ಭಟ್ಟರ ನಿರ್ಮಾಣದಲ್ಲಿ ಹೊಸ ಚಿತ್ರ
ಪದವಿ ಪೂರ್ವ ಚಿತ್ರಕ್ಕೆ ಹೊಸ ಹುಡುಗ ಹೀರೋ
Team Udayavani, Nov 27, 2019, 6:02 AM IST
ನಿರ್ದೇಶಕ ಯೋಗರಾಜ್ ಭಟ್ ಅವರೀಗ ಹೊಸ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹಾಗಂತ, ಅವರು ನಿರ್ದೇಶನ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಬಹುದು. ಸದ್ಯಕೆ ಅವರು “ಗಾಳಿಪಟ-2′ ಸಿನಿಮಾ ಜಪದಲ್ಲಿದ್ದಾರೆ. ಈ ಚಿತ್ರ ನಿರ್ದೇಶಿಸುತ್ತಿರುವ ಯೋಗರಾಜ್ಭಟ್, ಈಗ ಹೊಸ ಚಿತ್ರಕ್ಕೆ ಕೈ ಹಾಕಿರುವುದು ನಿಜ. ಆದರೆ, ಅವರು ನಿರ್ದೇಶನ ಮಾಡುತ್ತಿಲ್ಲ. ಬದಲಾಗಿ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಹೌದು, ತಮ್ಮ ಯೋಗರಾಜ್ ಮೂವೀಸ್ ಬ್ಯಾನರ್ನಲ್ಲಿ ಹೊಸ ಚಿತ್ರ ಶುರುವಾಗುತ್ತಿದ್ದು, ಚಿತ್ರಕ್ಕೆ, “ಪದವಿ ಪೂರ್ವ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಮೂಲಕ ಪೃಥ್ವಿ ಶಾಮನೂರು ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡಲಿಂಗ್ ಕ್ಷೇತ್ರದಲ್ಲಿದ್ದ ಪೃಥ್ವಿ ಅವರ ತಂದೆ ರವಿ ಶಾಮನೂರು ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಚಿತ್ರದ ಶೀರ್ಷಿಕೆ ಕೇಳಿದೊಡನೆ, ಇದೊಂದು ಪಕ್ಕಾ ಯೂಥ್ಸ್ ಲವ್ಸ್ಟೋರಿ ಅನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
ಈಗಿನ ಯುವಕ ಯುವತಿಯರ ತಲ್ಲಣ, ಆಸೆ,ಆಕಾಂಕ್ಷೆ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಚಿತ್ರವನ್ನು ಹರಿಪ್ರಸಾದ್ ಜಯಣ್ಣ ನಿರ್ದೇಶನ ಮಾಡುತ್ತಿದ್ದಾರೆ. ಭಟ್ಟರ ಜೊತೆ ಕೆಲಸ ಮಾಡಿದ ಅನುಭವ ಹರಿಪ್ರಸಾದ್ ಅವರಿಗಿದೆ. ಅರ್ಜುನ್ ಜನ್ಯ ಸಂಗೀತವಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ಜೋರಾಗಿ ನಡೆಯುತ್ತಿದ್ದು, ಹೊಸ ವರ್ಷಕ್ಕೆ ಚಿತ್ರದ ಮುಹೂರ್ತ ನಡೆಯಲಿದೆ. ಉಳಿದಂತೆ ಚಿತ್ರದ ನಾಯಕಿ, ಉಳಿದ ತಾರಾಗಣದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ