ನಿರ್ದೇಶಕನಿಗೆ ನಿರ್ದೇಶನ ಮಾಡಲ್ಲ!


Team Udayavani, May 29, 2018, 12:03 PM IST

nirdeshska.jpg

ಅಂಬರೀಶ್‌ ಅವರು ಇದುವರೆಗೂ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದವರು. ಈಗ ಅವರ ಮಗ ಸಹ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಹೀಗಿರುವಾಗ ಅಂಬರೀಶ್‌ ಅವರು ತಮ್ಮ ಮಗನ ಚಿತ್ರ ಹೇಗಿರಬೇಕು ಎಂದು ಬಯಸುತ್ತಾರೆ? ನಿರ್ದೇಶಕ ನಾಗಶೇಖರ್‌ ಅವರಿಂದ ಏನು ಬಯಸುತ್ತಾರೆ ಎಂಬ ಪ್ರಶ್ನೆಗಳು ಬರಬಹುದು. ಈ ಪ್ರಶ್ನೆಗಳನ್ನು ಅವರ ಮುಂದಿಟ್ಟರೆ, “ನಾನ್ಯವತ್ತೂ ನಿರ್ದೇಶಕನಿಗೆ ನಿರ್ದೇಶನ ಮಾಡುವುದಿಲ್ಲ’ ಎಂಬ ಉತ್ತರ ಅವರಿಂದ ಬರುತ್ತದೆ.

“ನಾನ್ಯಾವತ್ತೂ ನಿರ್ದೇಶಕನಿಗೆ ನಿರ್ದೇಶನ ಮಾಡಿಲ್ಲ. ಬರೀ ಒಂದೊಳ್ಳೆಯ ಸಿನಿಮಾ ಮಾಡಲಿ ಅಂತ ಬಯಸುತ್ತೇನೆ ಅಷ್ಟೇ. ಅಭಿಷೇಕ್‌ ಮೊದಲ ಚಿತ್ರ ಸಹ ಒಂದೊಳ್ಳೆಯ ಚಿತ್ರ ಆಗಲಿ ಎಂಬ ಆಸೆ ಇದೆ. ಇದು ಬರೀ ಅಭಿಷೇಕ್‌ ಚಿತ್ರ ಮಾತ್ರ ಅಲ್ಲ, ಯಾರ ಮಗನ ಚಿತ್ರವಾಗದೂ, ಅದೊಂದು ಒಳ್ಳೆಯ ಚಿತ್ರವಾಗಲಿ, ಕನ್ನಡ ಚಿತ್ರರಂಗವನ್ನು ಮುಂದಕ್ಕೆ ತರಲಿ ಎಂಬುದು ನನ್ನ ಆಸೆ. ನಾಗಶೇಖರ್‌ ಇದಕ್ಕೂ ಮುನ್ನ ಒಳ್ಳೆಯ ಚಿತ್ರಗಳನ್ನು ಕೊಟ್ಟವರು. ಹಾಗಾಗಿ ಈ ಚಿತ್ರವನ್ನು ಸಹ ಚೆನ್ನಾಗಿ ಮಾಡುತ್ತಾರೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಅಂಬರೀಶ್‌.

ಇನ್ನು ಅಂಬರೀಶ್‌ ಅವರು ತಮ್ಮ ಮಗನಿಗೆ ಏನು ಕಿವಿಮಾತು ಹೇಳುತ್ತಾರೆ ಅಂತ ಕೇಳಿದರೆ, “ಸೆಟ್‌ಗೆ ಹೋದರೆ ನೀನೊಬ್ಬ ನಟ ಮಾತ್ರ. ಹೋಗಿ ಶ್ರದ್ಧೆಯಿಂದ ನಿನ್ನ ಕೆಲಸವನ್ನು ಮಾಡಿಕೊಂಡು ಬಾ ಅಂತ ಹೇಳುತ್ತೇನೆ. ನಾನು ಅಂಬರೀಶ್‌ ಅವರ ಮಗ, ನಿರ್ಮಾಪಕ ಸಂದೇಶ್‌ ನನ್ನ ಫ್ರೆಂಡ್‌ ಅಂತೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳದೆ, ಒಬ್ಬ ನಟನಾಗಿ ನಿರ್ದೇಶಕರು ಏನು ಹೇಳುತ್ತಾರೋ ಅದನ್ನು ಮಾಡು ಅಂತ ಹೇಳಿದ್ದೇನೆ’ ಎನ್ನುತ್ತಾರೆ ಅಂಬರೀಶ್‌.

ಅಂಬರೀಶ್‌ ಅವರಿಗೆ ತಮ್ಮ ಮಗನ ಬಗ್ಗೆ ಖುಷಿ ಇದೆ. “ನಾನು ಚಿತ್ರರಂಗಕ್ಕೆ ಬಂದ ಸಂದರ್ಭದಲ್ಲಿ ಬಹಳ ರಾ ಇದ್ದೆ. ಚಿತ್ರರಂಗದ ಬಗ್ಗೆಯಾಗಲೀ, ನಟನೆಯ ಬಗ್ಗೆಯಾಗಲೀ ಹೆಚ್ಚು ವಿಷಯಗಳು ಗೊತ್ತಿರಲಿಲ್ಲ. ಈಗಿನವರು ಹಾಗಲ್ಲ. ಸಾಕಷ್ಟು ತಯಾರಿಗಳನ್ನು ಮಾಡಿಕೊಂಡೇ ಬಂದಿರುತ್ತಾರೆ. ಅಭಿಷೇಕ್‌ ಸಹ ಕೆಲವು ವರ್ಷಗಳಿಂದ ಸಾಕಷ್ಟು ತಯಾರಿ ಮಾಡಿಕೊಂಡು, ಹಲವು ವಿಷಯಗಳನ್ನು ಕಲಿತುಕೊಂಡು, ಚಿತ್ರರಂಗಕ್ಕೆ ಬಂದಿದ್ದಾನೆ. ಅವನ ತರಬೇತಿ ಮತ್ತು ತಯಾರಿಯ ಬಗ್ಗೆ ಖುಷಿ ಇದೆ’ ಎನ್ನುತ್ತಾರೆ ಅಂಬರೀಶ್‌.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.