ಆಸ್ಕರ್‌ಗೆ ಪ್ರವೇಶ ಪಡೆದಿರುವ “ಚೆಲ್ಲೋ ಶೋ’ : ಪೆರಿಯಡ್ಕದ ಯುವಕನ ಸಿನೆಮಾ ಯಾನ

ಆಸ್ಕರ್‌ಗೆ ಪ್ರವೇಶ ಪಡೆದಿರುವ "ಚೆಲ್ಲೋ ಶೋ' ಎಡಿಟರ್‌ ಪವನ್‌ ಭಟ್‌

Team Udayavani, Sep 22, 2022, 8:11 AM IST

ಆಸ್ಕರ್‌ಗೆ ಪ್ರವೇಶ ಪಡೆದಿರುವ “ಚೆಲ್ಲೋ ಶೋ’ : ಪೆರಿಯಡ್ಕದ ಯುವಕನ ಸಿನೆಮಾ ಯಾನ

ಪುತ್ತೂರು: ಭಾರತದಿಂದ ಆಸ್ಕರ್‌ ಪ್ರಶಸ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದಿರುವ “ಚೆಲ್ಲೋ ಶೋ’ ಸಿನೆಮಾದ ಸಂಕಲನಕಾರ (ಎಡಿಟರ್‌) ಆಗಿ ಕಾರ್ಯ ನಿರ್ವಹಿಸಿದ್ದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪವನ್‌ ಭಟ್‌.

ಎಂಜಿನಿಯರಿಂಗ್‌ ಪದವೀಧರ ನಾಗಿರುವ ಪವನ್‌ ಬ್ಯಾಂಕ್‌ ಉದ್ಯೋಗಿ ಯಾಗಿದ್ದ ಗೋಪಾಲಕೃಷ್ಣ ಭಟ್‌ ಮತ್ತು ಸರೋಜಾ ಭಟ್‌ ದಂಪತಿಯ ಪುತ್ರ. ಬೆಂಗಳೂರಿನಲ್ಲಿ ನೆಲೆಸಿದ್ದು ಸಿನೆಮಾ ರಂಗದಲ್ಲಿ ಬಹು ಬೇಡಿಕೆಯುಳ್ಳ ಎಡಿಟರ್‌ ಆಗಿ ರೂಪುಗೊಳ್ಳುತ್ತಿದ್ದಾರೆ.

ಪವನ್‌ ಶಿಕ್ಷಣ ಪಡೆದದ್ದು ಬೆಂಗಳೂರು ಹಾಗೂ ಕೋಲ್ಕತಾದಲ್ಲಿ. ಪಿಯುಸಿ ಕಲಿಯುವಾಗಲೇ ಸಿನೆಮಾದ ಬಗ್ಗೆ ಅಪಾರ ಆಸಕ್ತಿ. ಶೈಕ್ಷಣಿಕ ಕ್ಷೇತ್ರದಲ್ಲಿ ಎಂಜಿನಿಯರ್‌ ವಿಭಾಗದಲ್ಲಿ ಕಂಪ್ಯೂಟರ್‌ ಕ್ಷೇತ್ರ ಆರಿಸಿಕೊಂಡ ಪರಿಣಾಮ ಎಡಿಟಿಂಗ್‌ ವಿಭಾಗ ಕೂಡ ಹತ್ತಿರವಾಯಿತು. ಪದವಿಯ ಬಳಿಕ ಮುಂಬಯಿಯಲ್ಲಿ 2 ವರ್ಷ ಎಡಿಟಿಂಗ್‌ಗೆ ಸಂಬಂಧಿಸಿ ಉನ್ನತ ಶಿಕ್ಷಣ ಪಡೆದಿದ್ದಾರೆ.

ಏಕೈಕ ಕನ್ನಡಿಗ
“ಚೆಲ್ಲೋ ಶೋ’ ಸಿನೆಮಾದಲ್ಲಿ ಕೆಲಸ ನಿರ್ವಹಿಸಿದ ಏಕೈಕ ಕನ್ನಡಿಗ ಪವನ್‌. 3 ವರ್ಷಗಳಿಂದ ಈ ಸಿನೆಮಾದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಸ್ಕರ್‌ಗೆ ಪ್ರವೇಶ ಪಡೆಯುವ ಯೋಚನೆ ಮಾಡಿರಲಿಲ್ಲ. ಪ್ರವೇಶ ಪಡೆದಿರುವುದು ಹೆಮ್ಮೆಯ ವಿಚಾರ ಎಂದು ಖುಷಿ ಹಂಚಿಕೊಂಡಿದ್ದಾರೆ ಪವನ್‌.

ನಾಲ್ಕು ಪೂರ್ಣ ಸಿನೆಮಾ ಪವನ್‌ ಭಟ್‌ ನಾಲ್ಕು ಸಿನೆಮಾಗಳಿಗೆ ಪೂರ್ಣ ಪ್ರಮಾಣದಲ್ಲಿ ಎಡಿಟರ್‌ ಆಗಿ ಕಾರ್ಯನಿರ್ವಹಿಸಿದ್ದಾರೆ. 20 ಅಧಿಕ ಸಿನೆಮಾಗಳಲ್ಲಿ ಕೆಲಸ ನಿರ್ವಹಿಸಿದ ಅನುಭವಿ. “ಭಸ್ಮಾಸುರ್‌’ ಪ್ರಥಮ ಸಿನೆಮಾ. ಇದು ದೇಶ – ವಿದೇಶಗಳಲ್ಲಿ ಹಲವು ಪ್ರಶಸ್ತಿ ಪಡೆದಿದೆ. ನನಗೆ ಕನ್ನಡ ಚಿತ್ರದಲ್ಲಿ ಕೆಲಸ ಮಾಡುವ ಆಸೆ ಇದೆ. ಈಗಾಗಲೇ ಒಂದು ಸಿನೆಮಾ ಮಾತುಕತೆಯಲ್ಲಿದೆ ಎನ್ನುತ್ತಾರೆ ಅವರು.

“ಛೆಲ್ಲೋ ಶೋ’ದಲ್ಲೇನಿದೆ?
9 ವರ್ಷದ ಬಾಲಕನೊಬ್ಬನಿಗೆ ಸಿನೆಮಾದ ಮೇಲೆ ಉಂಟಾಗುವ ಪ್ರೀತಿಯ ಕಥೆಯನ್ನು “ಚೆಲ್ಲೋ ಶೋ’ ವಿವರಿಸುತ್ತದೆ. ಈ ಸಿನೆಮಾ ಕಳೆದ ವರ್ಷ ಜೂನ್‌ನಲ್ಲಿ ಟ್ರಿಬೆಕಾ ಚಲನಚಿತ್ರೋತ್ಸವದಲ್ಲಿ ಪ್ರೀಮಿಯರ್‌ ಆಗಿತ್ತು. ಭವಿನ್‌ ರಾಬರಿ, ಭವೇಶ್‌ ಶ್ರೀಮಲಿ, ರಿಚಾ ಮೀನಾ ಸೇರಿ ಅನೇಕರು ಅಭಿನಯಿಸಿರುವ ಸಿನೆಮಾ ಸ್ಪೇನ್‌ನ ಚಲನಚಿತ್ರೋತ್ಸವದಲ್ಲಿ ಗೋಲ್ಡನ್‌ ಸ್ಮೈಕ್‌ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅ. 14ರಂದು “ಲಾಸ್ಟ್‌ ಫಿಲಂ ಶೋ’ (ಇಂಗ್ಲಿಷ್‌) ಹೆಸರಿನಲ್ಲಿ ವಿಶ್ವಾದ್ಯಂತ ತೆರೆ ಕಾಣಲಿದೆ.

ಇದನ್ನೂ ಓದಿ : ಟಾಟಾ ನೆಕ್ಸಾನ್‌ ಹೊಸ ವೇರಿಯೆಂಟ್‌; ವೈರ್‌ಲೆಸ್‌ ಚಾರ್ಜರ್‌ ಸೇರಿ ಹಲವು ಸೌಲಭ್ಯ

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.