ಹೊಸಬರ ಪ್ರೀತಿಯ ಶೋಕಿ

ಸದ್ದಿಲ್ಲದೇ ಮುಗಿದಿದೆ ಚಿತ್ರೀಕರಣ

Team Udayavani, Apr 10, 2019, 3:00 AM IST

Shoki

ಕನ್ನಡದಲ್ಲೀಗ ಅನೇಕ ಹೊಸಬರ ಚಿತ್ರಗಳು ಸದ್ದಿಲ್ಲದೆಯೇ ಶುರುವಾಗಿ, ಮಾತಿನ ಭಾಗದ ಚಿತ್ರೀಕರಣವನ್ನೂ ಮುಗಿಸಿ ತೆರೆಗೆ ಬರಲು ಸಜ್ಜಾಗುತ್ತಿವೆ. ಆ ಸಾಲಿಗೆ ಈಗ “ಶೋಕಿ’ ಎಂಬ ಚಿತ್ರವೂ ಸೇರಿದೆ. ಈ ಹಿಂದೆ ಹೊಸ ಪ್ರತಿಭೆ ಶರಣ್ಯಗೌಡ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು.

ಆಗ ಆ ಚಿತ್ರಕ್ಕೆ ಹೆಸರು ಇಟ್ಟಿರಲಿಲ್ಲ. ಅದಕ್ಕೆ “ಶೋಕಿ’ ಎಂದು ನಾಮಕರಣ ಮಾಡಿರುವ ನಿರ್ದೇಶಕ ಎಸ್‌.ವಿಷ್ಣುಪ್ರಿಯನ್‌, ಮಾತಿನ ಭಾಗದ ಚಿತ್ರೀಕರಣ ಮುಗಿಸಿ, ಬಿಡುಗಡೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಕಥೆ, ಸಂಭಾಷಣೆ ಜವಾಬ್ದಾರಿಯನ್ನು ನಿರ್ದೇಶಕರೇ ವಹಿಸಿಕೊಂಡಿದ್ದಾರೆ. ಸರೋಜಿನಿ ಸಿನಿಮಾಸ್‌ ಬ್ಯಾನರ್‌ನಡಿ ಎಸ್‌.ಕೆಂಪೇಗೌಡ ದೊಡ್ಡಬಳ್ಳಾಪುರ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಸುನೀಲ್‌ ದರ್ಶನ್‌ ನಾಯಕರಾಗಿದ್ದಾರೆ. ಇದು ಇವರಿಗೆ ಮೊದಲ ಸಿನಿಮಾ. ನಾಯಕಿಯರಾಗಿ ಶರಣ್ಯಗೌಡ ಹಾಗು ಕೀರ್ತಿ ಕೃಷ್ಣ ನಟಿಸಿದರೆ, ವಿಶೇಷ ಪಾತ್ರದಲ್ಲಿ ದೀಪಶ್ರೀ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಪ್ರಶಾಂತ್‌, ಶ್ರುತಿ, ಅಂಜಲಿ, ಶಾರದ, ಸುಮಾ, ಮುಂತಾದವರು ಅಭಿನಯಿಸುತ್ತಿದ್ದಾರೆ.

ಚಿತ್ರವನ್ನು ಚಿಕ್ಕಮಗಳೂರು, ಮಾಣಿಕ್ಯದಾರ, ಸಕಲೇಶಪುರ, ಶ್ರೀನಿವಾಸ ಸಾಗರ, ನಂದಿಬೆಟ್ಟ ಸುತ್ತಮುತ್ತಲ ತಾಣಗಳಲ್ಲಿ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಇದೊಂದು ಯುವಕರ ಪ್ರೀತಿ, ಪ್ರೇಮದ ಸುತ್ತ ನಡೆಯುವ ಕಥೆ. ಅವರ ಬದುಕಿನ ಸಾಧಕ-ಬಾಧಕಗಳ ಕುರಿತಾದ ಚಿತ್ರಣ ಇಲ್ಲಿದೆ.

ಇನ್ನು, “ಶೋಕಿ’ ಶೀರ್ಷಿಕೆಗೆ “ಮಾಡೋಕೆ ಆಧಾರ್‌ ಕಾರ್ಡ್‌ ಬೇಕಿಲ್ಲ’ ಎಂಬ ಅಡಿಬರಹವಿದೆ. ಹುಡುಗಿಯೊಬ್ಬಳ ಬದುಕಲ್ಲಿ ಶೋಕಿದಾರನೊಬ್ಬನ ಎಂಟ್ರಿಯಾಗಿ, ಅವಳ ಲೈಫ‌ಲ್ಲಿ ಹೇಗೆಲ್ಲಾ ಆಟ ಆಡ್ತಾನೆ, ಆಮೇಲೆ ಏನೆಲ್ಲಾ ಆಗುತ್ತದೆ ಎಂಬುದು ಒನ್‌ಲೈನ್‌ ಸ್ಟೋರಿ ಎಂಬುದು ನಿರ್ದೇಶಕ ವಿಷ್ಣು ಪ್ರಿಯನ್‌ ಮಾತು.

ಚಿತ್ರಕ್ಕೆ ವಾಸನ್‌ ಛಾಯಾಗ್ರಹಣ ಮಾಡಿದ್ದಾರೆ. ಹರ್ಷ ಅವರು ಸಂಗೀತ ನೀಡಿದ್ದಾರೆ. ಸದ್ಯಕ್ಕೆ ಚಿತ್ರದ ಹಾಡುಗಳು ಬಾಕಿ ಉಳಿದಿವೆ. ಮಳೆಗಾಲದಲ್ಲಿ ಹಾಡುಗಳನ್ನು ಚಿತ್ರೀಕರಿಸುವ ಯೋಚನೆ ಚಿತ್ರಕ್ಕಿದೆ. ಸದ್ಯ ಚಿತ್ರಕ್ಕೆ ಸಂಕಲನ ಹಾಗು ಡಬ್ಬಿಂಗ್‌ ನಡೆಯುತ್ತಿದೆ. ರಾಜೇಂದ್ರ ಹೆಗಡೆ ಸಹನಿರ್ದೇಶನವಿರುವ ಚಿತ್ರವನ್ನು ಗೌರಿ ಗಣೇಶ ಹಬ್ಬದಂದು ತೆರೆಗೆ ತರಲು ನಿರ್ಮಾಪಕರು ತಯಾರಿ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.