ಗಾಂಧೀಜಿ ಬಾಲ್ಯದ ಹಿಂದೆ ಪಿ.ಶೇಷಾದ್ರಿ

ಚಿತ್ರೀಕರಣದಲ್ಲಿ "ಮೋಹನದಾಸ'ನ ಬಯೋಪಿಕ್‌ ಬಿಝಿ

Team Udayavani, Jul 18, 2019, 3:02 AM IST

Mohandas

ಮಹಾತ್ಮಾ ಗಾಂಧಿಜೀಯವರ ಬದುಕು, ತತ್ವ ಮತ್ತು ಆದರ್ಶಗಳಿಂದ ಪ್ರೇರಣೆಗೊಂಡು ಬೇರೆ ಬೇರೆ ಭಾಷೆಗಳಲ್ಲಿ ತೆರೆಗೆ ಬಂದ ಹಲವು ಚಿತ್ರಗಳ ಬಗ್ಗೆ ನೀವೆಲ್ಲ ಕೇಳಿರುತ್ತೀರಿ, ನೋಡಿರುತ್ತೀರಿ. ಇನ್ನು ಕನ್ನಡದಲ್ಲಿ ಗಾಂಧಿ ವಿಚಾರಗಳನ್ನ ಇಟ್ಟುಕೊಂಡು “ಕೂರ್ಮಾವತಾರ’, “ನಾನೂ ಗಾಂಧಿ’ ಹೀಗೆ ಹಲವು ಚಿತ್ರಗಳು ಬಂದಿವೆ. ಈಗ ಗಾಂಧಿಯ ಜೀವನವನ್ನೇ ಕಥಾಹಂದರವಾಗಿ ಇಟ್ಟುಕೊಂಡು ಮತ್ತೂಂದು ಚಿತ್ರ ತೆರೆಗೆ ಬರುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಮೋಹನದಾಸ’.

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿ ತೆರೆಗೆ ತರುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಕನ್ನಡ, ಹಿಂದಿ ಮತ್ತು ಇಂಗ್ಲೀಷ್‌ ಭಾಷೆಯಲ್ಲಿ “ಮೋಹನದಾಸ’ ಚಿತ್ರ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಇನ್ನು “ಮೋಹನದಾಸ’ ಪಿ. ಶೇಷಾದ್ರಿ ನಿರ್ದೇಶನದ 12ನೇ ಚಿತ್ರ. ಬಹಳ ವರ್ಷಗಳಿಂದ ಗಾಂಧಿ ಜೀವನವನ್ನು ತೆರೆಯ ಮೇಲೆ ತರಬೇಕು ಎನ್ನುವ ಪಿ. ಶೇಷಾದ್ರಿ ಅವರ ಕನಸು ಈ ಚಿತ್ರದ ಮೂಲಕ ನನಸಾಗುತ್ತಿದೆ.

ಇತ್ತೀಚೆಗೆ “ಮೋಹನದಾಸ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಸೆಟ್‌ಗೆ ಪತ್ರಕರ್ತರು ಮತ್ತು ಮಾಧ್ಯಮಗಳನ್ನು ಆಹ್ವಾನಿಸಿದ್ದ ನಿರ್ದೇಶಕ ಪಿ. ಶೇಷಾದ್ರಿ ಮತ್ತು ಚಿತ್ರತಂಡ, “ಮೋಹನದಾಸ’ ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡಿದೆ. ತಮ್ಮ ಚಿತ್ರದ ಬಗ್ಗೆ ಮೊದಲು ಮಾತಿಗಿಳಿದ ಪಿ. ಶೇಷಾದ್ರಿ, “ಭಾರತೀಯ ಚಿತ್ರರಂಗದಲ್ಲಿ ಗಾಂಧಿ ತತ್ವ, ಆದರ್ಶಗಳಿಂದ ಪ್ರೇರಣೆ ಪಡೆದುಕೊಂಡು ಹಲವು ಚಿತ್ರಗಳು ಬಂದಿವೆ. ಆದ್ರೆ ಗಾಂಧಿ ಜೀವನವನ್ನೇ ಕಥೆಯಾಗಿಟ್ಟುಕೊಂಡು ತೆರೆಮೇಲೆ ಬಂದಿರುವುದು ಅಧಿಕೃತವಾಗಿ ನನಗೆ ಗೊತ್ತಿರುವಂತೆ ಕೇವಲ ಮೂರು ಚಿತ್ರಗಳು ಮಾತ್ರ.

“ಮೋಹನದಾಸ’ ಅಂಥ ಸಾಲಿಗೆ ಸೇರುವ ಚಿತ್ರ. ಇಲ್ಲಿ ಮಹಾತ್ಮಾ ಗಾಂಧಿ ಕಾಣುವುದಿಲ್ಲ. ಅವರ ಬದಲಾಗಿ ಬಾಲ್ಯದ “ಮೋಹನದಾಸ’ ಕಾಣುತ್ತಾನೆ. ಗಾಂಧೀಜಿಯವರ ಬಗ್ಗೆ ಬೋಳಾರ್‌ ಬರೆದಿದ್ದ “ಪಾಪು ಗಾಂಧಿ ಬಾಪು ಗಾಂಧಿಯಾದ ಕಥೆ’ ಕೃತಿ ಓದಿದ ಮೇಲೆ ಇದನ್ನು ಚಿತ್ರವಾಗಿ ತೆರೆಮೇಲೆ ತಂದರೆ ಹೇಗೆ ಎನ್ನುವ ಯೋಚನೆ ಬಂತು. ಸುಮಾರು ಮೂರು-ನಾಲ್ಕು ವರ್ಷಗಳ ಪ್ರಯತ್ನ 14-15 ಬಾರಿ ಸ್ಕ್ರಿಪ್ಟ್ ಬದಲಾವಣೆ ಆದ ನಂತರ “ಮೋಹನದಾಸ’ನನ್ನು ಈಗ ತೆರೆಗೆ ತರುತ್ತಿದ್ದೇವೆ’ ಎನ್ನುವ ವಿವರಣೆ ನೀಡಿದರು.

“ಮೋಹನದಾಸ’ ಚಿತ್ರದ ಪ್ರಮುಖ ಪಾತ್ರಕ್ಕಾಗಿ ಸುಮಾರು 1500 ಮಕ್ಕಳನ್ನು ಆಡಿಷನ್‌ ಮಾಡಿ ಕೊನೆಗೆ ಚಿತ್ರಕ್ಕೆ ಬೇಕಾದ 2 ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ. “7 ವರ್ಷದಿಂದ 13 ವರ್ಷರ ಬಾಲ್ಯದ ಗಾಂಧಿಯನ್ನ ಈ ಚಿತ್ರದಲ್ಲಿ ನೋಡಬಹುದು. ಮೋಹನದಾಸನ ಬಾಲ್ಯದ 8 ವರ್ಷದ ಜೀವನದ ಮಹತ್ತರ ಘಟನೆಗಳೆಲ್ಲವನ್ನೂ ಇಲ್ಲಿ ದಾಖಲಿಸುವ ಪ್ರಯತ್ನ ಮಾಡಿದ್ದೇವೆ.

1885ರ ವಾತಾವರಣ ರೀ ಕ್ರಿಯೇಟ್‌ ಮಾಡಲಾಗಿದೆ. ಗಾಂಧಿ ಸಿಗರೇಟ್‌ ಸೇದಿರುವುದುದು, ಸುಳ್ಳು ಹೇಳಿರುವುದು, ವೇಶ್ಯೆಯ ಸಂಗ ಮಾಡಲು ಬಯಸಿದ್ದು, ಹೀಗೆ ಗಾಂಧಿ ಬಾಲ್ಯದ ಅನೇಕ ತಿರುವುಗಳನ್ನ ಇಲ್ಲಿ ದಾಖಲಿಸಲಾಗಿದೆ. ಗಾಂಧೀಜಿಯ ಜೀವನ ಎಲ್ಲಾ ಕಾಲಕ್ಕೂ, ಎಲ್ಲರಿಗೂ ಸಲ್ಲುವಂಥದ್ದು ಆಗಿರುವುದರಿಂದ, ಆದಷ್ಟು ವಸ್ತುನಿಷ್ಠವಾಗಿ ಬಯೋಪಿಕ್‌ ರೀತಿಯಲ್ಲೇ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಪಿ. ಶೇಷಾದ್ರಿ.

“ಮೋಹನದಾಸ’ ಚಿತ್ರದಲ್ಲಿ ಬಹುಭಾಷಾ ನಟ ಅನಂತ ಮಹಾದೇವನ್‌, ಶೃತಿ, ನಂದಿನಿ, ಸಮರ್ಥ್, ಅಭಯಂಕರ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ 1982ರಲ್ಲಿ ತೆರೆಕಂಡ “ಗಾಂಧೀ’ ಚಿತ್ರದಲ್ಲಿ ಗಾಂಧೀಜಿಯ ಪಾತ್ರವನ್ನು ನಿರ್ವಹಿಸಿದ್ದ ಬೆನ್‌ ಕಿಂಗ್ಸ್‌ಲೇ ಅವರನ್ನು ಚಿತ್ರಕ್ಕೆ ಕರೆತರುವ ಪ್ರಯತ್ನದಲ್ಲಿದೆ ಚಿತ್ರತಂಡ. “ಸಾಧ್ಯವಾದರೆ, ಚಿತ್ರಕ್ಕೆ ಅಮಿತಾಬ್‌ ಬಚ್ಚನ್‌ ಸೇರಿದಂತೆ ಯಾವುದಾದರೂ ಸ್ಟಾರ್‌ ನಟರೊಬ್ಬರನ್ನು ಕರೆತರುವ ಯೋಚನೆ ಕೂಡ ಇದೆ’ ಎನ್ನುತ್ತಾರೆ ಪಿ. ಶೇಷಾದ್ರಿ.

“ಮೋಹನದಾಸ’ ಚಿತ್ರಕ್ಕೆ ಹಿರಿಯ ಛಾಯಾಗ್ರಾಹಕ ಭಾಸ್ಕರ್‌ ಕ್ಯಾಮರಾ ಹಿಡಿದರೆ, ಬಿ.ಎಸ್‌ ಕೆಂಪರಾಜು ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್‌ಕೋಟ್‌, ಪೋರಬಂದರ್‌ ಮತ್ತು ಬೆಂಗಳೂರು ಸುತ್ತಮುತ್ತ “ಮೋಹನದಾಸ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಭರದಿಂದ ಚಿತ್ರೀಕರಣದಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಅಕ್ಟೋಬರ್‌ ತಿಂಗಳಿನಲ್ಲಿ “ಮೋಹನದಾಸ’ನನ್ನು ತೆರೆಗೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.