ಬಿಗ್ ಬಾಸ್ : ಈ ವೀಕೆಂಡ್ ಎಪಿಸೋಡ್ ಬಗ್ಗೆ ಸುಳಿವು ಕೊಟ್ಟ ಪರಮೇಶ್ವರ್ ಗುಂಡ್ಕಲ್!
Team Udayavani, Apr 16, 2021, 4:47 PM IST
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಈ ವಾರ ನಡೆಯಬೇಕಿದ್ದ ಬಿಗ್ ಬಾಸ್ ವೀಕೆಂಡ್ ಎಪಿಸೋಡ್ನಲ್ಲಿ ಭಾಗಿಯಾಗುವುದಿಲ್ಲ ಎಂದು ನಟ ಸುದೀಪ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಕಲರ್ಸ್ ಕನ್ನಡ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಪರಮೇಶ್ವರ್ ಗುಂಡ್ಕಲ್, ಇಷ್ಟು ಸೀಸನ್ನುಗಳಲ್ಲಿ ಇಂಥ ಸಂದರ್ಭ ಎದುರಾಗುತ್ತಿರುವುದು ಇದೇ ಮೊದಲು. ಆರೋಗ್ಯದ ತೊಂದರೆ ಇರುವುದರಿಂದ ಕಿಚ್ಚ ಸುದೀಪ್ ಅವರು ಈ ವಾರ ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗವಹಿಸುತ್ತಿಲ್ಲ. ಆದರೆ ನಾಳೆ ಮತ್ತು ರವಿವಾರ ಬಿಗ್ ಬಾಸ್ ಎಪಿಸೋಡುಗಳು ರಾತ್ರಿ ಒಂಬತ್ತು ಗಂಟೆಗೆ ಎಂದಿನಂತೆ ಪ್ರಸಾರ ಆಗಲಿವೆ.
ಜೊತೆಯಲ್ಲಿ ಈ ವಾರ ಅತಿಕಡಿಮೆ ಮತಗಳನ್ನು ಪಡೆದ ಒಬ್ಬರು ಕಂಟೆಸ್ಟೆಂಟ್ ಮನೆಯಿಂದ ಹೊರಹೋಗಲಿದ್ದಾರೆ. ಈ ಎಲಿಮಿನೇಷನ್ ಹೇಗೆ ನಡೆಯುತ್ತದೆ ಎನ್ನುವ ಕುತೂಹಲ ನಿಮಗಿದ್ದರೆ ಹೇಗೆಲ್ಲಾ ಮಾಡಬಹುದು ಎಂಬ ಆಯ್ಕೆಗಳನ್ನು ಎದುರಿಗೆ ಇಟ್ಟುಕೊಂಡು ಬಿಗ್ ಬಾಸ್ ತಂಡ ಕೆಲಸ ಮಾಡುತ್ತಿದೆ. ನಿಮ್ಮ ಕುತೂಹಲಕ್ಕೆ, ಪ್ರೀತಿಗೆ ಮತ್ತು ಶುಭಹಾರೈಕೆಗಳಿಗೆ ಧನ್ಯವಾದಗಳು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ