‘ಪದ್ಮಾವತಿ’ಯ ಗಾನ ಬಜಾನ
Team Udayavani, Jul 9, 2022, 4:35 PM IST
“ಪದ್ಮಾವತಿ’ – ಹೀಗೊಂದು ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಕ್ರಂ ಆರ್ಯ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿ, ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆಯಾಗಿದೆ.
ಮಿಥುನ್ ಚಂದ್ರಶೇಖರ್ ಈ ಚಿತ್ರಕ್ಕೆ ಚಿತ್ರಕತೆ, ಸಂಭಾಷಣೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. ತಪ್ಪೇ ಮಾಡಬೇಡಿ, ಮಾಡುವ ತಪ್ಪನ್ನು ತಪ್ಪು ತಪ್ಪಾಗಿ ಮಾಡಬೇಡಿ, ತಪ್ಪು ಮಾಡಿದ ಮೇಲೆ ತಪ್ಪದೆ ತಪ್ಪಾಯಿತು ಎಂದು ಒಪ್ಪಿಕೊಳ್ಳಿ ಎಂಬ ಅಂಶದ ಜೊತೆಗೆ ತಾಯಿ ಮಗನ ಸೆಂಟಿಮೆಂಟ್ ಅಂಶಗಳು ಇರಲಿದೆ. ಶಿವಳ್ಳಿಬೆಟ್ಟ, ಸಾಗರ, ಹೊಸನಗರ,ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಕಡೆಗಳಲ್ಲಿ 51 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂಬ ಮಾಹಿತಿ ಚಿತ್ರತಂಡದ್ದು.
ಮೇಘನಾ ರಾವ್ ಈ ಚಿತ್ರದ ನಾಯಕಿ. ಮೂರು ವಿಭಿನ್ನ ಶೇಡ್ಗಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಉಳಿದಂತೆ ಸುರೇಶ್ ಸ್ವಾಮಿರಾವ್, ಕವಿತಾಪ್ರಿಯಾ, ರಾಘವ ಕುಮಾರ್, ಅಭಿಲಾಶ್ .ಬಿ.ಹೊಸನಗರ, ಶಿವಮೊಗ್ಗ ರಾಮಣ್ಣ, ಅರ್ಚನಾ ಶೆಟ್ಟಿ, ರಾಜೇಶ್ವರಿ ಪಾಂಡೆ ಮುಂತಾ ದವರ ತಾರಾಗಣವಿದೆ.
ಶರಣು ಕುಮಾರ್ ಗಜೇಂದ್ರ ಗಡ ನಾಲ್ಕು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಕೊಪ್ಪಳದ ಗಂಗಮ್ಮ ಒಂದು ಗೀತೆಗೆ ಧ್ವನಿಯಾಗಿದ್ದಾರೆ. ಸಂಗೀತ ದಿನೇಶ್ ಕುಮಾರ್, ಛಾಯಾಗ್ರಹಣವಿದೆ. ಈ ಚಿತ್ರ ಜುಲೈ 15ರಂದು ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ