ಪ್ರೀ ರಿಲೀಸ್‌ ಇವೆಂಟ್‌ ನಲ್ಲಿ ‘ಜಮಾಲಿಗುಡ್ಡ’


Team Udayavani, Dec 27, 2022, 11:10 AM IST

Once upon a time in jamaligudda pre release event

ಧನಂಜಯ್‌ ನಟನೆಯ “ಜಮಾಲಿಗುಡ್ಡ’ ಚಿತ್ರ ಡಿ.30ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಹಿಟ್‌ ಆಗಿದ್ದು, ಸಿನಿಮಾ ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರೀ ರಿಲೀಸ್‌ ಇವೆಂಟ್‌ ಮಾಡಿದೆ. ಕಲರ್‌ಫ‌ುಲ್‌ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಧನಂಜಯ್‌, ನಾಯಕಿ ಅದಿತಿ ಪ್ರಭುದೇವ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿ ಸಿನಿಮಾದ ಅನುಭವ ಹಂಚಿಕೊಂಡಿತು.

ಟೈಟಲ್ಲೇ ಹೇಳುವಂತೆ, “ಜಮಾಲಿ ಗುಡ್ಡ’ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಒಂದಷ್ಟು ಘಟನೆಗಳು, ಪಾತ್ರಗಳ ಸುತ್ತ ಇಡೀ ಸಿನಿಮಾ ನಡೆಯುತ್ತದೆ. ಕೋವಿಡ್‌ ಮೊದಲನೇ ಲಾಕ್‌ಡೌನ್‌ನಲ್ಲಿ ನಿರ್ದೇಶಕ ಕುಶಾಲ್‌ ಗೌಡ ಮಾಡಿಕೊಂಡಿದ್ದ ಕಥೆ ಸುಮಾರು ಎರಡು ವರ್ಷಗಳ ಬಳಿಕ ಸಿನಿಮಾ ರೂಪ ಸಿಕ್ಕಿ ಈಗ ಬಿಡುಗಡೆಯಾಗಿದೆ.

“ಜಮಾಲಿ ಗುಡ್ಡ’ ಚಿತ್ರದ ಟೈಟಲ್‌ಗೆ “ಒನ್ಸ್‌ ಅಪಾನ್‌ ಎ ಟೈಮ್‌’ ಎಂಬ ಟ್ಯಾಗ್‌ ಲೈನ್‌ ಇದ್ದು, 1990ರ ದಶಕದ ಹಿನ್ನೆಲೆಯಲ್ಲಿ ಇಡೀ ಚಿತ್ರದ ಕಥೆ ನಡೆಯುತ್ತದೆ. “”ಜಮಾಲಿ ಗುಡ್ಡ’ ಚಿತ್ರದ ಕಥೆಯಲ್ಲಿ ಇರುವಂಥ ಕಾಲ್ಪನಿಕ ಊರಾದರೂ, ಇಲ್ಲಿ ಒಂದು ವಿಭಿನ್ನ ಸಂಸ್ಕೃತಿ, ವಿಭಿನ್ನ ವ್ಯಕ್ತಿತ್ವಗಳ ಅನಾವರಣ ವಾಗಲಿದೆ. ಇದರಲ್ಲಿ ಒಂದು ಜರ್ನಿ ಇದೆ. ಎಮೋಶನ್ಸ್‌ ಇದೆ. ಅದೆಲ್ಲವನ್ನೂ ದೃಶ್ಯದಲ್ಲಿ ಕಟ್ಟಿಕೊಟ್ಟಿದ್ದೇವೆ. ಜನ ಕೂಡಾ ಇಷ್ಟಪಟ್ಟಿದ್ದಾರೆ’ ಎಂಬುದು ಚಿತ್ರತಂಡದ ಮಾತು.

ಚಿಕ್ಕಮಗಳೂರು, ಕುದುರೆಮುಖ, ಕನಕಪುರ, ಹೊನ್ನಾವರ, ಗೋಕರ್ಣ, ಕಾರವಾರ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ನಿರ್ದೇಶಕರು ಸಾಕಷ್ಟು ತಿಳಿದುಕೊಂಡಿದ್ದಾರೆ. ಜಗತ್ತಿನ ಬೇರೆ ಬೇರೆ ಸಿನಿಮಾ, ಪುಸ್ತಕಗಳನ್ನು ಓದಿಕೊಂಡಿದ್ದಾರೆ. ಈ ಸಿನಿಮಾವನ್ನು ತುಂಬಾ ನೀಟಾಗಿ ಕಟ್ಟಿಕೊಟ್ಟಿದ್ದಾರೆ. ಹಾಗಾಗಿ, ಜನ ಇಷ್ಟಡುತ್ತಿದ್ದಾರೆ. ಇದೊಂದು ಫೀಲ್‌ ಇರುವ ಸಿನಿಮಾ. ಇಡೀ ಸಿನಿಮಾ ಪ್ರಯಾಣದ ಹಾದಿಯಲ್ಲೇ ಸಾಗುತ್ತದೆ. ನನ್ನ ಪಾತ್ರ ಕೂಡಾ ತುಂಬಾ ಸೊಗಸಾಗಿದೆ ಎನ್ನುವುದು ನಾಯಕ ಧನಂಜಯ್‌ ಮಾತು.

ನಟ ಡಾಲಿ ಧನಂಜಯ್‌, ಅದಿತಿ ಪ್ರಭುದೇವ, ಪ್ರಕಾಶ್‌ ಬೆಳವಾಡಿ, ಭಾವನಾ ರಾಮಣ್ಣ, ಪ್ರಾಣ್ಯಾ ಪಿ. ರಾವ್‌, ನಂದಗೋಪಾಲ್‌, ಯಶ್‌ ಶೆಟ್ಟಿ, ಸತ್ಯಣ್ಣ, ತ್ರಿವೇಣಿ ರಾವ್‌ ಮೊದಲಾದ ಕಲಾವಿದರು “ಜಮಾಲಿ ಗುಡ್ಡ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೂರು ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜಿಸಿದ್ದು, ಯೋಗರಾಜ್‌ ಭಟ್‌, ಜಯಂತ ಕಾಯ್ಕಿಣಿ, ಕುಶಾಲ್‌ ಗೌಡ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಸೋನು ನಿಗಮ್‌, ಶ್ರೇಯಾ ಘೋಷಾಲ್‌, ವಿಜಯ್‌ ಯೇಸುದಾಸ್‌ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ.

“ಜಮಾಲಿ ಗುಡ್ಡ’ದ ದೃಶ್ಯಗಳಿಗೆ ಮಾಸ್ತಿ ಮತ್ತು ಕುಶಾಲ್‌ ಗೌಡ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಕಾರ್ತಿಕ್‌ ಎಸ್‌. ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.