ಒಂದು ಗಿಫ್ಟ್ ನ ಹಿಂದೆ ಪದ್ಮಜಾ ರಾವ್‌


Team Udayavani, Apr 27, 2020, 10:55 AM IST

ಒಂದು ಗಿಫ್ಟ್ ನ ಹಿಂದೆ ಪದ್ಮಜಾ ರಾವ್‌

ತಾಯಿ ಪಾತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕನ್ನಡದ ನಟಿ ಪದ್ಮಜಾ ರಾವ್‌. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಪದ್ಮಜಾ ರಾವ್‌ ಅವರಿಗೆ ಸಿನಿಮಾ ನಿರ್ದೇಶನ ಮಾಡಬೇಕೆಂಬ ಆಸೆ ಬಹಳ ದಿನಗಳಿಂದ ಇತ್ತು. ಈಗ ಅದರ ಮೊದಲ ಹಂತವಾಗಿ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದಾರೆ.

ಅದು ಲಾಕ್‌ ಡೌನ್‌ ಮಧ್ಯೆಯೇ ಎಂಬುದು ವಿಶೇಷ. ಅವರು ಈ ಕಿರುಚಿತ್ರಕ್ಕೆ ಇಟ್ಟ ಹೆಸರು ಒಂದು ಗಿಫ್ಟ್ ನ ಕಥೆ.30 ನಿಮಿಷದ ಈ ಕಿರುಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಮುಖ್ಯವಾಗಿ ಇದು ಹಲವು ದೇಶಗಳಲ್ಲಿ ಚಿತ್ರೀಕರಣವಾಗಿದೆ. ಅಮೆರಿಕಾ, ಕೆನಡಾ ಹಾಗೂ ಬೆಂಗಳೂರಿನ ಪ್ರಮುಖ ಏಳು ಜಾಗಗಳಲ್ಲಿ ಈ ಕಿರುಚಿತ್ರವನ್ನು ಚಿತ್ರೀಕರಿಸಲಾಗಿದೆ. ಈ ಕಿರುಚಿತ್ರದಲ್ಲಿ 11 ಪಾತ್ರಗಳಿದ್ದು, ಹತ್ತು ಮಂದಿ ಛಾಯಾಗ್ರಾಹಕರು ಈ ಕಿರುಚಿತ್ರಕ್ಕೆ ಕೆಲಸ ಮಾಡಿದ್ದಾರಂತೆ. ಒಂದು ಗಿಫ್ಟ್ ನ ಕಥೆಯಲ್ಲಿ ಹಾಸ್ಯ ಸನ್ನಿವೇಶಗಳನ್ನಿಟ್ಟುಕೊಂಡು ಮಾಡಲಾಗಿದೆಯಂತೆ. ವಿಶೇಷವೆಂದರೆ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರು ತಮ್ಮ ಮೊಬೈಲ್‌ ಮೂಲಕ ಅವರವರ ಭಾಗದ ಚಿತ್ರೀಕರಣ ಮಾಡಿದ್ದಾರೆ. ಅಷ್ಟಕ್ಕೂ ಈ ಕಿರುಚಿತ್ರ ಮಾಡಲು ಕಾರಣವೇನೆಂದು ನೀವು ಕೇಳಬಹುದು. ಅದಕ್ಕೆ ಉತ್ತರ ಜನರ ಮೊಗದಲ್ಲಿ ನಗು ಮೂಡಿಸೋದು.

ಸದ್ಯ ಜನ ಕೋವಿಡ್ 19  ಮಹಾಮಾರಿಯಿಂದ ಬೇಸತ್ತಿದ್ದಾರೆ. ಇಂತಹ ಹೊತ್ತಲ್ಲಿ ಅವರ ಮೊಗದಲ್ಲಿ ನಗು ಮೂಡಿಸುವ ಉದ್ದೇಶದಿಂದ ಈ ಕಿರುಚಿತ್ರ ಮಾಡಲಾಗಿದೆಯಂತೆ. ಈ ಕಿರುಚಿತ್ರದಲ್ಲಿ ಸುಧಾ ಬೆಳವಾಡಿ, ಸುನೇತ್ರಾ, ರಮೇಶ್‌ ಪಂಡಿತ್‌ ಹಾಗೂ ಹೊರದೇಶದ ಅವರ ಸ್ನೇಹಿತರು ಕೂಡಾ ಕಾಣಿಸಿಕೊಂಡಿದ್ದಾರಂತೆ. ಈ ಹಿಂದೆ ಭಾರತೀಯ ಚಿತ್ರರಂಗದ ತಾರೆಯರು ಸೇರಿ ಫ್ಯಾಮಿಲಿ ಎಂಬ ಕಿರುಚಿತ್ರ ಮಾಡಿದ್ದರು. ಆದರೆ, ಪದ್ಮಜಾ ರಾವ್‌ ಅವರು ಫ್ಯಾಮಿಲಿ ಬಿಡುಗಡೆಯಾಗುವ ಮೊದಲೇ ಈ ಕಿರುಚಿತ್ರದ ತಯಾರಿ ಮಾಡಿಕೊಂಡಿದ್ದರಂತೆ. ಲಾಕ್‌ ಡೌನ್‌ ಮಧ್ಯೆ ಅನೇಕ ಸಿನಿಮಾ ಮಂದಿ ಕಿರುಚಿತ್ರಗಳ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುತ್ತಿದ್ದಾರೆ. ಈಗಾಗಲೇ ಸಂಡೆ, ಪಕೋಡ ಸೇರಿದಂತೆ ಹಲವು ಕಿರುಚಿತ್ರಗಳು ಬಂದಿವೆ. ಈಗ ಪದ್ಮಜಾ ರಾವ್‌ ಅವರ ಕಿರುಚಿತ್ರ ಹೊಸ ಸೇರ್ಪಡೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.