ಹೊಸಬರ ಸಸ್ಪೆನ್ಸ್‌ ನ್ಯೂರಾನ್‌


Team Udayavani, Oct 14, 2018, 11:52 AM IST

nueran-4.jpg

ಐಟಿ, ಇಂಜಿನಿಯರಿಂಗ್‌ ಹಿನ್ನೆಲೆಯ ಹೊಸ ಪ್ರತಿಭೆಗಳು ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಿಂದಲೋ ಏನೋ, ಇತ್ತೀಚೆಗೆ ಬರುತ್ತಿರುವ ಅನೇಕ ಸಿನಿಮಾಗಳ ಟೈಟಲ್‌ಗ‌ಳಲ್ಲೂ ಸೈನ್ಸ್‌ ಛಾಯೆ ಎದ್ದು ಕಾಣುತ್ತದೆ. ಈಗ ಅಂಥದ್ದೆ ಒಂದು ಸಿನಿಮಾ ಸೆಟ್ಟೇರಲು ಸಿದ್ಧವಾಗಿದೆ. ಅದರ ಹೆಸರು “ನ್ಯೂರಾನ್‌’. ಸಾಮಾನ್ಯವಾಗಿ ವಿಜ್ಞಾನ ಬಗ್ಗೆ ತಿಳಿದುಕೊಂಡವರಿಗೆ ಈ ಹೆಸರು ಪರಿಚಯವಿರುತ್ತದೆ.

ಮನುಷ್ಯನ ದೇಹ ಬಿಲಿಯನ್ಸ್‌ ಆಫ್ ನ್ಯೂರಾನ್ಸ್‌ ನಿಂದ ರೂಪುಗೊಂಡಿದ್ದು, “ನ್ಯೂರಾನ್‌’ಗಳು ದೇಹದ ಸ್ಪರ್ಶ, ಸಂವೇದನೆ, ಗ್ರಹಿಕೆಯನ್ನು ಮೆದುಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈಗ ಇದೇ “ನ್ಯೂರಾನ್‌’ ಎಂಬ ಟೈಟಲ್‌ ಇಟ್ಟುಕೊಂಡು ನವ ನಿರ್ದೇಶಕ ವಿಕಾಸ್‌ ಪುಷ್ಪಗಿರಿ ಸಿನಿಮಾ ಮಾಡಲು ಹೊರಟಿದ್ದಾರೆ. ಮೂಲತಃ ಐಟಿ ಹಿನ್ನೆಲೆಯಿಂದ ಬಂದ ವಿಕಾಸ್‌, ಸುಮಾರು ಹತ್ತು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ನಿರ್ದೇಶಕರಾದ ಸೀತಾರಾಮ ಕಾರಂತ್‌, ದೇವರಾಜ ಕುಮಾರ್‌ ಮೊದಲಾದವರ ಜತೆ ಅನೇಕ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಈಗ “ನ್ಯೂರಾನ್‌’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಚಿತ್ರಕ್ಕೆ ಅ. 28ರಂದು ಮುಹೂರ್ತ. ಚಿತ್ರದ ಬಗ್ಗೆ ಮಾತನಾಡುವ ವಿಕಾಸ್‌ ಪುಷ್ಪಗಿರಿ, “ಇದೊಂದು ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾ. ನ್ಯೂರಾನ್ಸ್‌ಗಳು ನಮಗೆ ಗೊತ್ತಿಲ್ಲದಂತೆ, ನಮ್ಮೊಳಗೆ ಅನೇಕ ಕೆಲಸಗಳನ್ನು ಮಾಡುತ್ತಿರುತ್ತವೆ.

ಅವುಗಳ ಕೆಲಸ ಎಂಥವರಿಗೂ ಅಚ್ಚರಿ ಮೂಡಿಸುವಂಥದ್ದು. ಈ ಸಿನಿಮಾದಲ್ಲೂ ಕೂಡ ಆಡಿಯನ್ಸ್‌ಗೆ ಗೊತ್ತಾಗದಂತೆ ಥ್ರಿಲ್ಲಿಂಗ್‌ ಆಗಿ ಚಿತ್ರದ ಕಥೆ ತೆರೆದುಕೊಳ್ಳುತ್ತ ಹೋಗುತ್ತದೆ. ಒಂದಷ್ಟು ನೈಜ ಘಟನೆಗಳು ಕಥೆಗೆ ಸ್ಪೂರ್ತಿ. ಕಥೆಗೆ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದೇವೆ. ಕಡಿಮೆ ಪಾತ್ರಗಳನ್ನು ಇಟ್ಟುಕೊಂಡು ಒಂದು ಸಸ್ಪೆನ್ಸ್‌  ಸಿನಿಮಾವನ್ನು ಮಾಡಲು ಹೊರಟಿದ್ದೇನೆ’ ಎನ್ನುತ್ತಾರೆ.  ಇನ್ನು, ಈ ಚಿತ್ರದಲ್ಲಿ ಯುವ ಎಂಬ ನವನಟ ಹೀರೋ ಆಗಿ ಪರಿಚಯವಾಗುತ್ತಿದ್ದಾರೆ.

ಉಳಿದಂತೆ ನೇಹಾ ಪಾಟೀಲ್‌, ವೈಷ್ಣವಿ ಮೆನನ್‌, ವರ್ಷಾ, ಅರವಿಂದ್‌ ರಾವ್‌, ರಾಮಕೃಷ್ಣ, ಕಬೀರ್‌ ಸಿಂಗ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ಚಿತ್ರಕ್ಕೆ ಗುರುಕಿರಣ್‌ ಸಂಗೀತ, ಶೋಯೆಬ್‌ ಅಹಮದ್‌ ಛಾಯಾಗ್ರಹಣವಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ಡಾ. ವಿ. ನಾಗೇಂದ್ರ ಪ್ರಸಾದ್‌ ಹಾಡುಗಳಿಗೆ ಸಾಹಿತ್ಯವಿದೆ. ಫ್ರೆಂಡ್ಸ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಸಕಲೇಶಪುರ, ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸುವ ಯೋಚನೆ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.