‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ
Team Udayavani, Oct 21, 2021, 8:57 AM IST
“ಇಲ್ಲಿಂದ ಆರಂಭವಾಗಿದೆ’ – ಹೀಗೊಂದು ಸಿನಿಮಾ ಸದ್ದಿಲ್ಲದೇ ಆರಂಭವಾಗಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಟಾಲಿವುಡ್ ನಿರ್ಮಾಪಕ ಬಿ.ನರಸಿಂಹ ರೆಡ್ಡಿ ಸಿನಿಮಾಕ್ಕೆ ಕತೆ ಚಿತ್ರಕತೆ ಬರೆದು ನಿರ್ಮಾಣ ಮಾಡುವುದರ ಜೊತೆಗೆ ರಾಜ್ ಕುಮಾರ್ ಹೆಸರಿನಲ್ಲಿ ಸಿಐಡಿ ಪಾತ್ರವನ್ನು ನಿಭಾಯಿಸಿದ್ದಾರೆ. ಲಕ್ಷಣ ಚಪರ್ಲ ನಿರ್ದೇಶನವಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಎರಡು ಸ್ನೇಹಿತ ಕುಟುಂಬಗಳ ಮಧ್ಯೆ ಮಗ, ಮಗಳನ್ನು ತಂದುಕೊಡಬೇಕೆಂದು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ದುರಳನೊಬ್ಬ ಒಡಕು ತಂದ ಕಾರಣ ಇಬ್ಬರು ಬೇರೆಯಾಗುತ್ತಾರೆ. ಇವರ ಮನಸ್ಸಿನಲ್ಲಿ ಇದ್ದಂತ ಆಸೆ, ಆಕಾಂಕ್ಷೆಗಳು ಈಡೇರುತ್ತದಾ? ಅವರುಗಳು ಮತ್ತೆ ಒಂದಾಗುತ್ತಾರಾ? ಇವೆಲ್ಲವುಗಳು ಸೆಸ್ಪನ್ಸ್, ಹಾರರ್, ನವಿರಾದ ಪ್ರೀತಿ, ಜೊತೆಗೊಂದು ತಾಯಿ ಮಗಳ ಬಾಂಧವ್ಯ ಕತೆಯೊಂದಿಗೆ ಸಾಗುತ್ತದೆ. ಜೊತೆಗೆ ಸತ್ಯ ನ್ಯಾಯಕ್ಕೆ ಎಂದಿಗೂ ಗೆಲುವು ಸಿಗಲಿದೆ ಅಂತ ಹೇಳಲಾಗಿದೆಯಂತೆ.
ಕೀರ್ತಿ ಕೃಷ್ಣ ಈ ಚಿತ್ರದ ನಾಯಕ. ನಿಖೀತಾ ಸ್ವಾಮಿ ಮತ್ತು ಮಧುಬಾಲ ನಾಯಕಿಯರು. ಇವರೊಂದಿಗೆ ಬಾಲಿವುಡ್ ನಟರಾದ ಪ್ರದೀಪ್ ರಾವತ್, ಶಾಹುರಾಜಿ ಶಿಂಧೆ, ದೇವ್ಗಿಲ್ ಹಾಗೂ ಕನಕಪುರದ ಸ್ಥಳೀಯ ಪ್ರತಿಭೆಗಳು ನಟಿಸಿದ್ದಾರೆ. ಬೆಂಗಳೂರು, ಮಂಗಳೂರು, ಕನಕಪುರ, ಪಾವಗಡ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಇದನ್ನೂ ಓದಿ:ಭಯ ಹುಟ್ಟಿಸುವ ಭಯಾನಕ ಪಾತ್ರಗಳು : ಭಜರಂಗಿ 2 ಟ್ರೇಲರ್ ಔಟ್
ಚಿತ್ರಕ್ಕೆ ರಾಜ್ ಕಿರಣ್ ಸಂಗೀತ, ಜಯರಾಮ್ ಛಾಯಾಗ್ರಹಣ, ಸೀನು ಸಂಕಲನವಿದೆ. ಪುಷ್ಪ ಫಿಲಂಸ್ ಬ್ಯಾನರ್ನಡಿಯಲ್ಲಿ ಈ ಚಿತ್ರವು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್