ಸಿನಿ ಜರ್ನಿ ಬಗ್ಗೆ ಸಂತೋಷ ಇದೆ.. ತೃಪ್ತಿ ಇಲ್ಲ; ‘ಪಾವನಾ’ ದಶಕದ ಸಂಭ್ರಮ


Team Udayavani, Mar 18, 2023, 4:51 PM IST

paavana gowda spoke about her ten years of cinema journey

ಗೊಂಬೆಗಳ ಲವ್‌’ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟ ಗೊಂಬೆ ನಟಿ ಪಾವನಾ. ಕನ್ನಡ ಚಿತ್ರರಂಗದಲ್ಲಿ ಕಳೆದ ಹತ್ತು ವರ್ಷಗಳಿಂದ ಸಕ್ರಿಯರಾಗಿರುವ ಪಾವನಾ ಸದ್ಯ ಸಾಲು ಸಾಲು ಚಿತ್ರ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ “ಗೌಳಿ’ ಚಿತ್ರದ ಮೂಲಕ ಭಿನ್ನವಾಗಿ ತೆರೆ ಮೇಲೆ ಬಂದ ಪಾವನಾ ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಪಾತ್ರಗಳ ಮೂಲಕ ಬರಲು ಸಜ್ಜಾಗಿದ್ದಾರೆ.

ಹತ್ತು ವರ್ಷದ ಸಿನಿ ಜರ್ನಿ ಬಗ್ಗೆ ಹೇಳಿ?

ಹತ್ತು ವರ್ಷದ ನನ್ನ ಸಿನಿ ಜರ್ನಿ ಉತ್ತಮವಾಗಿತ್ತು. ಸಾಕಷ್ಟು ಏಳು ಬೀಳುಗಳಿಂದ ಕೂಡಿದ ಜರ್ನಿಯಲ್ಲಿ ಎಲ್ಲವನ್ನೂ ಸಮನಾಗಿ ಕಂಡಿದ್ದೇನೆ. ಭಿನ್ನ -ವಿಭಿನ್ನ ಪಾತ್ರಗಳು, ಕಥೆಗಳನ್ನು ಮಾಡಿದ್ದೇನೆ. ಸಿನಿ ಜರ್ನಿ ಬಗ್ಗೆ ಸಂತೋಷವಿದೆ. ಆದರೆ ತೃಪ್ತಿ ಇಲ್ಲ. ಯಾಕೆಂದರೆ ಸಾಧಿಸುವುದು ಬಹಳಷ್ಟಿದೆ. ಇಲ್ಲಿವರೆಗೆ ಮಾಡಿದ ಚಿತ್ರ ಹಾಗೂ ಪಾತ್ರಗಳು ನನಗೆ ಒಂದು ಗುರುತಿಸುವಿಕೆಯನ್ನು ನೀಡಿದೆ.

ನಿಮ್ಮ ಮುಂದಿನ ಚಿತ್ರಗಳು?

ಸದ್ಯ ನನ್ನ ನಟನೆಯ “ಪ್ರಭುತ್ವ’ ಸಿನಿಮಾ ಏಪ್ರಿಲ್‌ನಲ್ಲಿ ಬಿಡುಗಡೆಗೊಳ್ಳಲಿದೆ. “ಅಜ್ಞಾತವಾಸಿ’ ಎನ್ನುವ ಚಿತ್ರದ ಕೆಲಸಗಳು ಮುಗಿದಿದ್ದು ಆದಷ್ಟು ಬೇಗ ರಿಲೀಸ್‌ ಆಗಲಿದೆ. ಹಾಗೇ “ಮೆಹಬೂಬ’ ಅನ್ನುವ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ.

ನಿಮ್ಮ ಕನಸಿನ ಪಾತ್ರ?

ನಾನು ಪ್ರತಿಯೊಂದು ಚಿತ್ರಗಳನ್ನು ನೋಡಿದಾಗಲೂ ನಾನು ಈ ಪಾತ್ರ ಮಾಡಿದ್ದರೆ ಹೇಗಿರುತ್ತಿತ್ತು ಎನ್ನುವ ಕುತೂಹಲ ನನಗೆ ಇದ್ದೇ ಇರುತ್ತದೆ. ಹಾಗಾಗಿ ಎಲ್ಲಾ ಪಾತ್ರಗಳಲ್ಲಿ ಮಿಂಚುವಾಸೆ. ಕೇವಲ ಒಂದು ಪಾತ್ರ ಎಂದು ನನ್ನನ್ನು ನಾನೇ ಮಿತಿ ಗೊಳಿಸದೇ ಎಲ್ಲರ ರೀತಿಯಲ್ಲೂ ನನ್ನ ನಟನೆಗೆ, ಪಾತ್ರಕ್ಕೆ ಅವಕಾಶ ಸಿಗಬೇಕು ಎಂದು ಬಯಸುತ್ತೇನೆ. ಹಾಗಾಗಿ, ಒಂದು ಎರಡೂ ಅಲ್ಲಾ ಎಲ್ಲಾ ರೀತಿಯ ಪಾತ್ರಗಳಲ್ಲಿ ಅಭಿನಯಿಸಲು ನನಗೆ ಇಷ್ಟ.

2013 ರ ರಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದೀರಿ.

ಆದರೆ ಚಿತ್ರಗಳ ಸಂಖ್ಯೆ ಕಡಿಮೆ ಇದೆಯಲ್ಲ? ನಾನು 2013ರಿಂದ ಚಿತ್ರರಂಗದಲ್ಲಿದ್ದೇನೆ. ಇಲ್ಲಿವರೆಗೆ ಮಾಡಿರುವ ಚಿತ್ರಗಳ ಸಂಖ್ಯೆ ದೊಡ್ಡದಿಲ್ಲದಿರಬಹುದು, ಆದರೆ ಉತ್ತಮ ಚಿತ್ರಗಳನ್ನು ಮಾಡಿದ್ದೇನೆ. ಕ್ವಾಂಟಿಟಿಗಿಂತ ಕ್ವಾಲಿಟಿ ಚಿತ್ರಗಳು ನನಗೆ ಮುಖ್ಯ. ಉತ್ತಮವಾದ ಭಿನ್ನ ಪಾತ್ರಗಳನ್ನು ಮಾಡಿದ್ದೇನೆ. ನಾನು ಮಾಡಿರುವ ಪಾತ್ರಗಳನ್ನು ನೋಡಿ ಮತ್ತೂಂದು ಚಿತ್ರಕ್ಕೆ, ಮತ್ತೂಂದು ಪಾತ್ರಕ್ಕೆ ಆಫ‌ರ್‌ಗಳು ಬರುತ್ತಿವೆ. ಹಾಗೆಯೇ ಮುಂದೆಯೂ ಉತ್ತಮ ಚಿತ್ರಗಳನ್ನು ಮಾಡುವ ಆಸೆ ಇದೆ.

ಚಿತ್ರರಂಗದ ಬೆಳವಣಿಗೆ ಕುರಿತು ಏನು ಹೇಳ್ತೀರಿ?

ಚಿತ್ರರಂಗದ ಬೆಳವಣಿಗೆ ಕುರಿತು ಮಾತನಾಡುವಷ್ಟು ದೊಡ್ಡವಳು ನಾನಲ್ಲ . ಆದರೆ ಇಂದು ಚಿತ್ರರಂಗ ದೊಡ್ಡದಾಗಿ ಬೆಳೆದಿದೆ. ಪ್ಯಾನ್‌ ಇಂಡಿಯಾ ಚಿತ್ರಗಳ ಕಾನ್ಸೆಪ್ಟ್ ಕನ್ನಡ ಚಿತ್ರರಂಗವನ್ನು ಬೇರೆಡೆ ಕರೆದೊಯ್ದಿದೆ. ನನ್ನ ಪ್ರಕಾರ ಚಿತ್ರರಂಗದಲ್ಲಿ ಮಹಿಳಾ ಪಾತ್ರಗಳ ಕುರಿತು ಇನ್ನಷ್ಟು ಒತ್ತು ನೀಡಬೇಕಿದೆ. ಕೇವಲ ಒಂದು, ತಾಯಿ, ಅಕ್ಕ, ಪ್ರೇಯಸಿ, ಹೆಂಡತಿ ಎಂದು ಪಾತ್ರಗಳನ್ನು ರಚಿಸದೇ, ಮಹಿಳಾ ಪಾತ್ರಗಳಿಗೂ ಒಂದು ದೊಡ್ಡ ಕ್ಯಾನ್ವಸ್‌ ನೀಡುವ ಪಾತ್ರಗಳನ್ನು ಹೆಚ್ಚೆಚ್ಚು ಬರೆಯಬೇಕಾಗಿದೆ

ವಾಣಿ ಭಟ್ಟ

ಟಾಪ್ ನ್ಯೂಸ್

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

tdy-23

ಮಾಸ್‌ ರಾಮಾಚಾರಿ 2.0

tdy-13

ಯಲಾಕುನ್ನಿಗೆ ಮುಹೂರ್ತ ಸಂಭ್ರಮ

tdy-12

ಹಾರರ್‌ ʼತಾಯ್ತʼದಲ್ಲಿ ಹರ್ಷಿಕಾ ನಟನೆ

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ