ಚಿತ್ರದುರ್ಗದಲ್ಲಿ “ಪೈಲ್ವಾನ್‌’

ಸುದೀಪ್‌ ಜೊತೆ ಬಾಲಿವುಡ್‌ ನಟ ಸುನೀಲ್‌ಶೆಟ್ಟಿ ಭಾಗಿ

Team Udayavani, Jul 10, 2019, 3:04 AM IST

sudeep

ಸುದೀಪ್‌ ಅಭಿನಯದ ಬಹುನಿರೀಕ್ಷಿತ ಚಿತ್ರ “ಪೈಲ್ವಾನ್‌’ ಬಿಡುಗಡೆಗೆ ಸಜ್ಜಾಗಿದೆ. ಈಗ ಈ ಚಿತ್ರದ ಹೊಸ ಸುದ್ದಿಯೆಂದರೆ, ಕೋಟೆ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದಲ್ಲಿ “ಪೈಲ್ವಾನ್‌’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಲು ಚಿತ್ರತಂಡ ತಯಾರು ನಡೆಸಿದೆ.

ಹೌದು, ಚಿತ್ರದುರ್ಗದಲ್ಲಿ “ಪೈಲ್ವಾನ್‌’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ. ಈಗಾಗಲೇ ಚಿತ್ರದ ಟೀಸರ್‌ ಮತ್ತು ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಎಲ್ಲರಲ್ಲೂ ಹೊಸದೊಂದು ಕುತೂಹಲ ಹುಟ್ಟುಹಾಕಿದ್ದ ಚಿತ್ರತಂಡ, ಈಗ ಆಡಿಯೋ ಬಿಡುಗಡೆ ಸಮಾರಂಭವನ್ನು ಚಿತ್ರದುರ್ಗದಲ್ಲಿ ನೆರವೇರಿಸುವ ಮೂಲಕ ಮತ್ತೊಂದು ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಜುಲೈ 27 ರಂದು ಚಿತ್ರದುರ್ಗದಲ್ಲಿ “ಪೈಲ್ವಾನ್‌’ ಕಾಣಿಸಿಕೊಳ್ಳುತ್ತಿದ್ದು, ಅಲ್ಲಿ ನಡೆಯಲಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ ಹಾಡುಗಳು ಬಿಡುಗಡೆಯಾಗಲಿವೆ. ಇಷ್ಟು ದಿನ “ಪೈಲ್ವಾನ್‌’ ಚಿತ್ರದ ಹಾಡುಗಳು ಹೇಗಿರಲಿವೆ ಎಂಬ ಪ್ರಶ್ನೆಗೆ ಜುಲೈ 27 ರಂದು ಉತ್ತರ ಸಿಗಲಿದೆ. ಅಂದಹಾಗೆ, ಅಂದು ನಡೆಯಲಿರುವ ಕಲರ್‌ಫ‌ುಲ್‌ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಬಾಲಿವುಡ್‌ ನಟ ಸುನೀಲ್‌ಶೆಟ್ಟಿ ಕೂಡ ಆಗಮಿಸುತ್ತಿರುವುದು ವಿಶೇಷ.

ಇದೇ ಮೊದಲ ಬಾರಿಗೆ ಸುನೀಲ್‌ಶೆಟ್ಟಿ ಅವರು, “ಪೈಲ್ವಾನ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲ, ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿರುವ ಕಲ್ಲಿನಕೋಟೆ ಚಿತ್ರದುರ್ಗಕ್ಕೂ ಮೊದಲ ಸಲ ಭೇಟಿ ನೀಡುತ್ತಿರುವುದು ವಿಶೇಷ. ಇನ್ನು, ಸುದೀಪ್‌ ಅಭಿಮಾನಿಗಳಂತೂ, “ಪೈಲ್ವಾನ್‌’ ಹಾಡುಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕಕೊಳ್ಳುತ್ತಿದ್ದಾರೆ.

ಅಂದಹಾಗೆ, ಈ ಹಿಂದೆ ದಾವಣಗೆರೆಯಲ್ಲಿ ಸುದೀಪ್‌ ಅಭಿನಯದ “ಹೆಬ್ಬುಲಿ’ ಚಿತ್ರದ ಆಡಿಯೋ ಬಿಡುಗಡೆ ಮಾಡಲಾಗಿತ್ತು. ಈಗ “ಪೈಲ್ವಾನ್‌’ ಚಿತ್ರದ ಹಾಡುಗಳನ್ನು ಚಿತ್ರದುರ್ಗದಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದುರ್ಗಕ್ಕೂ ಸುದೀಪ್‌ ಅವರಿಗೂ ಅವಿನಾಭಾವ ಸಂಬಂಧ. ಕಾರಣ, ಚಿತ್ರದುರ್ಗದಲ್ಲೇ ಸುದೀಪ್‌ ಅವರ ಅತೀ ಹೆಚ್ಚು ಅಭಿಮಾನಿ ವರ್ಗ ತುಂಬಿಕೊಂಡಿದೆ.

ಅಷ್ಟೇ ಅಲ್ಲ, ಅವರು “ಗಂಡುಗಲಿ ವೀರಮದಕರಿ ನಾಯಕ’ ಸಿನಿಮಾ ಮಾಡುವುದಾಗಿ ನಿರ್ಧರಿಸಿದ್ದು ಕೂಡ ಇದೇ ಕಾರಣಕ್ಕೆ. ಆದರೆ, ಆ ಚಿತ್ರವನ್ನು ಸುದೀಪ್‌ ಅವರು ಕೆಲವು ಕಾರಣಗಳಿಂದ ಕೈಬಿಟ್ಟಿದ್ದಾರೆ. ಈಗ “ಪೈಲ್ವಾನ್‌’ ಸುದ್ದಿ ಜೋರಾಗಿದ್ದು, ಹಾಡುಗಳ ಬಿಡುಗಡೆ ಮೂಲಕ ಮತ್ತೊಂದು ಕುತೂಹಲಕ್ಕೆ ಚಿತ್ರ ಕಾರಣವಾಗಲಿದೆ. ಆಗಸ್ಟ್‌ ಕೊನೆಯ ವಾರದಲ್ಲಿ “ಪೈಲ್ವಾನ್‌’ ರಿಲೀಸ್‌ ಆಗಲಿದೆ ಎಂಬ ಸುದ್ದಿ ಇದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.