ಅನೀಶ್‌ ಚಿತ್ರಕ್ಕೆ ನಿಶ್ವಿ‌ಕಾ ನಾಯಕಿ


Team Udayavani, May 10, 2017, 11:21 AM IST

Nishvika-Naidu-1.jpg

“ಕಾಲೇಜ್‌ ಕುಮಾರ್‌’ ಚಿತ್ರದವರೇನೋ ನಿರ್ಮಾಪಕರ ಸಂಘದವರೆಗೂ ಹೋಗಿ, ಸಂಯುಕ್ತಾ ಹೆಗ್ಡೆ ಅವರನ್ನು ತಮ್ಮ ಚಿತ್ರದ ನಾಯಕಿಯಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆ ಭಾಗ್ಯ “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರಕ್ಕೆ ಸಿಗಲಿಲ್ಲ. ಆ ಚಿತ್ರದಿಂದ ಸಂಯುಕ್ತಾ ಹೊರನಡೆದಿದ್ದು, ಅವರ ಜಾಗಕ್ಕೆ ನಿಶ್ವಿ‌ಕಾ ನಾಯ್ಡು ಎಂಬ ಹೊಸ ಹುಡುಗಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

“ಕಿರಿಕ್‌ ಪಾರ್ಟಿ’ ಚಿತ್ರದ ನಂತರ ಸಂಯುಕ್ತಾ ಮೊದಲು ಒಪ್ಪಿದ್ದು “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರವನ್ನು ಅನೀಶ್‌ ತೇಜೇಶ್ವರ್‌ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಣ ಕೂಡಾ ಮಾಡುತ್ತಿರುವ ಈ ಚಿತ್ರಕ್ಕೆ ಸಂಯುಕ್ತಾ ನಾಯಕಿಯಾಗಿ ಆಯ್ಕೆಯಾದರು. ಆ ನಂತರ ಸಂತು ನಿರ್ದೇಶನದ “ಕಾಲೇಜ್‌ ಕುಮಾರ್‌’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದರು.

ಇನ್ನೇನು ಎರಡೂ ಚಿತ್ರಗಳು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಸಂಯುಕ್ತಾಗೆ ತಮಿಳು ಚಿತ್ರವೊಂದರಿಂದ ಆಫ‌ರ್‌ ಬಂದಿದ್ದು, ಅದರ ಸಲುವಾಗಿ ಅವರು ಎರಡೂ ಚಿತ್ರಗಳನ್ನು ಬಿಡುವುದಕ್ಕೆ ಮುಂದಾದರಂತೆ. ಈ ಹಂತದಲ್ಲಿ “ಕಾಲೇಜ್‌ ಕುಮಾರ್‌’ ಚಿತ್ರದ ನಿರ್ಮಾಪಕರು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರೆಗೂ ಹೋಗಿ ಮಾತಾಡಿದ್ದರಿಂದ, ಸಂಯುಕ್ತಾ ಚಿತ್ರದ ನಾಯಕಿಯಾಗಿ ಮುಂದುವರೆದಿದ್ದಾರೆ.

ಆದರೆ, “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರತಂಡದವರು ಸುಮ್ಮನಾಗಿದ್ದಾರೆ. ಸಂಯುಕ್ತಾ ಅವರನ್ನು ಬಿಟ್ಟುಕೊಟ್ಟು, ಅವರ ಜಾಗಕ್ಕೆ ರಾತ್ರೋ ರಾತ್ರಿ ನಿಶ್ವಿ‌ಕಾ ಎಂಬ ಹೊಸ ನಾಯಕಿಯನ್ನು ಆಯ್ಕೆ ಮಾಡಿದ್ದಾರೆ. “ನಾವು ಸಹ ನಿರ್ಮಾಪಕರ ಸಂಘಕ್ಕೆ ಹೋಗಬಹುದಿತ್ತು. ಆದರೆ, ಸಂಯುಕ್ತಾ ಅವರಿಗೆ ಚಿತ್ರದಲ್ಲಿ ನಟಿಸುವ ಆಸಕ್ತಿ ಇಲ್ಲ ಎಂದ ಮೇಲೆ ಅವರನ್ನು ಫೋರ್ಸ್‌ ಮಾಡುವುದು ಸರಿಯಾಗಲಿಲ್ಲ.

ಮೇ 3ರಂದು ಫೋಟೋ ಶೂಟ್‌ನಲ್ಲಿ ಸಹ ಸಂಯುಕ್ತಾ ಭಾಗವಹಿಸಿದ್ದರು. ನಾಲ್ಕನೇ ತಾರೀಖು ಬಂದು ತಮಿಳು ಚಿತ್ರದಲ್ಲಿ ಅವಕಾಶ ಸಿಕ್ಕಿರುವುದರಿಂದ, ಚಿತ್ರೀಕರಣ ಮುಂದಕ್ಕೆ ಹಾಕುವುದಕ್ಕೆ ಸಾಧ್ಯವಾ ಎಂದು ಕೇಳಿದರು. ಆದರೆ, ಅಷ್ಟರಲ್ಲಿ ಎಲ್ಲವೂ ಫೀಕ್ಸ್‌ ಆಗಿತ್ತು. ಕಲಾವಿದರ ಕಾಲ್‌ಶೀಟ್‌ ಪಡೆಯುವುದರ ಜೊತೆಗೆ, ಶೂಟಿಂಗ್‌ ಮನೆಯನ್ನು ಸಹ ಬಾಡಿಗೆ ಪಡೆದಾಗಿತ್ತು. ಚಿತ್ರೀಕರಣ ಮುಂದಕ್ಕೆ ಹಾಕಿದ್ದರೆ, ಪ್ಲಾನ್‌ ಹಾಳಾಗುತ್ತಿತ್ತು.

ಅದನ್ನು ಬದಲಾಯಿಸುವುದಕ್ಕೆ ಸಾಧ್ಯವೇ ಇರಲಿಲ್ಲ. ಹಾಗಾಗಿ ಅವರ ಬದಲು ಬೇರೆ ನಾಯಕಿಯನ್ನು ಆಯ್ಕೆ ಮಾಡಬೇಕಾಯಿತು. ನಮ್ಮ ಗುಡ್‌ ಲಕ್‌ ಎಂದರೆ, ಆಡಿಷನ್‌ ಮಾಡಿದ ಮೊದಲ ಹುಡುಗಿಯೇ ಫಿಕ್ಸ್‌ ಆದರು. ಈಗ ಯಶವಂತಪುರದ ನಿಶ್ವಿ‌ಕಾ ನಾಯ್ಡು ಎನ್ನುವವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ’ ಎನ್ನುತ್ತಾರೆ ಅನೀಶ್‌. ಇನ್ನು “ವಾಸು – ಪಕ್ಕಾ ಕಮರ್ಷಿಯಲ್‌’ ಚಿತ್ರದ ಚಿತ್ರೀಕರಣ ಈಗಾಗಲೇ 8ರಿಂದ ಪ್ರಾರಂಭವಾಗಿದೆ.

ಈ ತಿಂಗಳ 31ರವರೆಗೂ ಚಿತ್ರೀಕರಣ ನಡೆಯಲಿದೆಯಂತೆ. ವಾಸು ಚಿತ್ರವನ್ನು ಅಜಿತ್‌ವಾಸನ್‌ ಅವರೇ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಗಳನ್ನ ರಚಿಸಿದ್ದಾರೆ. ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದರೆ, ಶ್ರೀಕಾಂತ್‌ ಸಂಕಲನಕಾರರಾಗಿ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.