ನೈಜ ಘಟನೆ ಆಧಾರಿತ ‘ಪಾಲಾರ್’ ಫೆ.24ಕ್ಕೆ ತೆರೆಗೆ


Team Udayavani, Feb 2, 2023, 4:39 PM IST

palar

ಕೋಲಾರ ಮತ್ತು ದೇವನಹಳ್ಳಿ ಸುತ್ತಮುತ್ತ ಕೆಲ ವರ್ಷಗಳ ಹಿಂದೆ ಶೋಷಿತ ಸಮುದಾಯದ ಮೇಲೆ ನಡೆದಿದೆ ಎನ್ನಲಾದ ನೈಜ ಘಟನೆಯೊಂದು ಈಗ “ಪಾಲಾರ್‌’ ಎಂಬ ಹೆಸರಿನಲ್ಲಿ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಸದ್ದಿಲ್ಲದೆ “ಪಾಲಾರ್‌’ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ಫೆ. 24ಕ್ಕೆ “ಪಾಲಾರ್‌’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.

ಸದ್ಯ “ಪಾಲಾರ್‌’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಮೊದಲ ಟ್ರೇಲರ್‌ ಬಿಡುಗಡೆ ಮಾಡಿದೆ. ಇದೇ ವೇಳೆ ಮಾತನಾಡಿದ “ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವಾ ನವೀನ್‌, “ಕೆಲ ವರ್ಷಗಳ ಹಿಂದೆ ಕೋಲಾರ ಮತ್ತು ದೇವನಹಳ್ಳಿ ಭಾದಲ್ಲಿ ನಡೆದ ನೈಜ ಘಟನೆಗಳನ್ನು ಇಟ್ಟುಕೊಂಡು ಈ ಚಿತ್ರಕಥೆ ಹೆಣೆದಿದ್ದೇವೆ. ಇದೊಂದು ಮಹಿಳಾ ಪ್ರಧಾನವಾಗಿರುವ ಹಾಗೂ ಹೋರಾಟ, ಸಂಘರ್ಷದ ಕಥಾಹಂದರ ಹೊಂದಿರುವ ಸಿನಿಮಾ. ನಮ್ಮ ಜೀವನದಲ್ಲಿ ನಡೆದ, ನಾವು ನೋಡಿದಂಥ ಕೆಲ ನೈಜ ಘಟನೆಗಳನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ’ ಎಂದು ವಿವರಣೆ ನೀಡಿದರು.

ಅಂದಹಾಗೆ, ಸಿನಿಮಾದ ಹೆಸರು “ಪಾಲಾರ್‌’ ಅಂತಿದ್ದರೂ, ಪಾಲಾರ್‌ ನದಿಗೂ ನಮ್ಮ ಕಥೆಗೂ ಯಾವುದೇ ಸಂಬಂಧವಿಲ್ಲ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಡೆಯುವ ಕಥೆಯಿದು. ಹಾಗಾಗಿ “ಪಾಲಾರ್‌’ ಎಂಬ ಹೆಸರನ್ನು ಒಂದು ರೂಪಕವಾಗಿ ಅದನ್ನು ಸಿನಿಮಾದಲ್ಲಿ ಬಳಸಿದ್ದೇವೆ. ಇದೊಂದು ಕಂಟೆಂಟ್‌ ಬೇಸ್‌ ಸಿನಿಮಾ. ಸಿನಿಮಾದ ಕಥೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎನ್ನುವುದು ಚಿತ್ರತಂಡದ ಭರವಸೆಯ ಮಾತು.

ತೆಲುಗಿನ “ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ. ಜಿ ಉಮಾ ಕೋಲಾರ ಮುಖ್ಯ ಪಾತ್ರದಲ್ಲಿ ನಟಿಸಿರುವ “ಪಾಲಾರ್‌’ ಚಿತ್ರದಲ್ಲಿ ತಿಲಕ್‌ ರಾಜ್‌ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸುಮಾರು ನೂರಕ್ಕೂ ಹೆಚ್ಚು ಕಲಾವಿದರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಆಸಿ ರೆಹಾನ್‌ ಛಾಯಾಗ್ರಹಣ, ವಲಿ ಕುಲಾಯಿಸ್‌ ಸಂಕಲನವಿದೆ.

“ಪಾಲಾರ್‌’ ಸಿನಿಮಾದ ನಾಲ್ಕು ಹಾಡುಗಳಿಗೆ ಸುಬ್ರಮಣ್ಯ ಆಚಾರ್ಯ ಸಂಗೀತವಿದೆ. “ಸೌನವಿ ಕ್ರಿಯೇಷನ್‌’ ಮತ್ತು “ಹೆಲೋ ಗ್ಲೋಬಲ್’ ಬ್ಯಾನರ್‌ನಲ್ಲಿ ಕೆ. ಆರ್‌ ಸೌಜನ್ಯಾ, ಸೌಂದರ್ಯ ಕೆ. ಆರ್‌ ಮತ್ತು ನವೀನ್‌ ಕುಮಾರ್‌ ಬಾಬು “ಪಾರ್ಲಾ’ ಚಿತ್ರವನ್ನು ನಿರ್ಮಿಸಿದ್ದಾರೆ.

ಬಾಗೇಪಲ್ಲಿ, ಕೋಲಾರ, ದೇವನಹಳ್ಳಿ, ಚಿಕ್ಕಾಬಳ್ಳಾಪುರ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಒಟ್ಟಾರೆ ಬಹುತೇಕ ಹೊಸ ಪ್ರತಿಭೆಗಳ “ಪಾಲಾರ್‌’ ಹೇಗಿರಲಿದೆ ಎಂಬುದು ಇದೇ ತಿಂಗಳಾಂತ್ಯಕ್ಕೆ ಗೊತ್ತಾಗಲಿದೆ

ಟಾಪ್ ನ್ಯೂಸ್

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

‘ಕೌಸಲ್ಯ ಸುಪ್ರಜಾ ರಾಮ’ನಿಗೆ ನಾಯಕಿಯಾದ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ನಿಗೆ ನಾಯಕಿಯಾದ ಬೃಂದಾ ಆಚಾರ್ಯ

ಅರ್ಜುನ್ ಜನ್ಯಾ ‘45’ ಚಿತ್ರಕ್ಕೆ ನಾಯಕಿಯ ಹುಡುಕಾಟ

ಅರ್ಜುನ್ ಜನ್ಯಾ ‘45’ ಚಿತ್ರಕ್ಕೆ ನಾಯಕಿಯ ಹುಡುಕಾಟ

ಗೆಳೆತನದ ಸುತ್ತ ‘ಲಿಲ್ಲಿ’; ಮಕ್ಕಳ ಪ್ಯಾನ್ ಇಂಡಿಯಾ ಚಿತ್ರ

ಗೆಳೆತನದ ಸುತ್ತ ‘ಲಿಲ್ಲಿ’; ಮಕ್ಕಳ ಪ್ಯಾನ್ ಇಂಡಿಯಾ ಚಿತ್ರ

avantika shetty

ನನಗೊಂದು ಅವಕಾಶ ಕೊಡಿ; ಅವಂತಿಕಾ ಶೆಟ್ಟಿ ಮನವಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.