ಪ್ರಚಾರಕ್ಕೆ ಬಾರದ ಅಂತಹ ನಟಿಯರು ಬೇಕಾ?


Team Udayavani, Nov 28, 2017, 1:27 PM IST

sam-shetty.jpg

“ತೊಂಭತ್ತು ದಿನ ಹೊಟ್ಟೆಗೆ ಅನ್ನಹಾಕಿ, ಹೇಳಿದಷ್ಟು ಸಂಭಾವನೆ ಕೊಟ್ಟು, ಕೇಳಿದ ಕಾಸ್ಟೂಮ್ಸ್‌ ಕೊಡಿಸಿ, ಅವರಿಗೊಂದು ಸಪರೇಟ್‌ ಕ್ಯಾರವಾನ್‌ ತರಿಸಿ, ಚೆನ್ನಾಗಿ ನೋಡಿಕೊಂಡರೂ ಆ ನಟಿ ದ್ರೋಹ ಬಗೆದಿದ್ದಾರೆ…’ ಹೀಗೆ ಕೊಂಚ ಗರಂ ಆಗಿಯೇ ಹೇಳಿಕೊಂಡರು ನಿರ್ಮಾಪಕ ಪದ್ಮನಾಭ್‌. ಅವರು ಹೇಳಿದ್ದು “ಕಾಲೇಜ್‌ ಕುಮಾರ’ ಸಿನಿಮಾ ನಾಯಕಿ ಸಂಯುಕ್ತ ಹೆಗ್ಡೆ ಬಗ್ಗೆ. 

ಹೌದು, ಸಂಯುಕ್ತ ಹೆಗ್ಡೆ ಮೇಲೆ ನಿರ್ಮಾಪಕ ಪದ್ಮನಾಭ್‌ ಬೇಸರಿಸಿಕೊಂಡಿದ್ದಾರೆ. ಅವರಷ್ಟೇ ಅಲ್ಲ, ಇಡೀ ಚಿತ್ರತಂಡವೇ ಸಂಯುಕ್ತ ಹೆಗ್ಡೆ ಅವರ ವರ್ತನೆ ಕುರಿತು ಬೇಸರ ಹೊರಹಾಕಿದ್ದಾರೆ. ಇಷ್ಟಕ್ಕೂ ಪದ್ಮನಾಭ್‌ ಅವರು ಸಂಯುಕ್ತ ಹೆಗ್ಡೆ ಮೇಲೆ ಕೋಪಿಸಿಕೊಳ್ಳಲು ಕಾರಣವೇನು ಗೊತ್ತಾ? ಸಂಯುಕ್ತ ಸಿನಿಮಾ ಪ್ರಚಾರಕ್ಕೆ ಬರದೇ ಇದ್ದದ್ದು, ಆರಂಭದಿಂದಲೂ ಒಂದಲ್ಲ ಒಂದು ಸಮಸ್ಯೆ ಹುಟ್ಟುಹಾಕಿದ್ದು. ಆ ನಟಿ ಕುರಿತು ಪದ್ಮನಾಭ್‌ ಹೇಳಿದ್ದಿಷ್ಟು.

“ಕಲೆಗೆ ಬೆಲೆ ಕೊಡದವರು, ನಿರ್ಮಾಪಕರ ಕಷ್ಟ ಅರ್ಥ ಮಾಡಿಕೊಳ್ಳದವರು, ತನ್ನ ಸಿನಿಮಾ ಅಂತ ಪ್ರೀತಿಸದ ನಟಿಯ ಮೇಲೆ ಈ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ನಾನು ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ, ಕಲಾವಿದರ ಸಂಘಕ್ಕೆ ದೂರು ನೀಡುತ್ತೇನೆ. ಮೊದಲ ದಿನದಿಂದಲೂ ಸಂಯುಕ್ತ ಹೆಗ್ಡೆ ಚಿತ್ರಕ್ಕೆ ಸಮಸ್ಯೆ ಮಾಡುತ್ತಲೇ ಬಂದಿದ್ದಾರೆ. ನಿರ್ಮಾಪಕರ ಕಷ್ಟ ಏನು ಅಂತ ಅವರಿಗೆ ಗೊತ್ತಿಲ್ಲ.

ನನ್ನ ಸಿನಿಮಾ ಮೂಲಕ ನಾಯಕಿ ಪಟ್ಟ ಪಡೆದ ಆ ಹುಡುಗಿಗೆ ನಿರ್ಮಾಪಕರ ಸಮಸ್ಯೆ ಗೊತ್ತಿಲ್ಲ.  ಒಂದು ಚಿತ್ರಕ್ಕೆ ಹೇಗೆ ಕೆಲಸ ಮಾಡಬೇಕು ಎಂಬುದರ ಅರಿವಿಲ್ಲ. ಅಂತಹ ನಟಿಯನ್ನು ಹಾಕಿಕೊಂಡು ಸಿನಿಮಾ ಮಾಡುವ ನಿರ್ಮಾಪಕ, ನಿರ್ದೇಶಕರಿಗೆ ಸಮಸ್ಯೆ ಹೆಚ್ಚು. ಯಾರೂ ಸಹ ಅಂತಹ ನಟಿಗೆ ಸಹಕಾರ ಕೊಡಬೇಡಿ’ ಎಂದರು ಪದ್ಮನಾಭ್‌. ಸಂಯುಕ್ತ ಹೆಗ್ಡೆ ಇದ್ದರೆ ಜನ ಸಿನಿಮಾ ನೋಡ್ತಾರೆ ಎಂಬ ಭ್ರಮೆ ಅವರಲ್ಲಿದೆ ಎಂದ ಪದ್ಮನಾಭ್‌, “ಅವರೊಬ್ಬರಿಂದಲೇ ಸಿನಿಮಾ ಆಗುವುದಿಲ್ಲ.

ಸೆಟ್‌ನಲ್ಲಿ ಲೈಟ್‌ಬಾಯ್‌ನಿಂದ ಹಿಡಿದು, ಕಲಾವಿದರು, ತಂತ್ರಜ್ಞರಿಂದ ಸಿನಿಮಾ ಆಗುತ್ತೆ. ಅವರಿಗೆ ಪ್ರಾಮಾಣಿಕತೆ ಇಲ್ಲ. ನಮ್ಮ ಸಿನಿಮಾದ ಪ್ರಚಾರ ಕಾರ್ಯಕ್ಕೆ ಬಂದಿಲ್ಲ, ಅವರಿಗೆ ಸಿನಿಮಾ ಹಾಗೂ ನಿರ್ಮಾಪಕರ ಮೇಲೆ ಕಾಳಜಿ ಇಲ್ಲ. ಅವರು ಕೇಳಿದ್ದನ್ನೆಲ್ಲಾ ಕೊಟ್ಟಿದ್ದೇವೆ. ಕಾಲ್‌ಶೀಟ್‌ನಲ್ಲೂ ಸಹ ಪ್ರಚಾರಕ್ಕೆ ಬರಬೇಕು ಅಂತಾನೂ ಅಗ್ರಿಮೆಂಟ್‌ ಮಾಡಿಸಿಕೊಳ್ಳಲಾಗಿದೆ. ಇದುವರೆಗೆ ಚಿತ್ರರಂಗಕ್ಕೆ ಅವರ ಕೊಡುಗೆ ಏನಿದೆ?

ಇನ್ನು ಬೆಳೆದೇ ಇಲ್ಲ, ಈಗಲೇ ಹೀಗೆ ಮಾಡಿದರೆ, ಮುಂದೆ ಬೇರೆ ಸಿನಿಮಾಗಳ ನಿರ್ಮಾಪಕ, ನಿರ್ದೇಶಕರ ಗತಿ ಏನು? ಮುಂದೆ ಸಂಯುಕ್ತ ಹೆಗ್ಡೆ ನಾಯಕಿ ಮಾಡಿ ಸಿನಿಮಾ ಮಾಡುವ ಮುನ್ನ ನಿರ್ಮಾಪಕರು ಯೋಚಿಸಬೇಕು. ಕನ್ನಡದಲ್ಲಿ ಬಹಳಷ್ಟು ಒಳ್ಳೆಯ ನಟಿಯರಿದ್ದಾರೆ. ನಿರ್ಮಾಪಕ,ನಿರ್ದೇಶಕರ ಮೇಲೆ ಕಾಳಜಿ ಇಟ್ಟುಕೊಂಡ ಅನೇಕರು ಸಿಗುತ್ತಾರೆ ಅಂತಹವರಿಗೆ ಸಹಕಾರ ಕೊಡಿ’ ಎಂದು ಮನವಿ ಇಟ್ಟರು ಪದ್ಮನಾಭ್‌.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.