ಹೊಸ ಇಂದ್ರಧನುಷ್‌


Team Udayavani, May 9, 2018, 11:56 AM IST

hosa-indra.jpg

ಸಂಗೀತ ನಿರ್ದೇಶಕ ವಿ.ಮನೋಹರ್‌, ಕನ್ನಡ ಚಿತ್ರರಂಗದಲ್ಲಿ ಕಳೆದ ಎರಡುವರೆ ದಶಕಗಳಿಂದಲೂ ಸಂಗೀತ ನಿರ್ದೇಶನ ಮತ್ತು ನಟನೆಯಲ್ಲಿ ತೊಡಗಿದವರು. ಈವರೆಗೆ 140 ಚಿತ್ರಗಳಿಗೆ ಸಂಗೀತ ನೀಡಿರುವ ಹೆಗ್ಗಳಿಕೆ ಅವರದು. ಅಷ್ಟೇ ಅಲ್ಲ, ನಟರಾಗಿಯೂ ಗುರುತಿಸಿಕೊಂಡವರು. ಸಂಗೀತ ನಿರ್ದೇಶನದ ಜೊತೆಗೆ “ಓ ಮಲ್ಲಿಗೆ’ ಮತ್ತು “ಇಂದ್ರಧನುಷ್‌’ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡವರು.

ಸದಾ ಒಂದಿಲ್ಲೊಂದು ಚಿತ್ರಗಳಲ್ಲಿ ಸಂಗೀತ ನೀಡುವ ಮೂಲಕ ತಮ್ಮ ಪಾಡಿಗೆ ತಾವು ಸದ್ದಿಲ್ಲದೆಯೇ ಕೆಲಸ ಮಾಡುತ್ತಿರುವ ವಿ.ಮನೋಹರ್‌, ಹದಿನೆಂಟು ವರ್ಷಗಳ ಬಳಿಕ ಹೊಸ ಚಿತ್ರವೊಂದಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಹೌದು, “ಇಂದ್ರಧನುಷ್‌’ ಚಿತ್ರದ ಬಳಿಕ ವಿ. ಮನೋಹರ್‌ ಯಾವುದೇ ಚಿತ್ರವನ್ನೂ ನಿರ್ದೇಶಿಸಿಲ್ಲ. ಮಧ್ಯೆ ಮಧ್ಯೆ ನಿರ್ದೇಶಿಸುವ ಪ್ರಯತ್ನಗಳು ನಡೆದರೂ, ಹಲವು ಕಾರಣಗಳಿಂದ ಅವರು ನಿರ್ದೇಶಿಸಬೇಕಿದ್ದ ಚಿತ್ರಗಳು ಕೈ ತಪ್ಪಿದ್ದುಂಟು.

ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಮನೋಹರ್‌, ಪಾಲಿಗೆ ಬಂದ ಚಿತ್ರಗಳಿಗೆ ಸಂಗೀತ ಕೊಡುವ ಮೂಲಕ ಬಿಝಿ ಸಂಗೀತ ನಿರ್ದೇಶಕರಾಗಿದ್ದಾರೆ. ಈಗ ಹೊಸದೊಂದು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಅವರೇ ನಿರ್ದೇಶನಕ್ಕೂ ಅಣಿಯಾಗಿದ್ದಾರೆ. ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಆದರೆ, ಅದಾಗಲೇ ಸಕಲೇಶಪುರದಲ್ಲಿ ಚಿತ್ರಕ್ಕೆ ಸರಳವಾಗಿ ಮುಹೂರ್ತವೂ ನಡೆದಿದೆ.

ಈ ಬಾರಿ, ಸಾಕಷ್ಟು ತಯಾರಿಯೊಂದಿಗೇ ನಿರ್ದೇಶನಕ್ಕಿಳಿದಿರುವ ಮನೋಹರ್‌ ಅವರು, ತಮ್ಮ ಮೂರನೇ ನಿರ್ದೇಶನದ ಚಿತ್ರವನ್ನು ಹೊಸ ಬಗೆಯ ಚಿತ್ರವನ್ನಾಗಿಸಲು ಪಣತೊಟ್ಟಿದ್ದಾರೆ. ಈ ಬಾರಿ ಮರ್ಡರ್‌ ಮಿಸ್ಟ್ರಿ ಇರುವ ಹಾರರ್‌ ಕಥೆ ಬರೆದಿರುವ ಮನೋಹರ್‌, ಬಹುತೇಕ ಹೊಸ ಪ್ರತಿಭೆಗಳನ್ನೇ ಇಟ್ಟುಕೊಂಡು ಕೆಲಸ ಮಾಡುವ ಉತ್ಸಾಹದಲ್ಲಿದ್ದಾರೆ.

ಹದಿನೆಂಟು ವರ್ಷಗಳ ಬಳಿಕ ಒಂದು ಚಿತ್ರ ನಿರ್ದೇಶನಕ್ಕೆ ಸಜ್ಜಾಗಿರುವ ವಿ.ಮನೋಹರ್‌ ಅವರಿಗೆ ಒಳ್ಳೆಯ ತಂಡವೇ ಸಿಕ್ಕಿದೆ. ಇಡೀ ಚಿತ್ರದ ಕಥೆ ನಾಯಕನ ಮೇಲೆಯೇ ಸಾಗಲಿದೆ. ಸದ್ಯಕ್ಕೆ ಮುಹೂರ್ತ ನಡೆದಿದ್ದು, ಚುನಾವಣೆ ಬಳಿಕ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾ ಆಗಿರುವುದರಿಂದ ಚಿತ್ರದಲ್ಲಿ ಹಾಡುಗಳಿಗೆ ಹೆಚ್ಚು ಜಾಗವಿಲ್ಲ. ಎರಡು ಹಾಡುಗಳು ಚಿತ್ರದಲ್ಲಿರಲಿವೆ. ಇನ್ನು, ಈ ಚಿತ್ರಕ್ಕೆ ಉತ್ತರ ಕನ್ನಡ ಭಾಗದ ಗೆಳೆಯರು ನಿರ್ಮಾಣ ಮಾಡುತ್ತಿದ್ದಾರೆ.

ಸದ್ಯಕ್ಕೆ ಹೊಸ ಚಿತ್ರದ ನಿರ್ದೇಶನದ ಜಪದಲ್ಲಿರುವ ಮನೋಹರ್‌, ಸಂಗೀತ ನಿರ್ದೇಶನದಲ್ಲೂ ಬಿಜಿಯಾಗಿದ್ದಾರೆ. ಅವರ ಕೈಯಲ್ಲೀಗ ಐದು ಚಿತ್ರಗಳಿವೆ. “ವೇಷಧಾರಿ’, “ಸಿಗ್ನೇಚರ್‌’ ಮತ್ತು ಮಂಡ್ಯದ ಹಳ್ಳಿ ಕಥೆ ಹೊಂದಿರುವ “ಕೊಂಟೆ’ ಎಂಬ ಹೊಸ ಚಿತ್ರ ಸೇರಿದಂತೆ ಇನ್ನೂ ಹೊಸಬರ ಎರಡು ಚಿತ್ರಗಳಿವೆ. ಇದರ ನಡುವೆ ರಾಮ್‌ಶೆಟ್ಟಿ ನಿರ್ದೇಶನದ ತುಳು ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ ಮನೋಹರ್‌.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.