ಭರ್ಜರಿ ಎಂಟ್ರಿಗೆ ‘ನಮ್ಮ ಹುಡುಗರು’ ರೆಡಿ


Team Udayavani, Jul 7, 2022, 4:03 PM IST

Namma-hudugrau

ನಟ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್‌ ನಾಯಕರಾಗಿ ನಟಿಸಿರುವ “ನಮ್ಮ ಹುಡುಗರು’ ಚಿತ್ರ ಈ ವಾರ ತೆರೆಕಾಣುತ್ತಿದ. ಈ ಚಿತ್ರವನ್ನು ಹೆಚ್‌.ಬಿ.ಸಿದ್ದು ನಿರ್ದೇಶಿಸಿದ್ದಾರೆ.

ಬಿಡುಗಡೆ ತಯಾರಿ ಕುರಿತಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಸಿದ್ದು, “ಇದೇ ಶುಕ್ರವಾರ ನಮ್ಮ ಚಿತ್ರ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮುನ್ನ ಚಿತ್ರದ ಟ್ರೇಲರ್‌ ಬಿಡುಗಡೆ ಹಾಗೂ ಪ್ರೀ ರಿಲೀಸ್‌ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಂದು ಕಿಚ್ಚ ಸುದೀಪ್‌, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಂಡ್ಯದ ಹಿನ್ನೆಲೆಯಲ್ಲಿ ನಡೆಯುವ ಕಥೆಯಿದು. ಸ್ನೇಹಿತರ ಬಳಗ, ಆ ಸ್ನೇಹಿತರ ಹುಡುಗಾಟ, ಅವರ ನಡುವೆ ಹುಟ್ಟಿಕೊಳ್ಳುವ ಮಿಥ್ಯ. ಸುಳ್ಳಿನಿಂದ ಆರಂಭವಾಗಿ ಸುಳ್ಳಿನಿಂದಲೇ ಮುಗಿಯುವ ಕಥೆಯನ್ನು ಈ ಚಿತ್ರದಲ್ಲಿ ನಿರೂಪಿಸಿದ್ದೇವೆ. ಮಂಡ್ಯದಲ್ಲಿ ಪ್ರಾರಂಭವಾಗಿ ಮಂಗಳೂರಿನಲ್ಲಿ ಕೊನೆಯಾಗುವ ಕಥೆಯಿದು. ಒಂದು ಪದ ಇಟ್ಟುಕೊಂಡು ಇಡೀ ಸಿನಿಮಾವನ್ನು ಹೇಗೆ ತೆಗೆದುಕೊಂಡು ಹೋಗಬಹುದು ಎಂದು ಇದರಲ್ಲಿ ಹೇಳಿದ್ದೇವೆ. ಸ್ನೇಹಿತರ ನಡುವೆ ಮೋಸ, ವಂಚನೆ ಸುಳಿಯಬಾರದು, ಅಲ್ಲಿ ಸುಳ್ಳೊಂದು ಹುಟ್ಟಿದಾಗ ಅದು ಏನೆಲ್ಲ ತೊಂದರೆಗೆ ಕಾರಣವಾಯಿತೆಂದು ಈ ಚಿತ್ರ ನಿರೂಪಿಸುತ್ತದೆ. ಮಂಡ್ಯ, ಮೈಸೂರು, ಬೆಂಗಳೂರು, ಕಾರವಾರ, ಸಕಲೇಶಪುರ ಹಾಗೂ ಮಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್‌ ನಡೆಸಿದ್ದೇವೆ’ ಎಂದರು

ನಾಯಕ ನಿರಂಜನ್‌ ಅವರಿಗೆ ಹೀರೋ ಆಗಿ ಇದು ಮೊದಲ ಸಿನಿಮಾ. ಸಹಜವಾಗಿಯೇ ಎಕ್ಸೆ„ಟ್‌ ಆಗಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರಂಜನ್‌, “ನಾರ್ಮಲ್‌ ಸಿನಿಮಾ ಇದಲ್ಲ. ಒಂದೊಳ್ಳೆಯ ಕಂಟೆಂಟ್‌ ಇದೆ. ರಿಯಲ್‌ ಲೈಫ್ನಲ್ಲಿ ಎಲ್ಲರಿಗೂ ಭಾವನಾತ್ಮಕವಾಗಿ ಚಿತ್ರ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಹಾಡುಗಳು ಹೈಲೈಟ್ಸ್. ಚಿತ್ರದ ದೃಶ್ಯವೊಂದನ್ನು ಬೆಟ್ಟದ ಮೇಲೆ ಶೂಟ್‌ ಮಾಡಿದ್ದೇವೆ. ಸಖತ್‌ ಎತ್ತರದಲ್ಲಿ ಮಾಡಿದ ಸೀನ್‌ ಅನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಲೋಕ್‌, ಪ್ರವೀಣ್‌ ಹಾಗೂ ಮಾರುತಿ ನನ್ನ ಸ್ನೇಹಿತರಾಗಿ ಉತ್ತಮ ಅಭಿನಯ ನೀಡಿದ್ದಾರೆ. ಸೆಂಟಿಮೆಂಟ್‌, ಕಾಮಿಡಿಯಿಂದ ಆರಂಭವಾಗುವ ಕಥೆ ನಂತರ ಸೀರಿಯಸ್‌ ಆಗುತ್ತದೆ’ ಎಂದರು.

ರಾಧ್ಯಾ ಈ ಚಿತ್ರದ ನಾಯಕಿ. “ನಾನಿಲ್ಲಿ ಗೌರಿ ಎಂಬ ಮಂಡ್ಯ ಹುಡುಗಿಯಾಗಿ ನಟಿಸಿದ್ದು, ಎಲ್ಲರ ಮನಕ್ಕೂ ಹತ್ತಿರವಾಗುವಂಥ ಪಾತ್ರ’ ಎಂದರು.

“ಗೋಲ್ಡನ್‌ ಹಾರ್ಟ್ಸ್’ ಮೂಲಕ ಕೆ.ಕೆ. ಅಶ್ರಫ್ ಅವರ ನಿರ್ಮಾಣ ಮಾಡಿದ್ದು, ಈ ಚಿತ್ರವನ್ನು “ಜಯಣ್ಣ ಫಿಲಂಸ್‌’ ಬಿಡುಗಡೆ ಮಾಡುತ್ತಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.