ನವನವೀನ “ನವರಂಗ್‌’

ಹೊಸ ಸ್ಪರ್ಶದೊಂದಿಗೆ ಚಿತ್ರಮಂದಿರ ರೆಡಿ

Team Udayavani, Sep 2, 2019, 3:01 AM IST

Navarang

ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿದ್ದ ಅನೇಕ ಚಿತ್ರಮಂದಿರಗಳು ಸಂಪೂರ್ಣ ಮುಚ್ಚಿಹೋಗಿದ್ದು ಗೊತ್ತೇ ಇದೆ. ಇನ್ನು ಕೆಲವು ಚಿತ್ರಮಂದಿರಗಳು ನವೀಕರಣದೊಂದಿಗೆ ಪುನಃ ಸಿನಿರಸಿಕರ ಪಾಲಿಗೆ ಸಂತಸ ತಂದಿದ್ದೂ ಇದೆ. ಈಗ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಸಾವಿರಾರು ಚಿತ್ರಗಳ ಪ್ರದರ್ಶನ ನೀಡಿದ್ದ ನವರಂಗ್‌ ಚಿತ್ರಮಂದಿರ ಕೂಡ ನವೀಕರಣಗೊಳ್ಳುವ ಮೂಲಕ ನೋಡುಗರಿಗೆ ಹೊಸ ಫೀಲ್‌ ಕೊಡುವ ತಯಾರಿಯಲ್ಲಿದೆ.

ಹೌದು, ಈಗಾಗಲೇ ಮೆಜೆಸ್ಟಿಕ್‌, ಸಾಗರ್‌, ಕಲ್ಪನಾ, ಕೈಲಾಶ್‌, ತ್ರಿಭುವನ್‌, “ಕಪಾಲಿ’ ಹೀಗೆ ಪ್ರಮುಖ ಚಿತ್ರಮಂದಿರಗಳು ಸಂಪೂರ್ಣ ಮುಚ್ಚಿವೆ. ಆದರೆ, ಕಳೆದ ಮೂರು ತಿಂಗಳಿನಿಂದ ತಾತ್ಕಾಲಿಕ ಪ್ರದರ್ಶನ ನಿಲ್ಲಿಸಿದ್ದ ರಾಜಾಜಿನಗರದ ಡಾ.ರಾಜಕುಮಾರ್‌ ರಸ್ತೆಯಲ್ಲಿರುವ ನವರಂಗ್‌ ಚಿತ್ರಮಂದಿರ, ಈಗ ನವೀಕರಣದೊಂದಿಗೆ ಸಿನಿರಸಿಕರನ್ನು ಆಕರ್ಷಿಸಲು ಸಜ್ಜಾಗುತ್ತಿದೆ.

ನವರಂಗ್‌ ಚಿತ್ರಮಂದಿರದ ಮಾಲೀಕ ಕೆಸಿಎನ್‌ ಮೋಹನ್‌ ಅವರು, ಚಿತ್ರಮಂದಿರಕ್ಕೆ ಇನ್ನಷ್ಟು ಉನ್ನತಮಟ್ಟ ಕಲ್ಪಿಸಿ, ಒಳ್ಳೆಯ ವಾತಾವರಣ ಕಲ್ಪಿಸುವ ಉದ್ದೇಶದಿಂದ ನವೀಕರಣಗೊಳಿಸುತ್ತಿದ್ದಾರೆ. ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಕೆಸಿಎನ್‌ ಮೋಹನ್‌, “ಕಳೆದ 53 ವರ್ಷಗಳಿಂದಲೂ ಇರುವ ನವರಂಗ್‌ ಚಿತ್ರಮಂದಿರ ಇನ್ನು ಮುಂದೆ ಸುಸಜ್ಜಿತಗೊಂಡು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಹೊಸ ಫೀಲ್‌ ತಂದುಕೊಡಲಿದೆ.

ಮೊದಲು ಕೆಳಗಡೆ 800 ಆಸನಗಳಿದ್ದವು. ಈಗ 450 ಕ್ಕೆ ಇಳಿಸಲಾಗಿದೆ. ಬಾಲ್ಕನಿಯಲ್ಲಿದ್ದ 350 ಆಸನಗಳನ್ನು ಈಗ 250 ಕ್ಕೆ ಇಳಿಸಲಾಗಿದೆ. ಹೊಸ ಬಗೆಯ ಆಸನ ವ್ಯವಸ್ಥೆ ಕಲ್ಪಿಸುವ ಮೂಲಕ ನವರಂಗ್‌ ಚಿತ್ರಮಂದಿರದ ಒಳಗೆ ಬರುವ ಪ್ರತಿಯೊಬ್ಬರಿಗೂ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ನೋಡಿದ ಅನುಭವ ಆಗುವಂತಹ ವಾತಾವರಣ ಕಲ್ಪಿಸಲಾಗುತ್ತಿದೆ. ಸೆಪ್ಟೆಂಬರ್‌ 12 ರಂದು “ಪೈಲ್ವಾನ’ ಚಿತ್ರ ಬಿಡುಗಡೆಯಾಗುತ್ತಿದ್ದು, ಆ ಚಿತ್ರದ ಮೂಲಕ ನವೀಕರಣಗೊಂಡಿರುವ ನವರಂಗ್‌ ಚಿತ್ರಮಂದಿರಕ್ಕೆ ಚಾಲನೆ ಕೊಡುವ ಪ್ರಯತ್ನ ಮಾಡಲಾಗುವುದು’ ಎನ್ನುತ್ತಾರೆ ಮೋಹನ್‌.

ಅದೇನೆ ಇರಲಿ, ಡಾ.ರಾಜಕುಮಾರ್‌ ಅಭಿನಯದ “ವೀರಕೇಸರಿ’ ಈ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡ ಮೊದಲ ಚಿತ್ರ. ಬಹುತೇಕ ಚಿತ್ರಗಳನ್ನು ಪ್ರದರ್ಶಿಸಿದ ಖ್ಯಾತಿ ನವರಂಗ್‌ ಚಿತ್ರಮಂದಿರಕ್ಕಿದೆ. ಕನ್ನಡದ ಎಲ್ಲಾ ಸ್ಟಾರ್‌ ಚಿತ್ರಗಳು ಇಲ್ಲಿನ ಪರದೆ ಮೇಲೆ ಬಿತ್ತರಗೊಂಡಿವೆ. ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಮುಚ್ಚೇ ಹೋಗುತ್ತಿರುವ ಸಂದರ್ಭದಲ್ಲಿ ಇರುವ ಚಿತ್ರಮಂದಿರವನ್ನು ನವೀಕರಿಸಿ, ಪುನಃ ಹೊಸ ವಾತಾವರಣ ಕಲ್ಪಿಸುವ ಧೈರ್ಯ ಮಾಡುತ್ತಿರುವುದನ್ನು ಮೆಚ್ಚಲೇಬೇಕು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.