ಮೊದಲ ಹಂತದ ಚಿತ್ರೀಕರಣ ಮುಗಿಸಿದ “ನ್ಯೂರಾನ್’
Team Udayavani, Dec 5, 2018, 11:15 AM IST
ಫ್ರೆಂಡ್ಸ್ ಪ್ರೊಡಕ್ಷನ್ ಲಾಂಚನದಲ್ಲಿ ತಯಾರಾಗುತ್ತಿರುವ “ನ್ಯೂರಾನ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸಕಲೇಶಪುರ, ಕೊಡಗು ಮುಂತಾದ ಕಡೆ ಚಿತ್ರಕ್ಕೆ 25 ದಿನಗಳ ಚಿತ್ರೀಕರಣ ನಡೆದಿದೆ. “ಎಡಕಲ್ಲು ಗುಡ್ಡದ ಮೇಲೆ” ಚಿತ್ರದ ನಂತರ ಹುಚ್ಚಂಗಿ ಬೆಟ್ಟದ ಮೇಲೆ “ನ್ಯೂರಾನ್” ಚಿತ್ರದ ಚಿತ್ರೀಕರಣವಾಗಿರುವುದು ವಿಶೇಷ. ಜೈಜಗದೀಶ್, ಅರಂದ್ ರಾಜ್, ಯುವ, ನೇಹಾ ಪಾಟೀಲ್, ವೈಷ್ಣ ಮೆನನ್, ಶಿಲ್ಪಾ ಶೆಟ್ಟಿ, ರಾಕ್ಲೈನ್ ಸುಧಾಕರ್, ಕಾರ್ತಿಕ್ ಮಂಗಳೂರು ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಸಿದ್ದರು.
ಮಾತಿನ ಭಾಗದ ಚಿತ್ರೀಕರಣ ಸೇರಿದಂತೆ ಒಂದು ಹಾಡಿನ ಚಿತ್ರೀಕರಣ ಈ ಹಂತದಲ್ಲಿ ನಡೆದಿದೆ. ಕಾಸ್ ಪುಷ್ಪಗಿರಿ ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. ಈ ಹಿಂದೆ ಡೇಂಜರೊನ್ ಮತ್ತು ನಿಶ್ಯಬ್ದ-2 ಚಿತ್ರಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಕಾಸ್ಗೆ ನ್ಯೂರಾನ್ ಮೊದಲ ನಿರ್ದೇಶನದ ಚಿತ್ರ. ಈ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಹೊಸದಾಗಿ ಪರಿಚಯವಾಗುತ್ತಿದ್ದಾರೆ. ಇನ್ನುಳಿದಂತೆ ನೇಹಾ ಪಾಟೀಲ್ ನಾಯಕಿಯಾಗಿ ಕಾಣಿಸಿಕೊಂಡಿದ್ಧಾರೆ. ವೈಷ್ಣವಿ ಮೆನನ್ ಪ್ರಮುಖ ಪಾತ್ರದಲ್ಲಿದ್ದಾರೆ.
ರಾಮಕೃಷ್ಣ, ಜೈಜಗದೀಶ್, ಅರಂದರಾಜ್, ವರ್ಷ, ರಾಕ್ಲೈನ್ ಸುಧಾಕರ್, ಕಾರ್ತಿಕ್ ಮಂಗಳೂರು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ವಿಕಾಸ್ ಪುಷ್ಪಗಿರಿ ಅವರೇ ಚಿತ್ರಕತೆ ಬರೆದಿದ್ದಾರೆ. ಅಲ್ಲದೆ ಸ್ನೇಹಿತನೊಂದಿಗೆ ಸೇರಿಕೊಂಡು ಕತೆ ಬರೆಯುವಲ್ಲಿಯೂ ಶ್ರಮ ಹಾಕಿದ್ಧಾರೆ. ಗುರುಕಿರಣ್ ಸಂಗೀತ ನೀಡುತ್ತಿದ್ದು, ಹೈದರಾಬಾದ್ನ ಶೋಯಬ್ ಅಹಮದ್ ಛಾಯಾಗ್ರಹಣ, ಶ್ರೀಧರ್ ವೈ ಎಸ್ ಸಂಕಲನ, ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನದೆ. ಡಾ| ನಾಗೇಂದ್ರ ಪ್ರಸಾದ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಶ್ರೀಹರ್ಷ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ