ದುನಿಯಾ ವಿಜಯ್‌ ವಿರುದ್ಧ ಪಾನಿಪುರಿ ಕಿಟ್ಟಿ ದೂರು


Team Udayavani, Sep 25, 2018, 11:13 AM IST

duniya.jpg

ಅಪಹರಣ ಹಾಗೂ ದೈಹಿಕ ಹಲ್ಲೆಗೆ ಸಂಬಂಧಿಸಿದಂತೆ ನಟ “ದುನಿಯಾ’ ವಿಜಯ್‌ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೃಷ್ಣಮೂರ್ತಿ (ಕಿಟ್ಟಿ) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೋಮವಾರ ಲಿಖೀತ ದೂರು ನೀಡಿದ್ದಾರೆ.ಆ ದೂರಿನಲ್ಲಿ ವಿವರಿಸಿರುವ ಪಾನಿಪುರಿ ಕಿಟ್ಟಿ, “ನಾನು ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟುವಾಗಿದ್ದು, ಚಿತ್ರರಂಗದಲ್ಲಿ ಪಾನಿಪುರಿ ಕಿಟ್ಟಿ ಎಂದೇ ಚಿರಪರಿಚಿತನಾಗಿರುತ್ತೇನೆ.

ನಾನು ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ನಾನು ಸುಮಾರು 20 ವರ್ಷಗಳಿಂದ “ಮಜಲ್‌ ಪ್ಲಾನೆಟ್‌’ ಎಂಬ ಜಿಮ್‌ ನಡೆಸುತ್ತಿದ್ದು, ನನ್ನ ಜಿಮ್‌ನಲ್ಲಿ ಚಿತ್ರರಂಗದ ಹಲವು ಕಲಾವಿದರು, ಸಾರ್ವಜನಿಕರು ಉತ್ತಮ ತರಬೇತಿ ಹೊಂದುವ ಮೂಲಕ ಜಿಮ್‌ ಪರಿಚಯಗೊಂಡಿದೆ. ನನ್ನ ಜಿಮ್‌ ಸಂಸ್ಥೆಯ ಬಗ್ಗೆ ಹಲವು ಕಲಾವಿದರು ಮತ್ತು ಚಿತ್ರರಂಗದವರ ಉತ್ತಮ ಅಭಿಪ್ರಾಯವಿದೆ. ನಾನು ನಡೆಸುತ್ತಿರುವ ಜಿಮ್‌ ಸಂಸ್ಥೆಗೆ ಇದುವರೆಗೂ ಯಾವುದೇ ರೀತಿಯ ಕಪ್ಪು ಚುಕ್ಕೆ ಕಂಡು ಬಂದಿಲ್ಲ.

ಆದರೆ, ನಟ ದುನಿಯಾ ವಿಜಯ್‌ ಅವರು ನನ್ನ ಅಣ್ಣನ ಮಗನನ್ನು ಅಪಹಿರಸಿ, ಅವರ ಮೇಲೆ ದೈಹಿಕ ಹಲ್ಲಿ ನಡೆಸಿದ್ದಾರೆ. ಇದರಿಂದ ನನ್ನ ಅಣ್ಣನ ಮಗ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿದಾಖಲಾಗಿದ್ದಾರೆ. ಈ ಪ್ರಕರಣದಿಂದ ನನ್ನ ಜೀವನದಲ್ಲಿ ಕಪ್ಪು ಚುಕ್ಕೆ ಉಂಟಾಗಿ ನನ್ನ ವೃತ್ತಿ ಜೀವನದ ಮೇಲೆ ಪರಿಣಾಮ ಬೀರುವುದರಿಂದ  ನನ್ನ ಬಳಿ ತರಬೇತಿಗೆ ಬರುವ ಉದಯೋನ್ಮುಖ ಕಲಾವಿದರು, ನನ್ನ ಬಗ್ಗೆ ಯೋಚಿಸುವಂತಾಗಿದೆ. ಇದೇ ರೀತಿ ಈ ಹಿಂದೆಯೂ ದುನಿಯಾ ವಿಜಯ್‌ ಅವರು ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.

ಈ ಪ್ರಕರಣದಲ್ಲಿ ನಾನು ಅಮಾಯಕನಾಗಿದ್ದು, ನನ್ನ ಮೇಲೆ ಯಾವುದೇ ತಪ್ಪು ಕಂಡುಬಂದಲ್ಲಿ, ನನ್ನ ಮೇಲೂ ತಾವು ಕ್ರಮ ಜರುಗಿಸಬಹುದು. ಆದ್ದರಿಂದ ವಾಣಿಜ್ಯ ಮಂಡಳಿಯು ನಟ ದುನಿಯಾ ವಿಜಯ್‌ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಬೇಕು’ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಿ, ಮುಂದಿನ ದಿನಗಳಲ್ಲಿ “ದುನಿಯಾ’ ವಿಜಯ್‌ ಅವರನ್ನು ಮಂಡಳಿಗೆ ಕರೆಸಿಕೊಂಡು ಮಾತುಕತೆ ನಡೆಸುವುದಾಗಿ ಮಂಡಳಿಯ ಕಾರ್ಯದರ್ಶಿ ಭಾ.ಮ.ಹರೀಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.