ಮತದಾನ ಹೆಚ್ಚಿಸಲು ಹೊಸ ಪ್ರಯೋಗ


Team Udayavani, Mar 28, 2018, 11:36 AM IST

Yogaraj-Bhatt.jpg

ನಿರ್ದೇಶಕ ಯೋಗರಾಜ್‌ ಭಟ್ಟರು ಸಂದರ್ಭಕ್ಕನುಸಾರವಾಗಿ ಹಾಡು ಬರೆಯುವಲ್ಲಿ ನಿಸ್ಸೀಮರು. ಅದೇ ಕಾರಣದಿಂದ ಅವರ ಹಾಡಿಗೆ ಸ್ವಲ್ಪ ಹೆಚ್ಚೇ ಬೇಡಿಕೆ ಇದೆ. ಈ ಬಾರಿ ಭಟ್ಟರಿಗೆ ದೊಡ್ಡ ಜವಾಬ್ದಾರಿಯೊಂದು ಸಿಕ್ಕಿದೆ. ಅದು ಮತದಾನದ ಕುರಿತಾಗಿ ಹಾಡು ಬರೆಯುವುದು. ಹೌದು, ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ.

ಮೇ 12 ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ಮುಂಚೆ ಹಾಡು ಬರೆದು, ಚಿತ್ರೀಕರಿಸುವ ಜವಾಬ್ದಾರಿ ಭಟ್ಟರಿಗೆ ಸಿಕ್ಕಿದೆ. ಭಟ್ಟರು ಯಾವುದೇ ಪಕ್ಷದ ಪರ ಹಾಡು ಬರೆಯುತ್ತಿಲ್ಲ. ಈ ಜವಾಬ್ದಾರಿಯನ್ನು ಅವರಿಗೆ ನೀಡಿರೋದು ಚುನಾವಣಾ ಆಯೋಗ. ಭಟ್‌ ಹಾಗೂ ಅವರ “ಪಂಚತಂತ್ರ’ ತಂಡಕ್ಕೆ ಮತದಾನದ ಮಹತ್ವದ ಕುರಿತಾಗಿ ಹಾಡು ಬರೆದು, ಚಿತ್ರಿಕರಿಸಲು ಹೇಳಿದೆ. ಇದರಿಂದ ಯೋಗರಾಜ ಭಟ್ಟರು ಖುಷಿಯಾಗಿದ್ದಾರೆ. 

ಈ ಖುಷಿ ಹಂಚಿಕೊಳ್ಳುವ ಅವರು, “ಎಲೆಕ್ಷನ್‌ ಕಮಿಷನ್‌ “ಪಂಚತಂತ್ರ’ ಚಿತ್ರತಂಡವನ್ನು ಹಾಗೂ ನನ್ನನ್ನು ಈ ವರ್ಷದ ಅಸೆಂಬ್ಲಿ ಎಲೆಕ್ಷನ್‌ಗೆ ಒಂದು ಅದ್ಭುತ ಗೀತರಚನೆ ಮಾಡಲು ಹಾಗೂ ಆ ಹಾಡನ್ನು ಚಿತ್ರೀಕರಿಸಲು ಆಯ್ಕೆ ಮಾಡಿದೆ. ಇದು ನನ್ನ ಹಾಗೂ ನನ್ನ ತಂಡದ ಅತಿ ದೊಡ್ಡ ಹೆಮ್ಮೆಗಳಲ್ಲೊಂದು. ಗೀತರಚನೆ ನಡೆಯುತ್ತಿದೆ. ಚಿತ್ರೀಕರಣವನ್ನು ರಾಜ್ಯಾದ್ಯಂತ ಶುರು ಮಾಡಿದ್ದೇವೆ. ಸಂಗೀತ ನಿರ್ದೇಶನ ಹರಿಕೃಷ್ಣ ಅವರದ್ದಾಗಿದ್ದು, ಇಮ್ರಾನ್‌ ಸರ್ದಾರಿಯಾ ನೃತ್ಯ ಸಂಯೋಜನೆ ಇದೆ.

ಈ ಹಾಡು ಜನಮಾನಸದಲ್ಲಿ ದೊಡ್ಡ ವೈರಲ್‌ ಆಗುವ ಪ್ರಬಲ ಸಾಧ್ಯತೆಗಳಿವೆ. ಈ ಒಂದು ಹಾಡಿನಿಂದಾಗಿ ವೋಟು ಮಾಡುವವರ ಸಂಖ್ಯೆ ಹೆಚ್ಚಿದಲ್ಲಿ ನಮ್ಮ ಶ್ರಮ ಸಾರ್ಥಕ’ ಎಂದು ಖುಷಿ ವ್ಯಕ್ತಪಡಿಸಿದ್ದಾರೆ ಭಟ್ರು. ಸದ್ಯ ಯೋಗರಾಜ್‌ ಭಟ್‌ “ಪಂಚತಂತ್ರ’ ಚಿತ್ರದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಅದರ ಜೊತೆಗೆ ಮತದಾನದ ಕುರಿತಾದ ಹಾಡನ್ನು ಚಿತ್ರೀಕರಿಸುವ ಜವಾಬ್ದಾರಿಯೂ ಅವರಿಗೆ ಸಿಕ್ಕಿದೆ. 

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.