, ಸಾಹಿತ್ಯ, ಚಿತ್ರಕತೆಯನ್ನು ಬರೆಸಿ ಅವರಿಂದಲೇ ಕಿರುಚಿತ್ರವನ್ನು ನಿರ್ದೇಶಿಸಲು ಅವಕಾಶ ಮಾಡಿಕೊಡುವ ಉದ್ದೇಶವೂ ಇದೆಯಂತೆ. ಸಂಸ್ಥೆಯ ಪ್ರಾಂಶುಪಾಲರಾಗಿ ನಿರ್ದೇಶಕ ಎಸ್‌.ನಾರಾಯಣ್‌ ಹಾಗೂ ಪ್ರಧಾನ ನಿರ್ದೇಶಕರಾಗಿ ಎಸ್‌.ಮಹೇಂದರ್‌  ಇದ್ದಾರೆ. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.