“ಕಂಟ್ರಿಮೇಡ್‌ ಚಾರಿ’ಯ ಹೊಸ ಅವತಾರ

ಪುಷ್ಪಕ ವಿಮಾನ ನಿರ್ದೇಶಕರ ಮತ್ತೊಂದು ಚಿತ್ರ

Team Udayavani, Jun 24, 2019, 3:00 AM IST

Country-made

ಕನ್ನಡದಲ್ಲಿ ದಿನ ಕಳೆದಂತೆ ಹೊಸ ಹೀರೋಗಳ ಎಂಟ್ರಿಯಾಗುತ್ತಿದೆ. ಅಷ್ಟೇ ಅಲ್ಲ, ಹೊಸ ಬಗೆಯ ಕಥೆ ಇರುವ ಚಿತ್ರಗಳು ಬರುತ್ತಿರುವುದು ವಿಶೇಷ. ಆ ಸಾಲಿಗೆ ಈಗ “ಕಂಟ್ರಿಮೇಡ್‌ ಚಾರಿ’ ಎಂಬ ಹೊಸ ಚಿತ್ರವೊಂದು ಸೇರ್ಪಡೆಯಾಗುತ್ತಿದೆ. ಅಂದಹಾಗೆ, ಈ ಚಿತ್ರವನ್ನು ಎಸ್‌.ರವೀಂದ್ರನಾಥ್‌ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ರಮೇಶ್‌ ಅರವಿಂದ್‌ ಹಾಗು ರಚಿತಾರಾಮ್‌ ಅಭಿನಯಿಸಿದ್ದ “ಪುಷ್ಪಕ ವಿಮಾನ’ ಚಿತ್ರವನ್ನು ನಿರ್ದೇಶಿಸಿದ್ದರು.

ಈಗ “ಕಂಟ್ರಿಮೇಡ್‌ ಚಾರಿ’ ಚಿತ್ರದ ಹಿಂದೆ ನಿಂತಿದ್ದಾರೆ. “ಕಂಟ್ರಿಮೇಡ್‌’ ಅಂದಾಕ್ಷಣ, ಕಂಟ್ರಿಮೇಡ್‌ ಪಿಸ್ತೂಲ್‌ ಪದ ನೆನಪಾಗದೇ ಇರದು. ಹಾಗಂತ, ಇದೊಂದು ಅಂಡರ್‌ವರ್ಲ್ಡ್ ಸಿನಿಮಾ ಇರಬಹುದಾ ಎಂಬ ಪ್ರಶ್ನೆಯೂ ಎದುರಾಗಬಹುದು. ಆದರೆ, ಇದು ಆ ಬಗೆಯ ಚಿತ್ರವಲ್ಲ ಎಂದು ಸ್ಪಷ್ಟಪಡಿಸುವ ನಿರ್ದೇಶಕ ರವೀಂದ್ರನಾಥ್‌, ಇದೊಂದು ಪಕ್ಕಾ ಆ್ಯಕ್ಷನ್‌ ಡ್ರಾಮ ಇರುವ ಚಿತ್ರ. 1995 ಆಸುಪಾಸಿನಲ್ಲಿ ನಡೆಯುವ ಕಥೆ.

ಚಿತ್ರದಲ್ಲಿ ಶಿವಾಂಕ್‌ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅವರು ನಾಯಕರಾಗಿ ನಟಿಸುತ್ತಿರುವ ಮೊದಲ ಚಿತ್ರ. ಈ ಹಿಂದೆ “ಪುಷ್ಪಕ ವಿಮಾನ’ ಮತ್ತು ” ರಣವಿಕ್ರಮ’ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿದ್ದರು. ಕಥೆಯ ಪಾತ್ರಕ್ಕೆ ಸರಿಹೊಂದುತ್ತಾರೆಂಬ ಕಾರಣಕ್ಕೆ ಶಿವಾಂಕ್‌ ಅವರನ್ನಿಲ್ಲಿ ಆಯ್ಕೆ ಮಾಡಲಾಗಿದೆ ಎಂಬುದು ನಿರ್ದೇಶಕರ ಮಾತು. ಚಿತ್ರದಲ್ಲಿ ಹೀರೋ ಹೆಸರು ರಾಘವ ಚಾರಿ. ಆದರೆ, ಅವನು ತನ್ನ ಏರಿಯಾದಲ್ಲಿ ಒಂಥರಾ ರೆಬೆಲ್‌ ಆಗಿರುವ ಹುಡುಗ.

ಅವನು ಏನೇ ಮಾಡಿದರೂ, ಪಕ್ಕಾ ಪ್ಲಾನಿಂಗ್‌ ಮಾಡಿ, ಸದಾ ಎನರ್ಜಿಯಲ್ಲೇ ಕೆಲಸ ಮಾಡುವ ವ್ಯಕ್ತಿ. ಹೇಗೆಂದರೆ, ಒಂದು ರೀತಿ ಕಂಟ್ರಿಮೇಡ್‌ ಪಿಸ್ತೂಲ್‌ನಂತೆ ಕೆಲಸ ಮಾಡುತ್ತಿರುತ್ತಾನೆ. ಹಾಗಾಗಿ ಎಲ್ಲರೂ ಅವನನ್ನು “ಕಂಟ್ರಿಮೇಡ್‌ ಚಾರಿ’ ಎಂದೇ ಕರೆಯುತ್ತಾರೆ. ಇಲ್ಲಿ ಕೆಲವು ನೈಜ ಘಟನೆ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಎಲ್ಲವೂ ನೈಜವಾಗಿ ಕಾಣಬೇಕು ಎಂಬ ಉದ್ದೇಶದಿಂದ, ಪಕ್ಕಾ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸುವ ನಿರ್ದೇಶಕರು,

ಆಗಸ್ಟ್‌ ಮೊದಲ ವಾರದಿಂದ ಚಿತ್ರೀಕರಣಕ್ಕೆ ಹೊರಡುವ ಸಿದ್ಧತೆಯಲ್ಲಿದ್ದಾರೆ. ಸದ್ಯಕ್ಕೆ ನಾಯಕಿಯ ಹುಡುಕಾಟ ನಡೆಯುತ್ತಿದೆ. ಚಿತ್ರಕ್ಕೆ ಗುರು ಕಶ್ಯಪ್‌ ಸಂಭಾಷಣೆ ಬರೆದರೆ, ಎಸ್‌.ಕೆ.ರಾವ್‌ ಛಾಯಾಗ್ರಹಣವಿದೆ. ಹರೀಶ್‌ ಕೊಮ್ಮೆ ಸಂಕಲನ ಮಾಡುತ್ತಿದ್ದಾರೆ. ನೊಬಿನ್‌ ಪಾಲ್‌ ಸಂಗೀತವಿದೆ. ಬೆಂಗಳೂರು, ರಾಮನಗರ, ಬಂಗಾರಪೇಟೆ ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ ಎನ್ನುತ್ತಾರೆ ನಿರ್ದೇಶಕರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.