ಸಿನಿಮಾ ಮತ್ತು ಸಿನಿಮಾ ಮಾತ್ರ!


Team Udayavani, Sep 26, 2017, 12:37 PM IST

26-ZZ-12.jpg

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ “ಪತ್ತೇದಾರಿ ಪ್ರತಿಭಾ’ ಧಾರಾವಾಹಿಯಲ್ಲಿ ಅದೊಂದು ದಿನ ಮೇಘನಾ ಗಾಂವ್ಕರ್‌ ಕಾಣಿಸಿಕೊಂಡುಬಿಟ್ಟರು. ಶುರುವಾಯ್ತು ನೋಡಿ, ಒಂದರ ಹಿಂದೊಂದು ಸುದ್ದಿಗಳು. ಮೇಘನಾಗೆ ಅವಕಾಶವಿಲ್ಲ ಎಂದು ಕಿರುತೆರೆಗೆ ಹೋದರಂತೆ, ಅವರು ಮತ್ತೆ ಚಿತ್ರಗಳಲ್ಲಿ ನಟಿಸುವುದಿಲ್ಲವಂತೆ, ಅದಂತೆ, ಇದಂತೆ … ಎಂದು ಒಂದರ ಹಿಂದೊಂದು ಸುದ್ದಿಗಳು ಬಂದವು.

ಕೊನೆಗೆ ಮೇಘನಾ ಟ್ವೀಟ್‌ ಮಾಡುವವರೆಗೂ, ಈ ಅಂತೆ-ಕಂತೆಗಳು ನಿಲ್ಲಲಿಲ್ಲ. ಖುದ್ದು ಮೇಘನಾ ಟ್ವೀಟ್‌ ಮಾಡಿ, ತಾವು ಧಾರಾವಾಹಿಯಲ್ಲಿ ನಟಿಸುವುದಕ್ಕೆ ನವೀನ್‌ ಕೃಷ್ಣ ಅವರ ಸ್ನೇಹವೇ ಕಾರಣ, ಅವರು ಬಂದು ಕೇಳಿದ್ದಕ್ಕೆ ಧಾರಾವಾಹಿಯಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ ಮತ್ತು ತನ್ನ ಮೊದಲ ಆದ್ಯತೆ ಯಾವುತ್ತೂ ಸಿನಿಮಾಗೆ ಎಂದು ಹೇಳಿಕೊಳ್ಳುವವರೆಗೂ ಇವೆಲ್ಲಾ ಮುಂದುವರೆದಿತ್ತು. ಈ ಮಧ್ಯೆ ನವೀನ್‌ ಕೃಷ್ಣ ಸಹ ಟ್ವೀಟ್‌ ಮಾಡಿ, ನನ್ನ ಕರೆಗೆ ಓಗುಟ್ಟು ಅವರು ನಟಿಸುವುದಕ್ಕೆ ಒಪ್ಪಿಕೊಂಡರೇ ಹೊರತು, ಬೇರೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲಿಗೆ ಸಿನಿಮಾದಿಂದ ರಿಟೈರ್‌ ಆಗುವ ಮೇಘನಾ ಅವರ ಸುದ್ದಿ ಕ್ರಮೇಣ ಕಡಿಮೆಯಾಯಿತು.

ಇಷ್ಟಕ್ಕೂ ಯಾಕೆ ಇಂಥದ್ದೊಂದು ಸುದ್ದಿ ಹುಟ್ಟಿಕೊಂಡಿತು ಎಂಬುದಕ್ಕೂ ಕಾರಣವಿದ್ದೇ ಇದೆ. ಸುಖಾಸುಮ್ಮನೆ ಈ ರೀತಿ ಆಗುವುದಿಲ್ಲ. ಅದೇನೆಂದರೆ, “ಚಾರ್‌ಮಿನಾರ್‌’ ಚಿತ್ರದ ಯಶಸ್ಸಿನ ನಂತರವೂ, ಮೇಘನಾ ಒಪ್ಪಿದ್ದು ಮತ್ತು ನಟಿಸಿದ್ದು ಒಂದೇ ಒಂದು ಚಿತ್ರದಲ್ಲಿ. ಅದೂ “ಸಿಂಪಲ್ಲಾಗಿನ್ನೊಂದ್‌ ಲವ್‌ಸ್ಟೋರಿ’ ಮಾತ್ರ. ಮಿಕ್ಕಂತೆ ಮೇಘನಾ ಯಾವುದೇ ಚಿತ್ರದಲ್ಲೂ ನಟಿಸಿಲ್ಲ. ಹಾಗಾಗಿ ಮೇಘನಾಗೆ ಅವಕಾಶಗಳು ಕಾಡುತ್ತಿರಬಹುದು ಎಂಬ ಪ್ರಶ್ನೆಗಳು ಮೊದಲು ಶುರುವಾದವು. ಯಾವಾಗ ಅವರು “ಪತ್ತೇದಾರಿ ಪ್ರತಿಭಾ’ ಚಿತ್ರದಲ್ಲಿ ನಟಿಸಿದರೋ, ಅವಕಾಶ ಸಿಗುತ್ತಿಲ್ಲವಾದ್ದರಿಂದಲೇ ಅವರು ಕಿರುತೆರೆಗೆ ಹೋದರು ಎನ್ನುವಂತಹ ಸುದ್ದಿಗಳು ಹುಟ್ಟಿಕೊಂಡವು. ಕೊನೆಗೆ ಇದಕ್ಕೆಲ್ಲಾ ಉತ್ತರಿಸುವ ಮೂಲಕ, ಇಡೀ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ.

ಇನ್ನು ಮೇಘನಾ ಖುಷಿಯಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಕಾಶ್ಮೀರಕ್ಕೆ ಹೋಗಿ ತಣ್ಣಗೆ ವಾಪಸ್ಸು ಬಂದಿದ್ದಾರೆ. ಮೇಘನಾ ಕಾಶ್ಮೀರಕ್ಕೆ ಹೋಗಿದ್ದು ಶೂಟಿಂಗ್‌ಗಲ್ಲ. ಅದಕ್ಕೆ ಬೇರೆಯದೇ ಕಾರಣವಿದೆ. ಮೇಘನಾ ಅಲ್ಲಿಗೆ ಹೋಗುವುದಕ್ಕೆ ಮುಖ್ಯ ಕಾರಣ ಹುಟ್ಟುಹಬ್ಬ. ಕಳೆದ ಕೆಲವು ವರ್ಷಗಳಿಂದ, ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಮನೆಯಿಂದ ಬೇರೆ ಸ್ಥಳದಲ್ಲಿ ಆಚರಿಸಿಕೊಳ್ಳುವ ಸಂಪ್ರದಾಯವನ್ನು ಮೇಘನಾ ಹುಟ್ಟುಹಾಕಿದ್ದಾರೆ. ಅದರಂತೆ ಅವರು ಈ ಬಾರಿ ಕಾಶ್ಮೀರದ ಪ್ರವಾಸಕ್ಕೆ ಹೋಗಿ ಬಂದಿದ್ದಾರೆ. ಅಲ್ಲೇ ತಮ್ಮ ಫ್ಯಾಮಿಲಿಯ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಬಂಾªರೆ.

ಸರಿ ಮುಂದೇನು ಎಂಬ ಪ್ರಶ್ನೆ ಎಲ್ಲರಿಗೂ ಇದ್ದಂತೆ, ಅವರಿಗೂ ಇದೆ. ಅದಕ್ಕೆ ಕಾದು ನೋಡುವುದಕ್ಕೆ ಅವರು ತೀರ್ಮಾನಿಸಿದ್ದಾರೆ. ಒಳ್ಳೆಯ ಕಥೆ ಬಂದ ತಕ್ಷಣ, ಮೇಘನಾ ಇನ್ನೊಂದು ಸಿನಿಮಾ ಒಪ್ಪಿಕೊಳ್ಳುತ್ತಾರಂತೆ. ಆದರೆ, ಆ ಇನ್ನೊಂದು ಒಳ್ಳೆಯ ಕಥೆ ಇರುವ ಸಿನಿಮಾ ಯಾವಾಗ ಬರುತ್ತದೆ ಎಂಬುದು ಮಾತ್ರ ಸದ್ಯಕ್ಕೆ ರಹಸ್ಯವಾಗಿಯೇ ಉಳಿದಿದೆ.

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.