‘ಈ ನೆಲದ ಮಣ್ಣಿನ ಒಂದು ಕಣಕ್ಕಾಗಿಯೂ ಪ್ರಾಣ ತ್ಯಾಗಕ್ಕೆ ಸಿದ್ಧ !’: ಬಂತು ಪಾಣಿಪತ್ ಟ್ರೈಲರ್

ಅಶುತೋಷ್ ಗೋವರಿಕರ್ ನಿರ್ದೇಶನದ ‘ಪಾಣಿಪತ್’ ಚಿತ್ರದ ಜಬರ್ದಸ್ತ್ ಟ್ರೈಲರ್ ಬಿಡುಗಡೆ

Team Udayavani, Nov 5, 2019, 5:06 PM IST

Panipat-Trailor-730

ಲಗಾನ್, ಸ್ವದೇಶ್, ಜೋಧಾ ಅಕ್ಬರ್ ಚಿತ್ರಗಳ ಮೂಲಕ ಬಾಲಿವುಡ್ ನಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನಿರ್ದೇಶಕ ಅಶುತೋಷ್ ಗೋವರಿಕರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಐತಿಹಾಸಿಕ ಹಿನ್ನಲೆಯಿರುವ ಹೊಸ ಚಿತ್ರ ‘ಪಾಣಿಪತ್’ನ ಟ್ರೈಲರ್ ಬಿಡುಗಡೆಗೊಂಡಿದೆ. ‘ದಿ ಗ್ರೇಟ್ ಬಿಟ್ರೇಯಲ್’ (ಒಂದು ಮಹಾ ಮೋಸದ ಕಥೆ) ಎಂಬ ಟ್ಯಾಗ್ ಲೈನ್ ಕೂಡಾ ಈ ಚಿತ್ರಕ್ಕಿದೆ.

ಅರ್ಜುನ್ ಕಪೂರ್, ಸಂಜಯ್ ದತ್, ಕೃತಿ ಸನೋನ್ ಮೊದಲಾದವರು ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರ ಮರಾಠ ಯೋಧ ಸದಾಶಿವ್ ರಾವ್ ಭಾವು ಮತ್ತು ಅಫ್ಘಾನ್ ದೊರೆ ದುರ್ರಾನಿ ಸಾಮ್ರಾಟ ಅಹಮ್ಮದ್ ಶಾ ಅಬ್ದಾಲಿ ನಡುವೆ 1761ರಲ್ಲಿ ನಡೆದ ಮೂರನೇ ಪಾಣಿಪತ್ ಕದನದ ಹಿನ್ನಲೆಯಲ್ಲಿ ತಯಾರಾಗಿದೆ. ಚಿತ್ರದ ಟ್ರೈಲರ್ ನಲ್ಲಿ ಈ ಯುದ್ಧದ ಸನ್ನಿವೇಶಗಳನ್ನೇ ಹೈಲೈಟ್ ಮಾಡಲಾಗಿರುವುದು ವಿಶೇಷ.

ಈ ಐತಿಹಾಸಿಕ ಮಹತ್ವದ ಚಿತ್ರದಲ್ಲಿ ನಟ ಅರ್ಜುನ್ ಕಪೂರ್ ಮರಾಠ ಯೋಧ ಸದಾಶಿವ್ ರಾವ್ ಭಾವು ಪಾತ್ರವನ್ನು ನಿಭಾಯಿಸಿದ್ದಾರೆ ಕೃತಿ ಸನೋನ್ ಸದಾಶಿವ್ ರಾವ್ ಪತ್ನಿ ಪಾರ್ವತಿ ಬಾಯಿ ಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನು ಹಿರಿಯ ನಟ ಸಂಜಯ್ ದತ್ ಈ ಚಿತ್ರದಲ್ಲಿ ಅಫ್ಘಾನ್ ದೊರೆ ಅಹಮ್ಮದ್ ಶಾ ಅಬ್ದಾಲಿ ಪಾತ್ರವನ್ನು ನಿರ್ವಹಿಸಿರುವುದು ವಿಶೇಷ.

ಕೃತಿ ಸನೋನ್ ಹಿನ್ನಲೆ ಧ್ವನಿಯೊಂದಿಗೆ ಈ ಟ್ರೈಲರ್ ಪ್ರಾರಂಭಗೊಳ್ಳುತ್ತದೆ. ‘ಮರಾಠ ಯೋಧರ ಧರ್ಮ ಮತ್ತು ಕರ್ಮ ಎರಡೂ ಅವರ ವೀರತ್ವವೇ ಆಗಿದೆ’ ಎಂಬ ಮಾತಿನೊಂದಿಗೆ ಟ್ರೈಲರ್ ಪ್ರಾರಂಭಗೊಳ್ಳುತ್ತದೆ.

ಇನ್ನು ಅಫ್ಘಾನ್ ದೊರೆ ಅಹಮ್ಮದ್ ಶಾ ಅಬ್ದಾಲಿ ಪ್ರತೀ ಸಲ ಭಾರತದ ಮೇಲೆ ದಂಡೆತ್ತಿ ಬಂದಾಗಲೂ ಯಮುನಾ ನದಿಯ ನೀರು ಏಳು ದಿನಗಳವರೆಗೆ ಕೆಂಪಾಗಿ ಹರಿಯುತ್ತಿತ್ತು, ಎಂದು ಹೇಳುವ ಮೂಲಕ ಆತನ ಮತ್ತು ಆತನ ಸೈನ್ಯದ ಕ್ರೌರ್ಯದ ಪರಿಚಯವನ್ನು ಒಂದೇ ವಾಕ್ಯದಲ್ಲಿ ಇಲ್ಲಿ ಮಾಡಿಕೊಡಲಾಗಿದೆ.

ಪಾಣಿಪತ್ ಟ್ರೈಲರ್ ನೋಡಿದಾಗ ಪಕ್ಕನೇ ನಮಗೆ ಸಂಜಯ್ ಲೀಲಾ ಬನ್ಸಾಲಿಯವರ ‘ಬಾಜಿರಾವ್ ಮಸ್ತಾನಿ’ ಮತ್ತು ‘ಪದ್ಮಾವತಿ’ ಚಿತ್ರಗಳು ಹಾಗೇ ಕಣ್ಣಮುಂದೆ ಸುಳಿದುಹೋಗುತ್ತವೆ.

ಒಟ್ಟಿನಲ್ಲಿ ಡಿಸೆಂಬರ್ 06ರಂದು ತೆರೆಗೆ ಅಪ್ಪಳಿಸಲಿರುವ ‘ಪಾಣಿಪತ್’ ಚಿತ್ರ ಆಶುತೋಷ್ ಅವರ ನಿರ್ದೇಶನ ಕೌಶಲಕ್ಕೊಂದು ಸವಾಲಾಗಿದ್ದು ಪ್ರೇಕ್ಷಕರು ಈ ಐತಿಹಾಸಿಕ ಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.