‘ಸಾರ್ವಜನಿಕರಲ್ಲಿ ವಿನಂತಿ’ ; ಈ ಚಿತ್ರವನ್ನು ನೋಡಲು ಮರೆಯದಿರಿ!
Team Udayavani, May 25, 2019, 4:26 PM IST
ಕನ್ನಡದಲ್ಲಿ ಇನ್ನೊಂದು ಪ್ರಯೋಗಾತ್ಮಕ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕೃಪಾ ಸಾಗರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಸಾರ್ವಜನಿಕರಲ್ಲಿ ವಿನಂತಿ’ ಎಂಬ ಶೀರ್ಷಿಕೆ ಇಡಲಾಗಿದೆ.
ನಮ್ಮ ಸಮಾಜದಲ್ಲಿ ದಿನನಿತ್ಯವೆಂಬಂತೆ ನಡೆಯುವ ಅಪರಾಧ ಘಟನೆಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ ಎಂಬ ಮಾಹಿತಿಯನ್ನು ಈ ಚಿತ್ರದ ನಿರ್ದೇಶಕರು ನೀಡುತ್ತಾರೆ. ಈ ಪ್ರಯೋಗಾತ್ಮಕ ಚಿತ್ರದಲ್ಲಿ ಹೊಸಬರ ತಂಡವೇ ಕೆಲಸ ಮಾಡಿರುವುದು ಇನ್ನೊಂದು ವಿಶೇಷ. ಮದನ್ ರಾಜಾ ಮತ್ತು ಅಮೃತಾ ಎಂಬ ಹೊಸ ಪ್ರತಿಭೆಗಳು ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಗೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ಪೊಲೀಸ್ ಪಾತ್ರವೇ ಹೈಲೈಟ್ ಆಗಿರುವುದರಿಂದ ಈ ಚಿತ್ರವನ್ನು ಕರುನಾಡಿನ ಸಮಸ್ತ ಪೊಲೀಸ್ ಬಳಗಕ್ಕೆ ಅರ್ಪಿಸುವುದಾಗಿ ನಿರ್ದೇಶಕರು ಹೆಮ್ಮೆಯಿಂದ ಹೇಳುತ್ತಾರೆ.
ಇಷ್ಟು ಮಾತ್ರವಲ್ಲದೇ ಪೊಲೀಸರಿಗಾಗಿಯೇ ಒಂದು ಹಾಡನ್ನು ಕಂಪೋಸ್ ಮಾಡಲಾಗಿದ್ದು ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರಿಂದ ಹಾಡಿಸಲಾಗಿದೆ. ಈ ಚಿತ್ರದಲ್ಲಿ ಮಂಡ್ಯ ರಮೇಶ್, ರಮೇಶ್ ಪಂಡಿತ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಸಾರ್ವಜನಿಕರಲ್ಲಿ ವಿನಂತಿ’ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡಿದೆ, ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್