Ondu Sarala Prema Kathe; ಟೀಸರ್ ನಲ್ಲಿ ಪಾತ್ರ ಪರಿಚಯ


Team Udayavani, Jan 27, 2024, 3:27 PM IST

Ondu Sarala Prema Kathe; ಟೀಸರ್ ನಲ್ಲಿ ಪಾತ್ರ ಪರಿಚಯ

“ಸಿಂಪಲ್ಲಾಗ್‌ ಒಂದ್‌ ಲವ್‌ಸ್ಟೋರಿ’ ಸಿನಿಮಾದ ಮೂಲಕ ಸ್ಯಾಂಡಲ್‌ ವುಡ್‌ ಅಂಗಳದಲ್ಲಿ ಮೋಡಿ ಮಾಡಿದ್ದ ನಿರ್ದೇಶಕ ಸುನಿ ಈ ಬಾರಿ “ಒಂದು ಸರಳ ಪ್ರೇಮಕಥೆ’ಯನ್ನು ಪ್ರೇಕ್ಷಕರ ಮುಂದಿಡಲು ತಯಾರಾಗಿದ್ದಾರೆ. ಹೌದು, ಸಿಂಪಲ್‌ ಸುನಿ ನಿರ್ದೇಶನದ “ಒಂದು ಸರಳ ಪ್ರೇಮಕಥೆ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಫೆಬ್ರವರಿ 8ರಂದು ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ.

ಅಂದಹಾಗೆ, “ಒಂದು ಸರಳ ಪ್ರೇಮಕಥೆ’ ಟೈಟಲ್‌ನಲ್ಲಿ ಸರಳವಾಗಿರಬಹುದು. ಆದರೆ ಸಿನಿಮಾ ಸುಮಾರಲ್ಲ, ಎಕ್ಸ್‌ಟ್ರಾರ್ಡಿನರಿ ಎನ್ನುವ ವಿಶ್ವಾಸದ ಮಾತು ನಿರ್ದೇಶಕ ಸುನಿ ಅವರದ್ದು. ಇನ್ನು “ಒಂದು ಸರಳ ಪ್ರೇಮಕಥೆ’ ಸಿನಿಮಾ ಬಿಡುಗಡೆ ಹತ್ತಿರವಾಗುತ್ತಿದ್ದಂತೆ, ಸಿನಿಮಾದ ಹಾಡು, ಕ್ಯಾರೆಕ್ಟರ್‌ ಟೀಸರ್‌ಗಳನ್ನು ಒಂದೊಂದಾಗಿಯೇ ಹರಿಬಿಡುತ್ತಿದೆ ಚಿತ್ರತಂಡ.

ಕೆಲ ದಿನಗಳ ಹಿಂದಷ್ಟೇ ವೀರ್‌ ಸಮರ್ಥ್ ಸಂಗೀತ ಸಂಯೋಜಿಸಿರುವ ಈ ಸಿನಿಮಾದ “ಗುನು ಗುನುಗು…’ ಎಂಬ ಹಾಡೊಂದನ್ನು ನಟ ಗಣೇಶ್‌ ಬಿಡುಗಡೆ ಮಾಡಿ, ಚಿತ್ರತಂಡತಂಡಕ್ಕೆ ಶುಭ ಕೋರಿದ್ದರು. ಅದಾದ ಬಳಿಕ ಚಿತ್ರತಂಡ ಇದೀಗ ನಾಯಕಿ ಸ್ವಾತಿಷ್ಠ ಹಾಗೂ ನಾಯಕ ವಿನಯ್‌ ರಾಜಕುಮಾರ್‌ ಅವರ ಕ್ಯಾರೆಕ್ಟರ್‌ ಟೀಸರ್‌ ಬಿಡುಗಡೆ ಮಾಡಿದೆ. ನಾಯಕಿ ಸ್ವಾತಿಷ್ಠ ಕೃಷ್ಣನ್‌ ಈ ಸಿನಿಮಾದಲ್ಲಿ ಅನುರಾಗ ಎಂಬ ಪಾತ್ರ ನಿರ್ವಹಿಸಿದ್ದು, ಈ ಕ್ಯಾರೆಕ್ಟರ್‌ ಟೀಸರ್‌ ಗೆ ತಮಿಳು ನಟ ವಿಜಯ್‌ ಸೇತುಪತಿ ಸಾಥ್‌ ನೀಡಿದ್ದರು. ಹಾಗೆಯೇ ನಾಯಕ ವಿನಯ್‌ ರಾಜ್‌ಕುಮಾರ್‌ ಅತಿಶಯ್‌ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಕ್ಯಾರೆಕ್ಟರ್‌ ಟೀಸರ್‌ ಕೂಡ ಈಗ ಬಿಡುಗಡೆಯಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ

“ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ನಾಯಕ ವಿನಯ್‌ ರಾಜಕುಮಾರ್‌ ಅವರಿಗೆ ಸ್ವಾತಿಷ್ಠ ಕೃಷ್ಣನ್‌ ಮತ್ತು ಮಲ್ಲಿಕಾ ಸಿಂಗ್‌ ನಾಯಕಿಯರಾಗಿ ಜೋಡಿಯಾಗಿದ್ದಾರೆ. ಹಿರಿಯ ನಟ ರಾಘವೇಂದ್ರ ರಾಜ್‌ ಕುಮಾರ್‌ ಕೂಡಾ ಒಂದು ಮುಖ್ಯ ಪಾತ್ರದಲ್ಲಿದ್ದಾರೆ.

ಮೈಸೂರು ಮೂಲದ ರಮೇಶ್‌ “ಒಂದು ಸರಳ ಪ್ರೇಮಕಥೆ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಸದ್ಯ ತನ್ನ ಟೈಟಲ್‌, ಕಾಸ್ಟಿಂಗ್‌, ಮೇಕಿಂಗ್‌ ಮತ್ತು ಪ್ರಮೋಶನ್ಸ್‌ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿರುವ “ಒಂದು ಸರಳ ಪ್ರೇಮಕಥೆ’ ಥಿಯೇಟರಿನಲ್ಲಿ ಹೇಗಿರಲಿದೆ ಎಂಬುದು ಇದೇ ಫೆಬ್ರವರಿ ವೇಳೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.