DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌


Team Udayavani, Apr 5, 2024, 3:03 PM IST

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

ನಟ ದರ್ಶನ್‌ ಅವರ ಎಡಗೈಗೆ ಗುರುವಾರ ಶಸ್ತ್ರಚಿಕಿತ್ಸೆ ನಡೆದಿದೆ. ಅದಕ್ಕೆ ಕಾರಣ “ಡೆವಿಲ್‌’ ಚಿತ್ರೀಕರಣದ ವೇಳೆ ಏಟು ಬಿದ್ದಿದ್ದು. ಸಹಜವಾಗಿಯೇ ಸಿನಿಮಾ ಪ್ರೇಮಿಗಳಲ್ಲಿ ಒಂದು ಪ್ರಶ್ನೆ ಎದ್ದಿದೆ, ಅದು ಸಿನಿಮಾ ಶೂಟಿಂಗ್‌ ತಡವಾಗುತ್ತಾ ಎಂಬುದು. ಖಂಡಿತಾ ಇಲ್ಲ, ದರ್ಶನ್‌ ಹೆಚ್ಚು ದಿನ ವಿಶ್ರಾಂತಿ ಪಡೆಯುತ್ತಿಲ್ಲ. ಶೀಘ್ರದಲ್ಲೇ ಚಿತ್ರೀಕರಣಕ್ಕೆ ಮರಳಲಿದ್ದಾರೆ.

ಈ ಕುರಿತು ಮಾತನಾಡುವ ದರ್ಶನ್‌, “ಡೆವಿಲ್‌ ಶೂಟಿಂಗ್‌ ಸಮಯದಲ್ಲಿ ಕೈಗೆ ಪೆಟ್ಟಾಗಿತ್ತು. ವೈದ್ಯರು ಕೂಡಲೇ ಆಪರೇಶನ್‌ ಮಾಡಬೇಕೆಂದು ಹೇಳಿದರು. ಆದರೆ, ಒಮ್ಮೆಲೇ ಆಪರೇಶನ್‌ಗೆ ಹೋದರೆ ಫೈಟ್‌ ಮಾಸ್ಟರ್ ಸೇರಿದಂತೆ ಎಲ್ಲರ ಕಾಲ್‌ಶೀಟ್‌ನಲ್ಲಿ ತೊಂದರೆಯಾಗುತ್ತದೆ ಎಂದು. ಇಷ್ಟು ದಿನ ಮುಂದೆ ಹಾಕಿಕೊಂಡು ಬಂದೆ’ ಎನ್ನುತ್ತಾರೆ.

ಶಸ್ತ್ರಚಿಕಿತ್ಸೆ ಆದ ನಂತರ ದರ್ಶನ್‌ ಎಷ್ಟು ದಿನ ವಿಶ್ರಾಂತಿಯಲ್ಲಿರಬೇಕು ಎಂಬ ಪ್ರಶ್ನೆ ಸಹಜ. “ಹೆಚ್ಚು ದಿನ ವಿಶ್ರಾಂತಿ ಪಡೆಯುತ್ತಿಲ್ಲ. ಮುಂದಿನ ವಾರದಿಂದ ಮತ್ತೆ ಚಿತ್ರೀಕರಣಕ್ಕೆ ಹೋಗುತ್ತೇನೆ. ಅಕ್ಟೋಬರ್‌ನಲ್ಲಿ ಬರುತ್ತೇನೆ ಎಂದು ಪ್ರಾಮಿಸ್‌ ಮಾಡಿದ್ದೇನೆ. ಅದರಂತೆ ಸಿನಿಮಾವನ್ನು ರಿಲೀಸ್‌ ಮಾಡಬೇಕಿದೆ’ ಎನ್ನುವುದು ದರ್ಶನ್‌ ಮಾತು.

ಇನ್ನು, ದರ್ಶನ್‌ ಕೈ ನೋವಿನಲ್ಲೂ ತಮ್ಮ ಆಪ್ತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಬೆಂಬಲ ನೀಡಿದ್ದರು

ಕ್ರೇಜ್‌ ಹೆಚ್ಚಿಸಿದ ಫ‌ಸ್ಟ್‌ಲುಕ್‌

“ಡೆವಿಲ್‌’ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆಯಾಗಿ, ಹಿಟ್‌ಲಿಸ್ಟ್‌ ಸೇರಿದೆ. ಟೀಸರ್‌ನಲ್ಲಿ ಅಭಿಮಾನಿಗಳಿಗೆ ಹೊಸ ದರ್ಶನ್‌ ಸಿಕ್ಕಿದ್ದಾರೆ. ಅದು ನೆಗೆಟಿವ್‌ ಶೇಡ್‌ನ‌ಲ್ಲಿ. ಟೀಸರ್‌ನಲ್ಲಿ ಬರುವ ಡೈಲಾಗ್‌ ಕೂಡಾ ಗಮನ ಸೆಳೆದಿದೆ. “ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು. ಫೋಟೋ ತೆಗೆದರೆ ಅದಕೆ ಬಲು ಕೋಪ ಬರುವುದು. ಫೋಟೋ ತೆಗೆದ ಪಾಪು ಕೈಯ ಮುರಿದು ಬಿಡುವುದು. ಸರ್ಸು ಪಾಪು ಹೆಸರು ಕೇಳಲ್ವ? ಡೆವಿಲ್‌ ‘ ಎಂದು ಹೇಳಿ ದರ್ಶನ್‌ ಅವರು ಜೋರಾಗಿ ನಗುತ್ತಾರೆ. ಈ ಟೀಸರ್‌ ಗಮನ ಸೆಳೆದಿದೆ. ದರ್ಶನ್‌ ಹಾವ-ಭಾವ ಇಷ್ಟ ಆಗಿದೆ. ಅವರ ಲುಕ್‌ ಕೂಡ ಬೇರೆಯದೇ ರೀತಿಯಲ್ಲಿ ಇದೆ. ಮಿಲನಾ ಪ್ರಕಾಶ್‌ ಈ ಚಿತ್ರದ ನಿರ್ದೇಶಕರು.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.