ಅಖಾಡಕ್ಕೆ ಇಳಿದ ಹೊಸಬರು: ಸೆಪ್ಟೆಂಬರ್‌ನಲ್ಲಿ ನವವೈಭವ


Team Udayavani, Sep 4, 2021, 1:15 PM IST

ಅಖಾಡಕ್ಕೆ ಇಳಿದ ಹೊಸಬರು: ಸೆಪ್ಟೆಂಬರ್‌ನಲ್ಲಿ ನವವೈಭವ

ನೋಡುವಷ್ಟು ನೋಡಿ, ಹೊಸಬರು ಅಖಾಡಕ್ಕೆ ಇಳಿದೇ ಬಿಟ್ಟಿದ್ದಾರೆ. ಹೌಸ್‌ಫ‌ುಲ್‌ ಪ್ರದರ್ಶನದ ಅನುಮತಿಗೆ ಕಾದು ಸುಸ್ತಾದ ಹೊಸಬರು ಗಟ್ಟಿ ನಿರ್ಧಾರ ಮಾಡಿ, ತಮ್ಮ ಸಿನಿಮಾಗಳ ಬಿಡುಗಡೆಗೆ ಮುಂದಾಗಿದ್ದಾರೆ. ಈ ಮೂಲಕ  ಸೆಪ್ಟೆಂಬರ್‌ ತಿಂಗಳನ್ನು ಪೂರ್ತಿ ಹೊಸಬರು ತಮ್ಮದಾಗಿಸಿ ಕೊಳ್ಳಲಿದ್ದಾರೆ.

ಹಾಗೆ ನೋಡಿದರೆ ಸೆ.10ಕ್ಕೆ ಶಿವ ರಾಜ್‌ಕುಮಾರ್‌ ಅಭಿನಯದ “ಭಜರಂಗಿ-2′ ಚಿತ್ರ ತೆರೆ ಕಾಣಬೇಕಿತ್ತು. ಆದರೆ, ಹೌಸ್‌ಫ‌ುಲ್‌ ಪ್ರದರ್ಶನಕ್ಕೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ. ಇದು ಶಿವಣ್ಣ ಅಭಿಮಾನಿಗಳಿಗೆ ಬೇಸರ ‌ ತಂದಿರಬಹುದು. ಆದರೆ, ‌ ಒಂದಷ್ಟು ಹೊಸಬರ ಸಿನಿಮಾಗಳು ಮಾತ್ರ ಈ ಗ್ಯಾಪ್‌ನಲ್ಲಿ ಬಿಡುಗಡೆ ಮಾಡಲು ಮುಂದಾಗಿವೆ. ಈಗಾಗಲೇ “ಲಂಕೆ’, “ಓಶೋ’, “ಆಶ್ಚರ್ಯ’, “ಚಡ್ಡಿದೋಸ್ತ್’, “ಜಿಗ್ರಿ ದೋಸ್ತ್’ ಸೇರಿದಂತೆ ಇನ್ನೂ ಒಂದಷ್ಟು ಸಿನಿಮಾಗಳು ಈ ತಿಂಗಳಲ್ಲೇ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ.

ಇದನ್ನೂ ಓದಿ:ಇಂದು ಅನಂತ್‌ನಾಗ್‌ ಬರ್ತ್‌ಡೇ: ಎವರ್‌ಗ್ರೀನ್‌ ಹೀರೋ ಕೈಯಲ್ಲಿ ವಿಭಿನ್ನ ಪಾತ್ರಗಳು

ಇದರಲ್ಲಿ ಯೋಗಿ ಅಭಿನಯದ “ಲಂಕೆ’ಯೊಂದು ಬಿಟ್ಟರೆ ಮಿಕ್ಕಂತೆ ಬಹುತೇಕ ಸಿನಿಮಾಗಳು ಹೊಸಬರದ್ದೇ ಆಗಿವೆ. ಸೆ.10ಕ್ಕೆ ಯೋಗಿ ಅಭಿನಯದ “ಲಂಕೆ’, “ಓಶೋ’ ಹಾಗೂ “ಆಶ್ಚರ್ಯ’ ಎಂಬ ಚಿತ್ರಗಳು ತೆರೆಕಾಣಲಿವೆ. ಸೆ.17ರಂದು “ಚಡ್ಡಿದೋಸ್ತ್’, “ಜಿಗ್ರಿದೋಸ್ತ್’ ಚಿತ್ರಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ಇದರ ಜೊತೆಗೆ ಇನ್ನೊಂದೆರಡು ಚಿತ್ರಗಳು ಕೂಡಾ ಬಿಡುಗಡೆಗೆ ಬರುವ ಸಾಧ್ಯತೆ ಇದೆ.

ಯಾಕೆ ಈ ನಿರ್ಧಾರ: ಕನ್ನಡ ಚಿತ್ರರಂಗದಲ್ಲಿ ಹೊಸಬರ ಸಿನಿಮಾಗಳು ಸಂಕಷ್ಟ ಎದುರಿಸುತ್ತಲೇ ಬರುತ್ತಿವೆ. ಅದು ರಿಲೀಸ್‌ ಸಮಯದಲ್ಲಿ. ಸ್ಟಾರ್‌ ಸಿನಿಮಾಗಳ ಮಧ್ಯೆ ರಿಲೀಸ್‌ ಆದರೂ ಸಮಸ್ಯೆ, ಹೊಸಬರ ನಾಲ್ಕೈದು ಚಿತ್ರಗಳ ಜೊತೆ ರಿಲೀಸ್‌ ಆದರೂ ಸಮಸ್ಯೆ. ಚಿತ್ರಮಂದಿರಗಳಿಗಾಗಿ “ಹೋರಾಟ’ ಮಾಡಬೇಕಾದ ಅನಿವಾರ್ಯತೆ. ಜೊತೆಗೆ ಚಿತ್ರಮಂದಿರಗಳ ಬಾಡಿಗೆ. ಈ ಎಲ್ಲಾ ಕಾರಣಗಳಿಂದಾಗಿ ಹೊಸಬರಿಗೆ ಸದ್ಯದ ಪರಿಸ್ಥಿತಿ ಸೂಕ್ತವಾಗಿದೆ. ಅತ್ತ ಕಡೆ ಚಿತ್ರಮಂದಿರಗಳು ಸಿಗುತ್ತವೆ, ಮಲ್ಟಿಪ್ಲೆಕ್ಸ್‌ಗಳಲ್ಲೂ ಶೋಗಳಿಗೆ ಅವಕಾಶವಿದೆ. ಜೊತೆಗೆ ಆರ್ಥಿಕವಾಗಿ ಹೊರೆಯೂ ಕಡಿಮೆಯಾಗುತ್ತದೆ. ಹೀಗಾಗಿ, ಸೆಪ್ಟೆಂಬರ್‌ನಲ್ಲಿ ಹೊಸಬರು ತಮ್ಮ ಸಿನಿಮಾಗಳನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ.

ಸ್ಪಷ್ಟತೆ ಇಲ್ಲದ ಸ್ಟಾರ್ ರಿಲೀಸ್‌: ಸ್ಟಾರ್‌ ಸಿನಿಮಾಗಳ ಬಿಡುಗಡೆ ಯಾವಾಗ ಎಂದು ಕೇಳಿದರೆ ಸದ್ಯಕ್ಕೆ ಉತ್ತರಿಸೋದು ಕಷ್ಟ. ಏ‌ಕೆಂದರೆ ಸ್ಟಾರ್‌ ಸಿನಿಮಾಗಳ ನಿರ್ಮಾಪಕರು ಚಿತ್ರಮಂದಿರಗಳ ಹೌಸ್‌ಫ‌ುಲ್‌ ಪ್ರದರ್ಶನದ ಅನುಮತಿಗೆ ಕಾಯುತ್ತಿದ್ದಾರೆ. ಅನುಮತಿ ಸಿಕ್ಕ ಬಳಿಕ ಯಾವ ಸ್ಟಾರ್‌ ಸಿನಿಮಾ ಮೊದಲು ಬಿಡುಗಡೆಯಾಗುತ್ತದೆ ಎಂಬ ಸ್ಪಷತೆ ಇನ್ನೂ ಸಿಕ್ಕಿಲ್ಲ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.