ಅನು ಪ್ರಭಾಕರ್‌ ಹೊಸ ಇನ್ನಿಂಗ್ಸ್‌

ಸಾರಾ ಅಬೂಬಕ್ಕರ್‌ ಕಾದಂಬರಿಗೆ ದೃಶ್ಯರೂಪ

Team Udayavani, Feb 22, 2020, 7:01 AM IST

Saara-Vajra

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಕಾದಂಬರಿ ಆಧಾರಿತ ಸಿನಿಮಾಗಳು ಬಂದಿವೆ. ಆ ಸಾಲಿಗೆ ಈಗ ಸಾರಾ ಅಬೂಬಕ್ಕರ್‌ ಅವರ “ವಜ್ರಗಳು’ ಕಾದಂಬರಿ ಚಿತ್ರವಾಗುತ್ತಿದೆ. ಆ ಚಿತ್ರಕ್ಕೆ “ಸಾರಾ ವಜ್ರ’ ಎಂದು ಹೆಸರಿಡಲಾಗಿದೆ. ವಿಶೇಷವೆಂದರೆ, ಈಗಾಗಲೇ ಸದ್ದಿಲ್ಲದೆಯೇ ಚಿತ್ರ ಪೂರ್ಣಗೊಂಡಿದ್ದು, ಡಬ್ಬಿಂಗ್‌ ಹಂತ ತಲುಪಿದೆ. ಈ ಚಿತ್ರವನ್ನು ಆರ್‍ನಾ ಸಾಧ್ಯ (ಶ್ವೇತಾ ಶೆಟ್ಟಿ) ನಿರ್ದೇಶಿಸಿದ್ದಾರೆ. ಸಂಭ್ರಮ ಡ್ರೀಮ್‌ ಹೌಸ್‌ ಬ್ಯಾನರ್‌ನಲ್ಲಿ ದೇವೇಂದ್ರ ರೆಡ್ಡಿ ಸಹಕಾರದೊಂದಿಗೆ ಚಿತ್ರ ನಿರ್ಮಾಣಗೊಂಡಿದೆ.

ಚಿತ್ರದ ಕುರಿತು ಮಾಹಿತಿ ಹಂಚಿಕೊಳ್ಳಲೆಂದೇ ಪತ್ರಕರ್ತರ ಮುಂದೆ ಬಂದಿದ್ದರು ನಿರ್ದೇಶಕಿ ಆರ್‍ನಾ ಸಾಧ್ಯ.”ಇದು ನನ್ನ ಎರಡನೇ ಚಿತ್ರ. ಸಾರಾ ಅಬೂಬಕ್ಕರ್‌ ಅವರ ಕಾದಂಬರಿ “ವಜ್ರಗಳು’ ಓದಿದ್ದೆ. ಅದನ್ನು ಸಿನಿಮಾ ಮಾಡುವ ಆಸೆ ಆಯ್ತು. ಆದರೆ, ಬೇಗನೇ ರೈಟ್ಸ್‌ ಸಿಗಲಿಲ್ಲ. ವರ್ಷಗಟ್ಟಲೆ ಕಾದೆ. ಕೊನೆಗೆ ಸಿಕ್ಕಿದ ಬಳಿಕ ಸಿನಿಮಾಗೆ ತಯಾರಿ ನಡೆಸಿದೆ. ದೇವೇಂದ್ರ ರೆಡ್ಡಿ ಅವರ ಸಾರಥ್ಯದಲ್ಲಿ ಚಿತ್ರ ತಯಾರಾಗಿದೆ.

ಅನುಪ್ರಭಾಕರ್‌ ಅವರಿಗೆ ಕಾಲ್‌ ಮಾಡಿ, ಒನ್‌ಲೈನ್‌ ಹೇಳಿದೆ. ಭೇಟಿ ಮಾಡಲು ತಿಳಿಸಿದಾಗ, ಪೂರ್ಣ ಕಥೆ ವಿವರಿಸಿದೆ. ಒಪ್ಪಿದರು. ಪಾತ್ರಕ್ಕೆ ಜೀವ ತುಂಬಿದ್ದಾರೆ. ವಿಶೇಷ ಅಂದರೆ, ರಮೇಶ್‌ ಭಟ್‌ ವಿಭಿನ್ನ ಪಾತ್ರ ಮಾಡಿದ್ದಾರೆ. ಕಾದಂಬರಿಗೆ ಎಲ್ಲೂ ಧಕ್ಕೆ ಆಗದಂತೆ ಚಿತ್ರೀಕರಿಸಿದ್ದೇವೆ. ನೋಡುವ ಪ್ರತಿಯೊಬ್ಬರಿಗೂ ಪಾತ್ರಗಳು ಕಾಡುತ್ತವೆ’ ಎಂದರು ಆರ್‍ನಾ ಸಾಧ್ಯ.

ರಮೇಶ್‌ ಭಟ್‌ ಮಾತನಾಡಿ, “ಚಿತ್ರದ ಆಶಯ ಚೆನ್ನಾಗಿದೆ. ಶ್ರೇಷ್ಠ ಲೇಖಕಿ ಬರೆದ ಕಾದಂಬರಿಯನ್ನು ಸಿನಿಮಾ ಮಾಡುವುದು ಸುಲಭವಲ್ಲ. ನಿರ್ದೇಶಕಿ ಅದನ್ನು ಯಶಸ್ವಿಗೊಳಿಸಿದ್ದಾರೆ. ನಾನಿಲ್ಲಿ ವಯಸ್ಸಿನ ಅಂತರ ಇರುವಂತಹ ಪಾತ್ರ ನಿರ್ವಹಿಸಿದ್ದೇನೆ. ಇಲ್ಲಿನ ಕಾಸ್ಟೂಮ್‌, ಲೊಕೇಷನ್‌, ಕಲಾವಿದರ ಅಭಿನಯ ಎಲ್ಲವೂ ವಿಶೇಷ. ಡಬ್ಬಿಂಗ್‌ ಮಾಡುವಾಗ, ನನಗೆ ಚಿತ್ರದಲ್ಲೇನೋ ವಿಶೇಷವಿದೆ ಎನಿಸಿದ್ದು ನಿಜ’ ಎಂದರು ರಮೇಶ್‌ಭಟ್‌

ಅನುಪ್ರಭಾಕರ್‌ ಅವರು “ಅನುಕ್ತ’ ಚಿತ್ರದ ಬಳಿಕ ಈ ಚಿತ್ರ ಮಾಡುತ್ತಿದ್ದು, ಅವರಿಗೆ ಇಲ್ಲಿ ಸಫೀಜಾ ಎಂಬ ಪಾತ್ರ ಸಿಕ್ಕಿದೆಯಂತೆ. ಒಳ್ಳೆಯ ಲೇಖಕಿ ಕಾದಂಬರಿಯಲ್ಲಿ ನಾನಿದ್ದೇನೆ ಎಂಬ ಹೆಮ್ಮೆ ಇದೆ. ಅದರಲ್ಲೂ ಮಹಿಳಾ ನಿರ್ದೇಶಕಿ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಿರ್ದೇಶಕರಿಗೆ ಏನು ಬೇಕು ಎಂಬ ಕ್ಲಾರಿಟಿ ಇದೆ. ಹಾಗಾಗಿ ಸಿನಿಮಾ ಕೂಡ ಚೆನ್ನಾಗಿ ಬಂದಿದೆ. ಇದು ಬ್ಯಾರಿ ಜನರ ಕುರಿತ ಚಿತ್ರಣ ಹೊಂದಿದೆ.

ಹಾಗಂತ ಯಾವುದೇ ಜನಾಂಗದ, ಧರ್ಮದ ವಿಷಯವಿಲ್ಲ. ಮಾನವೀಯ ಮೌಲ್ಯಕ್ಕೆ ಆದ್ಯತೆ ಕೊಡಲಾಗಿದೆ’ ಎಂದರು. ವಿ.ಮನೋಹರ್‌ ಸಂಗೀತ ನೀಡಿದ್ದು, “ಇದು ನಮ್ಮ ಊರಿನ ಬರಹಗಾತಿ ಬರೆದ ಕಾದಂಬರಿ ಆಧರಿತ ಚಿತ್ರ. ನಾನು ಹಲವು ಬ್ಯಾರಿ ಗೆಳೆಯರ ಜೊತೆ ಓಡಾಡಿದವನು. ಅವರ ಮನೆಗಳಲ್ಲಿ ಸುತ್ತಾಡಿದವನು. ಹಾಗಾಗಿ, ಚಿತ್ರದ ಪಾತ್ರ ನೋಡಿದಾಗ, ಅವರನ್ನು ಎಲ್ಲೋ ನೋಡಿದ್ದೇನೆಂಬ ಭಾಸವಾಗುತ್ತೆ. ಇಲ್ಲಿ ನನ್ನ ಜವಾಬ್ದಾರಿ ಹೆಚ್ಚಿದೆ.

ಯಾಕೆಂದರೆ, ಬ್ಯಾರಿ ಸಂಸ್ಕೃತಿ, ಆಚರಣೆಗೆ ತಕ್ಕಂತೆ ಸಂಗೀತದ ಕೆಲಸ ಮಾಡಬೇಕಿದೆ’ ಎಂದರು ಮನೋಹರ್‌. ರೆಹಮಾನ್‌ ಚಿತ್ರದಲ್ಲಿ ನೆಗೆಟಿವ್‌ ಶೇಡ್‌ ಪಾತ್ರ ಮಾಡಿದ್ದಾರಂತೆ. ಇಂತಹ ಮಗ ಬೇಕಿತ್ತಾ, ಇಂತಹ ಪತಿ ಬೇಕಾ ಎನ್ನುವಂತಹ ಪಾತ್ರವಂತೆ. ನವ ಪ್ರತಿಭೆ ಪುನೀತ್‌ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಪರಮೇಶ್‌ ಛಾಯಾಗ್ರಹಣವಿದೆ. ಅಕ್ಷಯ್‌ ಪಿ.ರಾವ್‌ ಸಂಕಲನವಿದೆ. ಚಿತ್ರದಲ್ಲಿ ಸುಧಾ ಬೆಳವಾಡಿ, ಸುಹಾನ ಸೈಯದ್‌, ಪ್ರದೀಪ್‌ ಪೂಜಾರಿ, ವಿಭಾಸ್‌ ಇತರರು ಇದ್ದಾರೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.