ನವೀನ್‌ ಸಜ್ಜು ಈಗ ಹೀರೋ

"ಕೆಮಿಸ್ಟ್ರಿ' ನಿರ್ದೇಶಕನ "ಚಾರ್ಲಿ ಚಾಪ್ಲಿನ್‌'

Team Udayavani, May 15, 2019, 3:00 AM IST

naveen-sajju

“ಚಾರ್ಲಿ ಚಾಪ್ಲಿನ್‌…’ ಚೇತೋಹಾರಿ ಹಾಸ್ಯಕ್ಕೆ ಮತ್ತೊಂದು ಹೆಸರೇ ಈ ಚಾರ್ಲಿ ಚಾಪ್ಲಿನ್‌. ಹೌದು, ಇಲ್ಲೇಕೆ ಚಾರ್ಲಿ ಚಾಪ್ಲಿನ್‌ ಹೆಸರು ಪ್ರಸ್ತಾಪ ಎಂಬ ಪ್ರಶ್ನೆ ಕಾಡಬಹುದು. ಅದಕ್ಕೆ ಉತ್ತರ ಮತ್ತದೇ “ಚಾರ್ಲಿ ಚಾಪ್ಲಿನ್‌’. ಅಂದರೆ, ಕನ್ನಡದಲ್ಲಿ ಸೆಟ್ಟೇರಲು ತಯಾರಾಗುತ್ತಿರುವ ಹೊಸ ಚಿತ್ರದ ಹೆಸರಿದು. ಅಂದಹಾಗೆ, ಈ ಚಿತ್ರವನ್ನು ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ.

ಯಾವ ಕುಮಾರ್‌ ಅಂದರೆ, “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರ ತೋರಿಸಬೇಕು. ಆ ಚಿತ್ರ ಈಗ ಅರ್ಧ ಶತಕ ದಾಟಿ ಸಂಭ್ರಮದಲ್ಲಿರುವ ಬೆನ್ನಲ್ಲೇ ನಿರ್ದೇಶಕರು, “ಚಾರ್ಲಿ ಚಾಪ್ಲಿನ್‌’ ಹಿಂದೆ ಬಂದಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಅವರದೇ. ಈ ಚಿತ್ರಕ್ಕೆ ನವೀನ್‌ ಸಜ್ಜು ಹೀರೋ. ಗಾಯಕ ಆಗಿದ್ದ ನವೀನ್‌ ಸಜ್ಜು ಸಂಗೀತ ನಿರ್ದೇಶಕರಾಗಿಯೂ ಗುರುತಿಸಿಕೊಂಡರು.

“ಬಿಗ್‌ಬಾಸ್‌’ ಮನೆಗೆ ಕಾಲಿಟ್ಟು ಬಂದ ಬಳಿಕ ಹೀರೋ ಆಗಿಯೂ ಅದೃಷ್ಟ ಒಲಿದು ಬಂದಿದೆ. ಗಾಯಕರಾಗಿ ಸೈ ಎನಿಸಿಕೊಂಡಿದ್ದ ಅವರು ತೆರೆಯ ಮೇಲೆ ಹೇಗೆ ಕಾಣುತ್ತಾರೆ ಎಂಬ ಕುತೂಹಲಕ್ಕೆ ಸಿನಿಮಾ ಬರುವವರೆಗೆ ಕಾಯಲೇಬೇಕು. ಇನ್ನು, ಇಲ್ಲೂ ಸಹ ಹಾಸ್ಯ ನಟ ತಬಲಾನಾಣಿ ಅವರು ಪ್ರಮುಖ ಆಕರ್ಷಣೆ.

“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದಲ್ಲಿ ಒಂದು ರೀತಿ ಹೀರೋ ಎಂದೇ ಕರೆಸಿಕೊಂಡಿದ್ದ ತಬಲಾನಾಣಿ, ಇಲ್ಲೂ ತಮ್ಮ ಎಂದಿನ ಹಾಸ್ಯ ಮಾತುಗಳ ಮೂಲಕ ಮೋಡಿ ಮಾಡುವ ಲಕ್ಷಣಗಳಿವೆ. ಉಳಿದಂತೆ ಚಿತ್ರದಲ್ಲಿ ಇನ್ನೂ ಎರಡು ಪ್ರಮುಖ ಪಾತ್ರಗಳಿದ್ದು, ಆ ಪಾತ್ರಕ್ಕೆ ಹುಡುಕಾಟ ನಡೆದಿದೆ. ಇಲ್ಲಿ ನಾಯಕಿಗೂ ಪ್ರಮುಖ ಜಾಗ ಕಲ್ಪಿಸಿರುವ ನಿರ್ದೇಶಕರು, ಆಕೆಗೆ ಹುಡುಕಾಟ ನಡೆಸಿದ್ದಾರೆ.

ಎಲ್ಲಾ ಸರಿ, “ಚಾರ್ಲಿ ಚಾಪ್ಲಿನ್‌’ ಹೆಸರೇ ಯಾಕೆ? ಈ ಪ್ರಶ್ನೆಗೆ ಉತ್ತರಿಸುವ ನಿರ್ದೇಶಕ ಕುಮಾರ್‌, ಇದೊಂದು ಹಾಸ್ಯಭರಿತ ಕಥೆ. ಆರಂಭದಿಂದ ಅಂತ್ಯದವರೆಗೂ ನಗಿಸುತ್ತಲೇ ಕಥೆ ಸಾಗಲಿದೆ. ನಗು ಅಂದಾಕ್ಷಣ, ನೆನಪಾಗೋದೇ ಚಾರ್ಲಿ ಚಾಪ್ಲಿನ್‌. ಹಾಗಾಗಿ ಕಥೆಗೆ ಪೂರಕವಾಗಿರುತ್ತೆ ಎಂಬ ಕಾರಣಕ್ಕೆ ಆ ಶೀರ್ಷಿಕೆ ಇಡಲಾಗಿದೆ. ಇದೊಂದು ಜರ್ನಿ ಕಥೆ.

ಬೆಂಗಳೂರಿನಿಂದ ಮಡಿಕೇರಿವರೆಗೆ ನಡೆಯುವ ಜರ್ನಿಯಲ್ಲಿ ಕಾಣುವ ದೃಶ್ಯಗಳು, ಪಾತ್ರಗಳು, ಮಾತುಗಳು ಎಲ್ಲವೂ ನಗು ತರಿಸುತ್ತಲೇ ಸಾಗುತ್ತವೆ . ಬೆಂಗಳೂರು, ಶ್ರವಣಬೆಳಗೊಳ, ಮಡಿಕೇರಿ ಸುತ್ತಮುತ್ತ ಸುಮಾರು 45 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು. ಚಿತ್ರಕ್ಕೆ ಶಿವಸೇನ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.