ಹಳೆ ಟೈಟಲ್‌ ಹೊಸ ಸಿನಿಮಾ: ಎಡಕಲ್ಲು ಮೇಲೊಂದು ಸಂದೇಶ


Team Udayavani, Apr 16, 2018, 11:51 AM IST

Edakallu-Guddada-Mele.jpg

“ಎಡಕಲ್ಲು ಗುಡ್ಡದ ಮೇಲೆ’ – ಈ ಸಿನಿಮಾ ಹೆಸರು ಕೇಳಿದಾಗ ನಿಮಗೆ ಪುಟ್ಟಣ್ಣ ಕಣಗಾಣಲ್‌ ಅವರ ಹೆಸರು ನೆನಪಿಗೆ ಬರುತ್ತದೆ. ಏಕೆಂದರೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರವನ್ನು ನಿರ್ದೇಶಿಸಿದವರು ಪುಟ್ಟಣ್ಣ. ಚಂದ್ರಶೇಖರ್‌, ಜಯಂತಿ, ಆರತಿ ಮುಖ್ಯಯಲ್ಲಿ ನಟಿಸಿದ್ದ ಈ ಚಿತ್ರ ಅಂದು ದೊಡ್ಡ ಯಶಸ್ಸು ಕಂಡಿತ್ತು. ಈಗ ಮತ್ತೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರ ಸುದ್ದಿ ಮಾಡುತ್ತಿದೆ.

ಆದರೆ, ಇದು ಪುಟ್ಟಣ್ಣ ಕಣಗಾಲ್‌ ನಿರ್ದೇಶನದ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರವಲ್ಲ, ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರ. ಹೌದು, ಹಳೆಯ ಯಶಸ್ವಿ ಸಿನಿಮಾಗಳ ಶೀರ್ಷಿಕೆಗಳನ್ನಿಟ್ಟುಕೊಂಡು ಸಿನಿಮಾ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆ ಸಾಲಿಗೆ “ಎಡಕಲ್ಲು ಗುಡ್ಡದ ಮೇಲೆ’ ತಂಡ ಕೂಡಾ ಸೇರುತ್ತದೆ. ವಿವಿನ್‌ ಸೂರ್ಯ ಎನ್ನುವವರು ಹೊಸ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ನಿರ್ದೇಶಕರು.

ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ನಿರ್ದೇಶಕ ವಿವಿನ್‌ ಹೇಳುವಂತೆ, ಪುಟ್ಟಣ್ಣ ಅವರ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲವಂತೆ. “ನನಗೆ ಪುಟ್ಟಣ್ಣ ಅವರ ಚಿತ್ರದ ಟೈಟಲ್‌ ಮರುಬಳಕೆ ಮಾಡಿದರ ಕುರಿತು ಹೆಮ್ಮೆಯೂ ಇದೆ ಜೊತೆಗೆ ಎಚ್ಚರಿಕೆಯೂ ಇದೆ. ಆ ಟೈಟಲ್‌ನಡಿ ಸಿನಿಮಾದಲ್ಲಿ ಒಳ್ಳೆಯ ಅಂಶಗಳನ್ನೇ ಹೇಳಿದ್ದೇನೆ’ ಎನ್ನುವುದು ವಿವಿನ್‌ ಮಾತು.

ಚಿತ್ರದಲ್ಲಿ ತಂದೆ-ತಾಯಿಯ, ಸಂಬಂಧಗಳ ಮೇಲೆ ಪ್ರೀತಿ ತೋರಿಸದೇ, ಹಣ, ಆಸ್ತಿ ಹಿಂದೆ ಬಿದ್ದಾಗ ಏನೇನಾಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರಂತೆ. ನಿರ್ದೇಶಕರಿಗೆ “ಎಡಕಲ್ಲು ಗುಡªದ ಮೇಲೆ’ ಚಿತ್ರದಲ್ಲಿ ನಟಿಸಿದ ಹಿರಿಯ ಕಲಾವಿದರಾದ ಚಂದ್ರಶೇಖರ್‌, ಜಯಂತಿ ಹಾಗೂ ಆರತಿಯವರನ್ನು ಈ ಚಿತ್ರದಲ್ಲೂ ಬಳಸಿಕೊಳ್ಳಬೇಕೆಂಬ ಆಸೆ ಇತ್ತಂತೆ. ಆದರೆ, ಜಯಂತಿ ಅವರ ಅನಾರೋಗ್ಯ ಹಾಗೂ ಆರತಿಯವರು ಸಂಪರ್ಕಕ್ಕೆ ಸಿಗದ ಕಾರಣ ಅವರಿಬ್ಬರನ್ನು ಬಳಸಿಕೊಳ್ಳಲಾಗಲಿಲ್ಲವಂತೆ.

ಚಂದ್ರಶೇಖರ್‌ ಅವರು ಇಲ್ಲಿ ನಾಯಕನ ಪಾತ್ರ ಮಾಡಿದ್ದಾಗಿ ಹೇಳಿಕೊಂಡರು ವಿವಿನ್‌. ಚಿತ್ರದಲ್ಲಿ ನಕುಲ್‌ ನಾಯಕರಾಗಿ ನಟಿಸಿದ್ದಾರೆ. ಸ್ವಾತಿ ಶರ್ಮಾ ನಾಯಕಿ. “ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮೊದಲ ಚಿತ್ರದಲ್ಲೇ ನಟನೆಗೆ ಅವಕಾಶವಿರುವ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ’ ಎನ್ನುವುದು ಸ್ವಾತಿ ಮಾತು. ಚಿತ್ರದಲ್ಲಿ ಹಿರಿಯ ನಟರಾದ ದತ್ತಣ್ಣ, ಮನ್‌ದೀಪ್‌ರಾಯ್‌, ರವಿಭಟ್‌, ಮೂಗು ಸುರೇಶ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಆಶಿಕ್‌ ಕಿರಣ್‌ ಸಂಗೀತ ಚಿತ್ರಕ್ಕಿದೆ. ಚಿತ್ರವನ್ನು ಜಿ.ಪಿ.ಪ್ರಕಾಶ್‌ ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.