ಮತ್ತೆ ನಿಷ್ಕರ್ಷ
Team Udayavani, Aug 16, 2018, 11:55 AM IST
ಹಳೆಯ ಚಿತ್ರಗಳ ಹೆಸರಿಟ್ಟುಕೊಂಡು ಹೊಸ ಸಿನಿಮಾ ಮಾಡುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ಈಗಾಗಲೇ ಹಳೆಯ ಹೆಸರಿಟ್ಟುಕೊಂಡು, ಹಲವು ಹೊಸ ಚಿತ್ರಗಳು ತಯಾರಾಗಿದ್ದು, ಈಗ ಆ ಸಾಲಿಗೆ ಇನ್ನೊಂದು ಸೇರ್ಪಡೆ “ನಿಷ್ಕರ್ಷ’. ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದಲ್ಲಿ ಈ ಹಿಂದೆ ಮೂಡಿಬಂದಿದ್ದ “ನಿಷ್ಕರ್ಷ’ ದೊಡ್ಡ ಹಿಟ್ ಆಗಿತ್ತು. ಈಗ ಅದೇ ಹೆಸರಿನ ಹೊಸ ಚಿತ್ರದ ಚಿತ್ರೀಕರಣ ಆಗಸ್ಟ್ 20ರಿಂದ ಪ್ರಾರಂಭವಾಗಲಿದೆ. ಚಿತ್ರದ ಮುಹೂರ್ತಕ್ಕೆ ಪುನೀತ್ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಲಿದ್ದಾರೆ.
ಹಿಮಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು ಸಿ.ಎಂ. ವಿಜಯ್ ಎನ್ನುವವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಮನೋರಂಜನೆ, ಕುತೂಹಲ ಹಾಗೂ ಕೌಟುಂಬಿಕ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ಅನಿಕೇತನ್ ನಾಯಕನಾಗಿ ಕಾಣಿಸಿಕೊಂಡರೆ, “ಹುಲಿರಾಯ’ ಚಿತ್ರದ ಮೂಲಕ ಪರಿಚಿತರಾದ ದಿವ್ಯ ಉರುಡುಗ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನು ಅನಂತ್ ನಾಗ್, ಸಾಯಿಕುಮಾರ್, ಕಿಶೋರ್, ಚಿಕ್ಕಣ್ಣ, ಅಚ್ಯುತ್ ಕುಮಾರ್, ಸುಧಾ ಬೆಳವಾಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹೊಸ “ನಿಷ್ಕರ್ಷ’ಕ್ಕಾಗಿ ಬೆಂಗಳೂರು, ಮೈಸೂರು, ರಾಜಸ್ತಾನ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಸರವಣನ್ ಅವರ ಛಾಯಾಗ್ರಹಣ ಮತ್ತು ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ