ಕನ್ನಡ ಚಿತ್ರರಂಗಕ್ಕೆ ಹೊಸ ಸೂರಿ!

ಗುಂಡ್ಲುಪೇಟೆ ಸುರೇಶ್‌ ಇನ್ನು ಎಲ್‌.ಎಂ.ಸೂರಿ

Team Udayavani, Aug 6, 2019, 3:02 AM IST

Gundlu-pete-Suresh

ಸಿನಿಮಾರಂಗದಲ್ಲಿ ಯಶಸ್ಸು ಸುಲಭವಲ್ಲ. ಪರಿಶ್ರಮ, ಶ್ರದ್ಧೆ ಇರಲೇಬೇಕು. ಇವೆರೆಡು ಇದ್ದರೂ, ಇಲ್ಲಿ ಅದೃಷ್ಟ ಅನ್ನೋದು ಬಹಳ ಮುಖ್ಯ. ತಮ್ಮ ಅದೃಷ್ಟಕ್ಕಾಗಿ ಅದೆಷ್ಟೋ ಸಿನಿಮಾ ಮಂದಿ ತಮ್ಮ ಹೆಸರನ್ನು ಬದಲಿಸಿಕೊಂಡ ಉದಾಹರಣೆಗಳು ಸಾಕಷ್ಟಿವೆ. ಅದು ನಾಯಕ, ನಾಯಕಿ, ನಿರ್ದೇಶಕ, ನಿರ್ಮಾಪಕರಿಂದ ಹಿಡಿದು ತಂತ್ರಜ್ಞರವರೆಗೂ ಪಟ್ಟಿ ಸಿಗುತ್ತೆ. ಆ ಸಾಲಿಗೆ ಈಗ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್‌ ಕೂಡ ತಮ್ಮ ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಹೌದು, ಗುಂಡ್ಲುಪೇಟೆ ಸುರೇಶ್‌ ಇನ್ನು ಮುಂದೆ ಎಲ್‌.ಎಂ.ಸೂರಿ ಎಂಬ ಹೆಸರಿನೊಂದಿಗೆ ಗುರುತಿಸಿಕೊಳ್ಳಲಿದ್ದಾರೆ. ಕಾರಣ, ಸಂಖ್ಯಾಶಾಸ್ತ್ರ. ಹೌದು, ಸಿನಿಮಾ ಮಂದಿಗೆ ಹೆಸರು ಬದಲಿಸಿಕೊಂಡರೆ ಅದೃಷ್ಟ ಹುಡುಕಿ ಬರುತ್ತೆ ಎಂಬುದು ಬಲವಾದ ನಂಬಿಕೆ. ಹೆಸರು ಬದಲಿಸಿಕೊಂಡ ಬೆರಳೆಣಿಕೆ ಮಂದಿ ಯಶಸ್ಸು ಪಡೆದಿದ್ದೂ ಇದೆ. ಹಾಗಾಗಿ, ಈಗ ಗುಂಡ್ಲುಪೇಟೆ ಸುರೇಶ್‌ ಅವರು ಎಲ್‌.ಎಂ.ಸೂರಿಯಾಗಿದ್ದಾರೆ. ಅವರ ತಂದೆ ಹೆಸರು ಲಕ್ಕೇಗೌಡ, ತಾಯಿ ಮಾದಮ್ಮ.

ಅವರಿಬ್ಬರ ಹೆಸರಿನ ಮೊದಲ ಅಕ್ಷರವನ್ನು ಬಳಸಿ ಎಲ್‌.ಎಂ.ಸೂರಿ ಎಂದು ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಕುರಿತು ಹೇಳುವ ಎಲ್‌.ಎಂ.ಸೂರಿ, “ತಂದೆ, ತಾಯಿ ನನಗೆ ಸ್ಫೂರ್ತಿ. ಅವರು ಕಷ್ಟದಲ್ಲಿದ್ದವರು, ನನ್ನನ್ನು ಪ್ರೀತಿಯಿಂದ ಬೆಳೆಸಿದವರು. ಅವರೀಗ ಇಲ್ಲ. ಆದರೆ, ಅವರ ನೆನಪು ಸದಾ ಇರುತ್ತೆ. ಹಾಗಾಗಿ ನನ್ನ ಹೆಸರಿನೊಂದಿಗೆ ಅವರು ಇರಬೇಕು ಎಂಬ ಕಾರಣಕ್ಕೆ ನಾನು ಎಲ್‌.ಎಂ.ಸೂರಿ ಎಂದು ಹೆಸರು ಬದಲಿಸಿಕೊಂಡಿದ್ದೇನೆ’ ಎನ್ನುತ್ತಾರೆ ಅವರು. ಎಲ್‌.ಎಂ.ಸೂರಿ ಇಂಡಸ್ಟ್ರಿಗೆ ಬಂದು ಒಂದುವರೆ ದಶಕವಾಗಿದೆ.

ಇದುವರೆಗೆ 17 ಚಿತ್ರಗಳಿಗೆ ಕ್ಯಾಮೆರಾ ಹಿಡಿದಿದ್ದಾರೆ. “ಪೆರೋಲ್‌’ ಅವರ ಮೊದಲ ಚಿತ್ರ. ಅದಾದ ಬಳಿಕ “ಹುಡುಗ ಹುಡುಗಿ’,”ಬರ್ಫಿ’, “ನಾನಿ’, “ಭುಜಂಗ’, “ಕಾಜಲ್‌’, “ಕಾಲಚಕ್ರ’, “ನನ್‌ ಮಗಳೇ ಹೀರೋಯಿನ್‌’, “ಕಾಳಿದಾಸ ಕನ್ನಡ ಮೇಷ್ಟ್ರು’ ಸೇರಿದಂತೆ ಹಲವು ಚಿತ್ರಗಳಿಗೆ ಕ್ಯಾಮೆರಾ ಹಿಡಿದಿದ್ದಾರೆ. ಇಷ್ಟೆಲ್ಲಾ ಮಾಡಿದರೂ, ಯಶಸ್ಸು ದೂರ. “ಎಂಆರ್‌ಪಿ’ ನಿರ್ದೇಶಕ ಬಾಹುಬಲಿ, “ಸರ್‌, ಎಲ್ಲರೂ ನಿಮ್ಮನ್ನ ಸ್ಟಿಲ್‌ ಫೋಟೋಗ್ರಾಫ‌ರ್‌ ರೀತಿ ನೋಡುತ್ತಿದ್ದಾರೆ. ಈಗಾದರೂ ನಿಮ್ಮ ಹೆಸರು ಬದಲಿಸಿಕೊಳ್ಳಿ’ ಅಂದಿದ್ದಕ್ಕೆ “ಎಂಆರ್‌ಪಿ’ ಚಿತ್ರದ ಮೂಲಕ ಎಲ್‌.ಎಂ.ಸೂರಿಯಾಗುತ್ತಿದ್ದಾರೆ ಅವರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.