ನೈಜ ಘಟನೆಯ ಸುತ್ತ ಹೊಸಬರು
Team Udayavani, May 2, 2018, 12:36 PM IST
ನೈಜ ಘಟನೆ ಆಧಾರಿತ … ಹೀಗೆ ಹೇಳಿಕೊಂಡು ಅದೆಷ್ಟು ಸಿನಿಮಾಗಳು ಸೆಟ್ಟೇರುತ್ತವೋ ಲೆಕ್ಕವಿಲ್ಲ. ನೈಜ ಘಟನೆ ಎಂದಾಗ ಸಿನಿಮಾ ಬಗ್ಗೆ ಕುತೂಹಲ ಹೆಚ್ಚುತ್ತದೆ ಎಂಬ ಕಾರಣಕ್ಕೆ ಎಲ್ಲೋ ನಡೆದ ಘಟನೆಗೆ ಸಿನಿಮೀಯ ಸ್ಪರ್ಶ ಕೊಟ್ಟು ತೆರೆಗೆ ತರುತ್ತಾರೆ. ಈಗ ಹೊಸಬರ ತಂಡವೊಂದು ಕೂಡಾ ನೈಜ ಘಟನೆಯೊಂದನ್ನಿಟ್ಟುಕೊಂಡು ಸಿನಿಮಾ ಮಾಡಲು ಮುಂದಾಗಿದೆ.
ಚಿತ್ರಕ್ಕೆ ಟೈಟಲ್ ಇನ್ನಷ್ಟೇ ಅಂತಿಮವಾಗಬೇಕಿದೆ. ಇತ್ತೀಚೆಗೆ ಚಿತ್ರಕ್ಕೆ ನಟ ಮಯೂರ್ ಕ್ಲಾಪ್ ಮಾಡಿದರು. ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆಯಂತೆ. 1990ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಔಷಧಿ ದಂಧೆಯನ್ನಿಟ್ಟುಕೊಂಡು ಚಿತ್ರ ಮಾಡಲಾಗುತ್ತಿದೆ. ಐವರು ಯುವಕರು ಸಾಧನೆ ಮಾಡುವ ಸಲುವಾಗಿ ಹುರಪಿನಿಂದ ಈ ದಂಧೆಗೆ ಅರಿವಿಲ್ಲದೆ ಸೇರಿಕೊಳ್ಳುತ್ತಾರೆ.
ಅದರಿಂದ ತಪ್ಪಿಸಿಕೊಂಡು ಹೇಗೆ ಹೊರಗೆ ಬರುತ್ತಾರೆ ಎಂಬುದನ್ನು ಸಿನಿಮಾದನ್ನು ಚಿತ್ರದಲ್ಲಿ ತೋರಿಸಲಿದ್ದಾರಂತೆ. ಚಿತ್ರವನ್ನು ಶ್ರೀವತ್ಸ ಆರ್ ಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಥರ್ವ್, ವರುಣ್ ನಾರಾಯಣ್, ವಿನಯ್ ರಾವ್, ಸಚಿನ್ ಇವರೊಂದಿಗೆ ಮಾಸ್ಟರ್ ಗೋಕುಲ್ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದಲ್ಲಿನ ಪೊಲೀಸ್ ಅಧಿಕಾರಿ ಪಾತ್ರಕ್ಕೆ ಸೂಕ್ತ ಕಲಾವಿದರನ್ನು ಆಯ್ಕೆ ಮಾಡಲು ಚಿತ್ರತಂಡ ಚಿಂತನೆ ನಡೆಸುತ್ತಿದೆ.
ಚಿತ್ರದ ಎರಡು ಹಾಡುಗಳಿಗೆ ಮಹಾರಾಜ್ ಸಂಗೀತ, ಪೂರ್ಣಚಂದ್ರ ಬೈಕಾಡಿ ಛಾಯಾಗ್ರಹಣ ಚಿತ್ರಕ್ಕಿದೆ. ಬೆಂಗಳೂರು ಮತ್ತು ಚಿಕ್ಕಮಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದೆ. ಆರ್.ಜೆ.ಸಿನಿ ಕ್ರಿಯೇಷನ್ಸ್ ಮೂಲಕ ಜಯಶ್ರೀ ಮತ್ತು ಸಾವಿತ್ರಮ್ಮ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?