ಪುಣ್ಯಕೋಟಿಯ ಮುಂದುವರೆದ ಭಾಗ ಈ “ಒಂದಲ್ಲಾ ಎರಡಲ್ಲಾ’


Team Udayavani, Aug 23, 2018, 3:26 PM IST

ondalla-eradalla-1.jpg

“ರಾಮ ರಾಮಾ ರೇ’ ನಂತರ ಸತ್ಯಪ್ರಕಾಶ್‌ ನಿರ್ದೇಶಿಸಿರುವ “ಒಂದಲ್ಲಾ ಎರಡಲ್ಲಾ’ ಚಿತ್ರವು ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಬಾರಿ ಮಕ್ಕಳ ದೊಡ್ಡ ಕಥೆಯೊಂದಿಗೆ ಬಂದಿರುವ ಸತ್ಯ, ಇದು ಪುಣ್ಯಕೋಟಿಯ ಮುಂದುವರೆದ ಭಾಗ ಎನ್ನುತ್ತಾರೆ. ಚಿತ್ರದ ಕುರಿತು ಮಾತನಾಡುವ ಸತ್ಯ, “ಇದು “ಪುಣ್ಯಕೋಟಿ’ಯ ಮುಂದುವರೆದ ಭಾಗ ಎನ್ನಬಹುದು. ಅದರಲ್ಲಿ ನಿಜವಾದ ಕಾಡು, ಪ್ರಾಣಿಗಳು ಇದ್ದವು. ಆದರೆ, ಕಾಡೆಲ್ಲಾ ನಾಡಾಗಿ ಪರಿವರ್ತನೆಯಾಗಿವೆ. 

ಹಾಗೆಯೇ ಪ್ರಾಣಿಗಳೂ ಇವೆ. ಹುಲಿ, ತೋಳ ತರಹದ ಪ್ರಾಣಿಗಳಿವೆ. ಹಾಗೆಯೇ ಹಸು ತರಹದ ಮುಗಧರೂ ಇದ್ದಾರೆ. “ಪುಣ್ಯಕೋಟಿ’ ಕಥೆಯಲ್ಲಿ ಸತ್ಯ ಗೆಲ್ಲುತ್ತದೆ. ಇಲ್ಲಿ ಮುಗ್ಧತೆ ಗೆಲ್ಲುತ್ತದೆ’ ಎನ್ನುತ್ತಾರೆ ಸತ್ಯ.

ಮುಗ್ಧತೆ ಎನ್ನುವುದು ಎಲ್ಲರಲ್ಲೂ ಇರುವ ಮೂಲಭೂತ ಗುಣ ಎನ್ನುವ ಸತ್ಯ, “ಎಲ್ಲರಿಗೂ ಇನ್ನೊಬ್ಬರಿಗೆ ನೋವು ಮಾಡಬಾರದು ಎಂಬ ಮನಸ್ಸಿರುತ್ತದೆ. ಆದರೆ, ಕೆಲವೊಮ್ಮೆ ಪರಿಸ್ಥಿತಿಗನುಗುಣವಾಗಿ ಅದನ್ನು ದೂರ ತಳ್ಳಿರುತ್ತೇವೆ. ಆದರೂ ಅದು ನಮ್ಮಲ್ಲೇ ಇರುತ್ತದೆ. ಅದನ್ನು ಟಚ್‌ ಮಾಡುವ ಪ್ರಯತ್ನ ಇದು. ಇದು ಮಕ್ಕಳು ನೋಡಲೇಬೇಕಾದ ಚಿತ್ರ. ಏಕೆಂದರೆ,  ಮನುಷ್ಯನಿಗೆ ಕಷ್ಟ ನೋವು ಆದಾಗ ಸ್ಪಂದಿಸುವುದು ಮನುಷ್ಯ ಮಾತ್ರ ಅಂತ ಗೊತ್ತಾಗಬೇಕು. ಅಂತಹ ಅಂಶಗಳು ಈ ಚಿತ್ರದಲ್ಲಿದೆ. ಇಲ್ಲಿ ಯಾವುದೇ ಕೆಟ್ಟ ಪಾತ್ರಗಳಿಲ್ಲ. ಎಲ್ಲವರೂ ಒಳ್ಳೆಯವರೇ. ತಮ¤ಮ್ಮ ಪರಿಧಿಯಲ್ಲಿ ಎಲ್ಲರೂ ಹೇಗೆ ಸ್ಪಂದಿಸುತ್ತಾರೆ ಎನ್ನುವುದೇ ಚಿತ್ರದ ಕಥೆ. ಹಾಗಾಗಿ ಮಕ್ಕಳಿಗೆ ಅದು ಗೊತ್ತಾಗಬೇಕು. ಬರೀ ಕೆಟ್ಟವರೇ ಇದ್ದಾರೆ, ಕೆಟ್ಟದ್ದೇ ಆಗುತ್ತದೆ ಎಂಬುದು ಅವರ ಮನಸ್ಸಿನಿಂದ ಹೋಗಬೇಕು. ಗೊತ್ತಾಗುವುದಕ್ಕೆ ಈ ಚಿತ್ರ ನೋಡಬೇಕು’ ಎನ್ನುತ್ತಾರೆ ಸತ್ಯ.

ಇನ್ನು ಚಿತ್ರಕ್ಕೆ “ಒಂದಲ್ಲಾ ಎರಡಲ್ಲಾ’ ಎಂದು ಹೆಸರಿಟ್ಟಿರುವ ಬಗ್ಗೆ ಮಾತನಾಡುವ ಅವರು, “ಈ ಹೆಸರು ಚಿತ್ರಕ್ಕೆ ಸೂಕ್ತವಾಗಿದೆ. ಇಲ್ಲಿ ಪಾತ್ರಗಳು, ವಿಷಯಗಳು, ಸನ್ನಿವೇಶಗಳು ಎಲ್ಲವೂ ಜಾಸ್ತಿಯೇ. ಖುಷಿ, ದುಃಖ, ಭಾವನೆ ಎಲ್ಲವೂ ಎರಡಕ್ಕಿಂತ ಜಾಸ್ತಿ ಇರುವುದರಿಂದ ಈ ಹೆಸರು ಚಿತ್ರಕ್ಕೆ ಸೂಕ್ತವಾಗಿದೆ’ ಎನ್ನುತ್ತಾರೆ.

“ಒಂದಲ್ಲಾ ಎರಡಲ್ಲಾ’ ಚಿತ್ರದಲ್ಲಿ ಮಾಸ್ಟರ್‌ ರೋಹಿತ್‌, ಸಾಯಿಕೃಷ್ಣ ಕುಡ್ಲ, ಎಂ.ಕೆ. ಮಠ, ಆನಂದ ನೀನಾಸಂ, ಪ್ರಭುದೇವ ಹೊಸದುರ್ಗ ಮುಂತಾದವರು ನಟಿಸಿದ್ದು, ಲವಿತ್‌ ಅವರ ಛಾಯಾಗ್ರಹಣ ಮತ್ತು ವಾಸುಕಿ ವೈಭವ್‌ ಅವರ ಸಂಗೀತ ಈ ಚಿತ್ರಕ್ಕಿದೆ. ಚಿತ್ರವನ್ನು “ಹೆಬ್ಬುಲಿ’ ನಿರ್ಮಿಸಿದ್ದ ಉಮಾಪತಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.