
ಬಿಡುಗಡೆಗೆ ಸಿದ್ದವಾಯ್ತು ‘ಪದವಿಪೂರ್ವ’ ಚಿತ್ರ
Team Udayavani, Nov 28, 2022, 5:34 PM IST

ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ “ಪದವಿಪೂರ್ವ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಫ್ರೆಂಡ್ಶಿಪ್ ಸಾಂಗ್ ಮೂಲಕ ಈಗಾಗಲೇ ಭರ್ಜರಿ ಸದ್ದು ಮಾಡಿರುವ ಚಿತ್ರ ಇದೇ ಡಿಸೆಂಬರ್ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶರತ್ ಲೋಹಿತಾಶ್ವ, ರಂಗಾಯಣ ರಘು, ದಿವ್ಯ ಉರುಡುಗ, ಪ್ರಭು, ಶ್ರೀ ಮಹದೇವ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ವಿಜಯ್ ಹಜಾರೆ ಟ್ರೋಫಿ: ಪಂಜಾಬ್ ವಿರುದ್ಧ ಗೆದ್ದು ಸೆಮಿ ಎಂಟ್ರಿಕೊಟ್ಟ ಕರ್ನಾಟಕ
ಸಿನಿಮಾ ಬಗ್ಗೆ ಪೃಥ್ವಿ ಶಾಮನೂರು ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಸಿನಿಮಾ ಮೂಡಿಬಂದಿರುವ ರೀತಿ. “ನಾನು ಪಿಯುಸಿ ಇದ್ದಾಗ ಈ ಸಿನಿಮಾ ಆರಂಭವಾಗಿದ್ದು. ನನ್ನ ರಿಯಲ್ ಲೈಫ್ ಗೆ ತುಂಬಾ ಹತ್ತಿರವಾದ ಕಥೆ. ಇಡೀ ಸಿನಿಮಾ ಸೊಗಸಾಗಿ ಮೂಡಿಬಂದಿದೆ. ಮುಖ್ಯವಾಗಿ ಈ ಸಿನಿಮಾದಲ್ಲಿ ನನಗೆ ಕಲಿಯಲು ಸಾಕಷ್ಟು ಅವಕಾಶ ಸಿಕ್ಕಿತು. ಸಿನಿಮಾ ತಡವಾದಷ್ಟು ನಾನು ಹೆಚ್ಚೆಚ್ಚು ಕಲಿತೆ. ನನ್ನ ಮಿಸ್ಟೆಕ್ಗಳನ್ನೆಲ್ಲಾ ಸರಿಪಡಿಸುತ್ತಾ ಬಂದೆ. ಅದೇ ಕಾರಣದಿಂದ ಸಿನಿಮಾದಲ್ಲಿ ಚೆನ್ನಾಗಿ ನಟಿಸಲು ಸಾಧ್ಯವಾಯಿತು. ಮುಖ್ಯವಾಗಿ ಒಬ್ಬ ಕಲಾವಿದನಾಗಲು ಏನೇನು ಅಂಶಗಳು ಮುಖ್ಯವೋ, ಅವೆಲ್ಲವನ್ನು ಈ ಸಿನಿಮಾದಿಂದ ಕಲಿತೆ’ ಎಂದು ಖುಷಿಯಿಂದ ಹೇಳುತ್ತಾರೆ ಪೃಥ್ವಿ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಭಾರತೀಯರಿಗೆ ದಾಖಲೆ ವೀಸಾ ವಿತರಣೆಗೆ ಅಮೆರಿಕ ಸಜ್ಜು

ಜನ ಸಂಕಲ್ಪಯಾತ್ರೆ: ಅಮಿತ್ ಶಾ ಬರುತ್ತಿದ್ದಂತೆ ಮೊಳಗಿದ ಜಯಘೋಷ

ಹಲವು ವಿಸ್ಮಯಗಳ ಆಗರ ನೆಲ್ಲಿತೀರ್ಥ- ವರ್ಷದಲ್ಲಿ ಆರು ತಿಂಗಳು ಮಾತ್ರ ಭೇಟಿಗೆ ಅವಕಾಶ…

ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ