ಪದ್ಮಿನಿ ಪ್ರಮೋದ್ ಬಿಝಿಯಾಗ್ಬಿಟ್ರು …
ಇಂದು ಮತ್ತೆ ಉದ್ಭವ ಮುಹೂರ್ತ
Team Udayavani, Jun 6, 2019, 3:00 AM IST
ಕಿರುತೆರೆ ಮೂಲಕ ಹಿರಿತೆರೆ ಸ್ಪರ್ಶಿಸಿದ ನಟ ಪ್ರಮೋದ್, “ಪ್ರೀಮಿಯರ್ ಪದ್ಮಿನಿ’ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರ ಲವಲವಿಕೆಯ ಅಭಿನಯವನ್ನು ಎಲ್ಲರೂ ಮೆಚ್ಚಿಕೊಂಡಿದ್ದರು. ಆ ಚಿತ್ರದ ಬಳಿಕ ಪ್ರಮೋದ್ ಅವರು ಮತ್ತೆ ಯಾವ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಹೌದು, ಅವರೀಗ ಹೊಸ ಚಿತ್ರಕ್ಕೆ ಹೀರೋ ಆಗಿದ್ದಾರೆ.
ಆ ಚಿತ್ರಕ್ಕೆ “ಮತ್ತೆ ಉದ್ಭವ’ ಎಂದು ಹೆಸರಿಡಲಾಗಿದೆ. ಈ ಚಿತ್ರವನ್ನು ಕೋಡ್ಲು ರಾಮಕೃಷ್ಣ ಅವರು ನಿರ್ದೇಶನ ಮಾಡುತ್ತಿದ್ದಾರೆ ಎಂಬುದು ವಿಶೇಷ. ಚಿತ್ರದ ಪೋಸ್ಟರ್ ನೋಡಿದರೆ, ಅದೊಂದು ಮನರಂಜನಾತ್ಮಕ ಸಿನಿಮಾ ಎಂಬುದು ಗೊತ್ತಾಗಲಿದೆ. ಕಾರಣ, ಶೀರ್ಷಿಕೆ ಜೊತೆಗೊಂದು ಗಣೇಶನ ಮುಖದ ಚಿತ್ರವಿದೆ. ಹಾಗಾಗಿ, ಇದೊಂದು ಫನ್ ಸಿನಿಮಾ ಅಂದುಕೊಳ್ಳಲು ಅಡ್ಡಿಯಿಲ್ಲ.
ಇನ್ನು, ಈ ಚಿತ್ರದಲ್ಲಿ ಪ್ರಮೋದ್ ಅವರಿಗೆ ನಾಯಕಿಯಾಗಿ, ಮಿಲನ ನಾಗರಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ರಂಗಾಯಣ ರಘು ವಿಶೇಷ ಪಾತ್ರದಲ್ಲಿ ಮಿಂಚಲಿದ್ದಾರೆ. ಅವಿನಾಶ್, ಸುಧಾಬೆಳವಾಡಿ, ಮೋಹನ್, ಶುಭಾರಕ್ಷ ಸೇರಿದಂತೆ ಇನ್ನೂ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಮೋಹನ್ ಛಾಯಾಗ್ರಹಣ ಮಾಡಿದರೆ, ವಿ.ಮನೋಹರ್ ಅವರು ಸಂಗೀತ ನೀಡುತ್ತಿದ್ದಾರೆ. ಕೆಂಪರಾಜು ಸಂಕಲನವಿದೆ.
ಜಯಂತ್ ಕಾಯ್ಕಿಣಿ ಹಾಗು ಪ್ರಹ್ಲಾದ್ ಅವರ ಗೀತರಚನೆ ಇರಲಿದೆ. ಥ್ರಿಲ್ಲರ್ ಮಂಜು ಅವರು ಸಾಹಸ ನಿರ್ದೇಶನ ಮಾಡಲಿದ್ದಾರೆ. ತ್ರಿಭುವನ್ ನೃತ್ಯ ನಿರ್ದೇಶಿಸಲಿದ್ದಾರೆ. ಇನ್ನು ಈ ಚಿತ್ರವನ್ನು ನಿತ್ಯಾನಂದ ಭಟ್, ಸತ್ಯ, ಮಹೇಶ್ ಮೋದ್ಗಲ್ ಮತ್ತು ರಾಜೇಶ್ ನಿರ್ಮಾಣ ಮಾಡುತ್ತಿದ್ದಾರೆ. ಜೂ.6 ರ ಗುರುವಾರ ಚಿತ್ರಕ್ಕೆ ಚಾಲನೆ ಸಿಗಲಿದ್ದು, ಜೆ.ಪಿ.ನಗರದ ಸತ್ಯ ಗಣಪತಿ ದೇವಾಲಯದಲ್ಲಿ ಮುಹೂರ್ತ ನೆರವೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ