![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನಿಖೀಲ್ಗೆ ತೆಲುಗಿನ ಟಿಎಸ್ಆರ್ ಪ್ರಶಸ್ತಿ
Team Udayavani, Apr 11, 2017, 12:03 PM IST
![Nikhil-gets-TSR-Award-(8).jpg](https://www.udayavani.com/wp-content/uploads/2017/04/11/Nikhil-gets-TSR-Award-(8).jpg)
ನಿಖೀಲ್ ತಮ್ಮ ಮೊದಲನೇ ಚಿತ್ರಕ್ಕೆ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಅದು ಕನ್ನಡದಲ್ಲಲ್ಲ, ತೆಲುಗಿನಲ್ಲಿ. ಹೌದು, “ಜಾಗ್ವಾರ್’ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ಚೊಚ್ಚಲ ನಟ ಪ್ರಶಸ್ತಿ ಸಿಕ್ಕಿದೆ. ಅಷ್ಟೇ ಅಲ್ಲ, ಶನಿವಾರ ಸಂಜೆ ವಿಶಾಖಪಟ್ಟಣದ ಪೋರ್ಟ್ ಸ್ಟೇಡಿಯಂನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವೂ ನಡೆದಿದೆ. ಆಂಧ್ರದ ಉದ್ಯಮಿ ಮತ್ತು ನಿರ್ಮಾಪಕ ಟಿ. ಸುಬ್ಬರಾಮಿ ರೆಡ್ಡಿ ಕಳೆದ ಹಲವು ವರ್ಷಗಳಿಂದ ತಮ್ಮ ಹೆಸರಿನಲ್ಲಿ ಚಿತ್ರರಂಗದಲ್ಲಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದಾರೆ.
2015 ಮತ್ತು 2016ನೇ ಸಾಲಿನ ಪ್ರಶಸ್ತಿಗಳನ್ನು ಇತ್ತೀಚೆಗೆ ಒಂದೇ ವೇದಿಕೆಯಲ್ಲಿ ಕೊಟ್ಟು ಗೌರವಿಸಲಾಯಿತು. ಈ ಎರಡೂ ವರ್ಷಗಳಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ಕಲಾವಿದರಾದ ಬಾಲಕೃಷ್ಣ, ವೆಂಕಟೇಶ್, ನಾಗಾರ್ಜುನ, ರಾಮ್ ಚರಣ್ ತೇಜ, ಅಲ್ಲು ಅರ್ಜನ್, ಬ್ರಹ್ಮಾನಂದಂ, ಪ್ರಭಾಸ್ ಸೇರಿದಂತೆ ಹಲವರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಸಾಲಿನಲ್ಲಿ “ಜಾಗ್ವಾರ್’ ಚಿತ್ರದ ನಟನೆಗೆ ನಿಖೀಲ್ ಸಹ ಅತ್ಯುತ್ತಮ ಚೊಚ್ಚಲ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಸಮಾರಂಭದಲ್ಲಿ ಸುಬ್ಬರಾಮಿ ರೆಡ್ಡಿ, ಚಿರಂಜೀವಿ, ನಾಗಾರ್ಜುನ, ಜಯಪ್ರದಾ, ಬಾಲಕೃಷ್ಣ, ಮೋಹನ್ ಬಾಬು ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದು, ಚಿರಂಜೀವಿ ಅವರಿಂದ ನಿಖೀಲ್ ಪ್ರಶಸ್ತಿ ಪಡೆದಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.