ಪನೋರಮಾಗೆ ಈ ಬಾರಿ ಕನ್ನಡದಿಂದ ಒಂದೇ ಚಿತ್ರ!


Team Udayavani, Nov 11, 2017, 4:26 PM IST

Railway-Children-3.jpg

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನಸೆಳೆದ ಹಲವು ಕನ್ನಡ ಚಿತ್ರಗಳು ಬಂದಿವೆ. ಆ ಚಿತ್ರಗಳ ಕುರಿತು ಚರ್ಚೆಯಾಗುವುದರ ಜೊತೆಗೆ, ಹಲವು ಚಿತ್ರಗಳು ಯಶಸ್ವಿಯೂ ಆಗಿದೆ. ಆದರೆ, ವಿಚಿತ್ರವೆಂದರೆ ಈ ಬಾರಿಯ ಪನೋರಮಾ ವಿಭಾಗಕ್ಕೆ ಕನ್ನಡದಿಂದ ಒಂದೇ ಒಂದು ಚಿತ್ರ ಮಾತ್ರ ಆಯ್ಕೆಯಾಗಿದ್ದು. 

ಗೋವಾದ ಪಣಜಿಯಲ್ಲಿ ನವೆಂಬರ್‌ 20ರಿಂದ 28ರವರೆಗೂ ನಡೆಯುವ 48ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗದಲ್ಲಿ, ಒಟ್ಟು 26 ಚಿತ್ರಗಳು ಆಯ್ಕೆಯಾಗಿದ್ದು, ಅದರಲ್ಲಿ ಕನ್ನಡದ “ರೈಲ್ವೇ ಚಿಲ್ಡ್ರನ್‌’ ಮಾತ್ರ ಆಯ್ಕೆಯಾಗಿದೆ. ಈ ಬಾರಿ ದೇಶಾದ್ಯಂತ ನೂರಾರು ಚಿತ್ರಗಳು ಈ ಪನೋರಮಾ ವಿಭಾಗದಲ್ಲಿ ಸ್ಪರ್ಧಿಸಿದ್ದವು.

ಆ ಪೈಕಿ 26 (21 ಹೊಸ ಅಲೆಯ + 5 ಕಮರ್ಷಿಯಲ್‌) ಚಿತ್ರಗಳು ಮಾತ್ರ ಆಯ್ಕೆಯಾಗಿವೆ. ಮೂಲಗಳ ಪ್ರಕಾರ ಕನ್ನಡದ 24 ಚಿತ್ರಗಳು ಭಾಗವಹಿಸಿದ್ದು, ಆ ಪೈಕಿ “ರೈಲ್ವೇ ಚಿಲ್ಡ್ರನ್‌’ ಮಾತ್ರ ಆಯ್ಕೆಯಾಗಿದೆ. ಮಿಕ್ಕಂತೆ 26 ಚಿತ್ರಗಳ ಪೈಕಿ ಹಿಂದಿಯ ಆರು, ಮರಾಠಿಯ ಒಂಬತ್ತು, ಬಂಗಾಲಿಯ ಮೂರು, ಅಸ್ಸಾಮಿಯ ಎರಡು, ಮಿಕ್ಕಂತೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರಗಳಿಂದ ಒಂದೊಂದು ಚಿತ್ರವನ್ನು ಆಯ್ಕೆ ಮಾಡಲಾಗಿದೆ.

ಈ ಪೈಕಿ ಜನಪ್ರಿಯ ಚಿತ್ರಗಳ ಪೈಕಿ, ಅಕ್ಷಯ್‌ ಕುಮಾರ್‌ ಅಭಿನಯದ “ಜಾಲಿ ಎಲ್‌ಎಲ್‌ಬಿ 2′, ಪ್ರಭಾಸ್‌ ಮತ್ತು ರಾಣಾ ದಗ್ಗುಬಾಟಿ ಅಭಿನಯದ “ಬಾಹುಬಲಿ 2′, ಪ್ರಿಯಾಂಕಾ ಚೋಪ್ರಾ ನಿರ್ಮಾಣದ “ವೆಂಟಿಲೇಟರ್‌’ ಮುಂತಾದ ಚಿತ್ರಗಳಿವೆ. ಪ್ರತಿ ವರ್ಷ, ಕನ್ನಡ ಚಿತ್ರರಂಗದಿಂದ ಪನೋರಮಾಗೆ ಹಲವು ಚಿತ್ರಗಳು ಆಯ್ಕೆಯಾದ ಉದಾಹರಣೆಗಳಿವೆ. ಕಳೆದ ವರ್ಷವೇ, ಪನೋರಮಾ ವಿಭಾಗದಲ್ಲಿ ಕನ್ನಡದ “ಹರಿಕಥಾ ಪ್ರಸಂಗ’ “ಯೂ ಟರ್ನ್’ ಮತ್ತು “ಅಲ್ಲಮ’ ಚಿತ್ರಗಳು ಪ್ರದರ್ಶನಗೊಂಡಿದ್ದವು.

ಆದರೆ, ಈ ಬಾರಿ ಮಾತ್ರ ಕನ್ನಡದಿಂದ ಕೇವಲ ಒಂದೇ ಒಂದು ಚಿತ್ರ ಮಾತ್ರ ಆಯ್ಕೆಯಾಗಿದೆ. ಅದರಲ್ಲೂ ಈ ಬಾರಿ “ರಿಸರ್ವೇಶನ್‌’, “ಉಪ್ಪಿನ ಕಾಗದ’, “ಅಮರಾವತಿ’, “ಮೂಡಲ ಸೀಮೆಯಲಿ’, “ಜೀರ್‌ಜಿಂಬೆ’, “ರಾಮಾ ರಾಮಾ ರೇ’, “ಮದಿಪು’ ಸೇರಿದಂತೆ ರಾಜ್ಯ ಸೇರಿದಂತೆ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನವಾದ ಹಲವು ಚಿತ್ರಗಳಿವೆ. ಆದರೆ, ಅಷ್ಟೆಲ್ಲಾ ಚಿತ್ರಗಳ ಪೈಕಿ ಒಂದೇ ಒಂದು ಚಿತ್ರ ಮಾತ್ರ ಆಯ್ಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಬರೀ ಕನ್ನಡವಷ್ಟೇ ಅಲ್ಲ, ದಕ್ಷಿಣ ಭಾರತದ ನಾಲ್ಕೂ ಪ್ರಮುಖ ಭಾಷೆಗಳಿಂದ ಕೇವಲ ಒಂದೊಂದೇ ಚಿತ್ರವನ್ನು ಆಯ್ಕೆ ಮಾಡಲಾಗಿದ್ದು, ಮಿಕ್ಕಂತ ಉತ್ತರ ಭಾರತಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಲಾಗಿರುವುದು ಸ್ಪಷ್ಟವಾಗಿದೆ. ಸ್ಪರ್ಧೆಯಲ್ಲಿರುವ 26 ಚಿತ್ರಗಳ ಪೈಕಿ ಹಿಂದಿ, ಮರಾಠಿ, ಬೆಂಗಾಲಿ ಮತ್ತು ಅಸ್ಸಾಮಿ ಚಿತ್ರಗಳ ಸಂಖ್ಯೆಯೇ 20 ಆಗುತ್ತದೆ. ಹಾಗಾಗಿ ದಕ್ಷಿಣ ಭಾರತದ, ಅದರಲ್ಲೂ ಕನ್ನಡ ಚಿತ್ರಗಳಿಗೆ ಮಲತಾಯಿ ಧೋರಣೆ ತೋರಿಸಲಾಗುತ್ತಿದೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿವೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.