“ಅಪ್ಪ ಐ ಲವ್ ಯೂ’ ಎಂದ ನಿಖಿಲ್
Team Udayavani, Dec 16, 2018, 5:37 PM IST
ಇಂದು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ಜನ್ಮದಿನವಾಗಿದ್ದು, 59ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ಮುಖಂಡರೂ ಶುಭಾಶಯವನ್ನು ಕೋರಿದ್ದಾರೆ. ಅಲ್ಲದೇ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಅಹಿತಕರ ಘಟನೆಗಳಿಂದ ನೊಂದಿರುವ ಕುಮಾರಸ್ವಾಮಿ ಅವರು, ವಿಜೃಂಭಣೆಯಿಂದ ತಮ್ಮ ಹುಟ್ಟುಹಬ್ಬವನ್ನು ಆಚರಿಸದೇ, ಸಿಂಪಲ್ ಆಗಿ ಫ್ಯಾಮಿಲಿ ಜೊತೆ ಸಮಯ ಕಳೆದಿದ್ದಾರೆ.
ಈ ನಡುವೆ ನಿಖಿಲ್ ತಮ್ಮ ತಂದೆ ಕೈಯಿಂದ ಕೇಕ್ ಕಟ್ ಮಾಡಿಸಿದ್ದು, ಆ ಫೊಟೋಗಳನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯವಾಗಿ ನಿಖಿಲ್ ತನ್ನ ಅಪ್ಪನಿಗೋಸ್ಕರ “ಸೀತಾರಾಮ ಕಲ್ಯಾಣ’ ಚಿತ್ರದ ಓ ಜಾನು… ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಮಾಡಿಸುವ ಮೂಲಕ ಉಡುಗೊರೆಯನ್ನು ಕೊಟ್ಟಿದ್ದಾರೆ.
ಇನ್ನು ನಿಖಿಲ್ ತಮ್ಮ ಫೇಸ್ಬುಕ್ ಖಾತೆಯಲ್ಲಿ “ಹುಟ್ಟು ಹಬ್ಬದ ಶುಭಾಶಯಗಳು ಅಪ್ಪ, ಆ ದೇವರು ನಿಮಗೆ ಆರೋಗ್ಯ, ನೆಮ್ಮದಿ ಕೊಟ್ಟು ಕಾಪಾಡಲಿ ಮುಖ್ಯವಾಗಿ ನಮ್ಮ ನಾಡಿಗೆ ನಿಮ್ಮ ಸೇವೆ ಸಲ್ಲಿಸಲು ಆ ದೇವರು ನಿಮಗೆ ಶಕ್ತಿ ತುಂಬಲಿ ಎಂದು ಆಶಿಸುತ್ತೇನೆ. ನಿಮ್ಮ ಮಗನಾಗಿ ನಾನು ಹುಟ್ಟಿದ್ದು ನನ್ನ ಪುಣ್ಯ. ನೀವು ನನ್ನ ಜೀವನದ ನಿಜವಾದ ಹೀರೊ. ನೀವು ನನ್ನ ಪ್ರತಿ ಹೆಜ್ಜೆಗೂ ನೀಡುವ ಸಲಹೆ ನನ್ನನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮಾಡಲ್ಪಟ್ಟಿದೆ. ಹಗಲು ರಾತ್ರಿ ಎಂದು ಭಾವಿಸದೆ ನಾಡಿನ ಅಭಿವೃದ್ಧಿಗಾಗಿ,ನಿಮ್ಮ ಆರೋಗ್ಯವನ್ನು ಲೆಕ್ಕಿಸದೆ ನೀವು ಮುನ್ನುಗ್ಗುವ ರೀತಿ ನಿಜವಾಗಿಯೂ ಎಲ್ಲರೂ ಮೆಚ್ಚುವಂತದ್ದು. ಲವ್ ಯು ಅಪ್ಪ❤️ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!