ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರ
Team Udayavani, Dec 11, 2019, 4:53 PM IST
ಪರಿಪೂರ್ಣವಾದ ಕೌಟುಂಬಿಕ ಕಥಾ ಹಂದರ ಹೊಂದಿರೋ ಚಿತ್ರವೆಂಬ ವಿಚಾರ ಈಗಾಗಲೇ ಜಾಹೀರಾಗಿದೆ. ಟ್ರೇಲರ್, ಟೀಸರ್ ಮತ್ತು ಹಾಡುಗಳ ಮೂಲಕ ಒಡೆಯನ ಅದ್ದೂರಿತನದ ಮಜಲುಗಳು ಸಹ ಅನಾವರಣಗೊಂಡಿವೆ. ಸಂದೇಶ್ ನಾಗರಾಜ್ ಅರ್ಪಿಸಿ, ಎನ್ ಸಂದೇಶ್ ಅವರು ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ನಿರ್ಮಾಣ ಮಾಡಿರುವ ಚಿತ್ರವಿದು. ಇದರಲ್ಲಿ ದರ್ಶನ್ ತುಂಬಿದ ಮನೆಯ ಒಡೆಯನಾಗಿ, ಬಂಧಗಳಿಗೆ ಬೆಲೆ ಕೊಡುವ ನಾಯಕನಾಗಿ ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಭರ್ಜರಿ ಆಕ್ಷನ್ ಸನ್ನಿವೇಶಗಳೂ ಈ ಸಿನಿಮಾದಲ್ಲಿ ಹೇರಳವಾಗಿದೆ. ಅದುವೇ ಈ ಚಿತ್ರದ ಪ್ರಧಾನ ಆಕರ್ಷಣೆ ಅನ್ನೋದು ಚಿತ್ರತಂಡದ ಭರವಸೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿಜ ಜೀವನದಲ್ಲಿಯೂ ಸ್ನೇಹಕ್ಕೆ, ಪ್ರೀತಿಗೆ ತುಂಬಾನೇ ಬೆಲೆ ಕೊಡುವಂಥಾ ವ್ಯಕ್ತಿತ್ವ ಹೊಂದಿರುವವರು. ಅವರನ್ನು ಫ್ಯಾಮಿಲಿ ಸಬ್ಜೆಕ್ಟಿನ ಚಿತ್ರಗಳಲ್ಲಿಯೇ ಕಾಣ ಬಯಸುವ ದೊಡ್ಡ ಪ್ರೇಕ್ಷಕ ವರ್ಗವೇ ಕನ್ನಡದಲ್ಲಿದೆ. ಆಗಾಗ ಆ ವರ್ಗದ ಪ್ರೇಕ್ಷಕರನ್ನು ತಣಿಸುವಂಥಾ ಸಿನಿಮಾಗಳಲ್ಲಿ ದರ್ಶನ್ ನಟಿಸುತ್ತಾರೆ. ಆದರೆ ಒಡೆಯ ಪೂರ್ತಿಯಾಗಿ ಫ್ಯಾಮಿಲಿ ಪ್ಯಾಕೇಜಿನಂಥಾ ಚಿತ್ರ. ತನ್ನನ್ನು ನಂಬಿದವರಿಗಾಗಿ ಏನು ಮಾಡಲೂ ಸಿದ್ಧವಿರುವ ಈ ಒಡೆಯ, ಎದುರಾಳಿಗಳು ಯಾರೇ ಇದ್ದರೂ ಎದೆ ಅದುರಿಸುವಂತೆ ಅಬ್ಬರಿಸಲೂ ಹಿಂದೆ ಮುಂದೆ ನೋಡುವವನಲ್ಲ. ಒಡೆಯ ಗಜೇಂದ್ರನ ಈ ಗುಣವೇ ಸದರಿ ಸಿನಿಮಾವನ್ನು ಪಕ್ಕಾ ಆಕ್ಷನ್ ಚಿತ್ರವಾಗಿಯೂ ಗಮನ ಸೆಳೆಯುವಂತೆ ಮಾಡಿದೆ.
ದರ್ಶನ್ ಅಭಿಮಾನಿಗಳು ಸದಾ ಅವರನ್ನು ಆಕ್ಷನ್ ಪಾತ್ರಗಳಲ್ಲಿಯೇ ನೋಡಲು ಬಯಸುತ್ತಾರೆ. ಅಂಥವರೆಲ್ಲರನ್ನೂ ತಣಿಸುವಂಥಾ ಹೈ ವೋಲ್ಟೇಜ್ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿವೆ. ಅದರ ಝಲಕ್ಗಳು ಈಗಾಗಲೇ ಟ್ರೇಲರ್, ಟೀಸರ್ಗಳಲ್ಲಿ ಕಾಣಿಸಿವೆ. ಒಟ್ಟಾರೆಯಾಗಿ ಒಡೆಯನನ್ನು ನಿರ್ದೇಶಕ ಎಂ ಡಿ ಶ್ರೀಧರ್ ಇಲ್ಲಿನ ನೇಟಿವಿಟಿಗೆ ಒಗ್ಗಿಸಿಕೊಂಡು ರೂಪಿಸಿದ್ದಾರೆ. ಈ ಹಿಂದೆ ದರ್ಶನ್ ಅವರ ಫಸ್ಟ್ ಲುಕ್ ಅಭಿಮಾನಿಗಳು ಹುಚ್ಚೇಳುವಂತೆ ಮಾಡಿತ್ತು. ಅದನ್ನೇ ಮೀರಿಸುವಂಥಾ ಚೆಂದದ ಲುಕ್ಕುಗಳಲ್ಲಿ ದರ್ಶನ್ ಇಲ್ಲಿ ಒಡೆಯನಾಗಿ ಕಂಗೊಳಿಸಿದ್ದಾರೆ. ಇದೆಲ್ಲವೂ ಈ ವಾರವೇ ಪ್ರೇಕ್ಷಕರೆಲ್ಲರ ಮುಂದೆ ಅನಾವರಣಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್