ಪರಂವಾ ಸ್ಟುಡಿಯೋಸ್‌ ನ ಹೊಸ ಪ್ರೇಮಕಥೆ ‘ಇಬ್ಬನಿ ತಬ್ಬಿದ ಇಳೆಯಲಿ’


Team Udayavani, Aug 21, 2022, 9:47 AM IST

paramvah studios announces new movie ibbani tabbida ileyali

ಪರಂವಾ ಸ್ಟುಡಿಯೋಸ್‌’ ಬ್ಯಾನರ್‌ನಡಿ ರಕ್ಷಿತ್‌ ಶೆಟ್ಟಿ ನಿರ್ಮಿಸುತ್ತಿರುವ ಹೊಸ ಚಿತ್ರ ಕಳೆದ ತಿಂಗಳಷ್ಟೇ ಘೋಷಣೆಯಾಗಿತ್ತು. ಇನ್ನೂ ಹೆಸರು ಬಿಟ್ಟುಕೊಡದ ಈ ಚಿತ್ರದಲ್ಲಿ ವಿಹಾನ್‌ ಗೌಡ ಮತ್ತು ಅಂಕಿತಾ ಅಮರ್‌ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವುದಾಗಿ ಚಿತ್ರತಂಡ ತಿಳಿಸಿತ್ತು. ಇದೀಗ ಈ ಸಿನಿಮಾದ ಹೆಸರನ್ನು ಚಿತ್ರತಂಡ ಅಧಿಕೃತವಾಗಿ ಅನೌನ್ಸ್‌ ಮಾಡಿದೆ. ಅಂದಹಾಗೆ, ಶನಿವಾರ ಸಂಜೆ ಈ ಸಿನಿಮಾದ ಹೆಸರು ಅಧಿಕೃತವಾಗಿ ಹೊರಬಿದ್ದಿದ್ದು, ಸಿನಿಮಾಕ್ಕೆ “ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಹೆಸರನ್ನು ಇಡಲಾಗಿದೆ.

ಪ್ರೀತಿ ಎಂದರೆ ಏನು? ಹಳೆಯ ನೆನಪುಗಳಾ? ನಾಳೆ ಜತೆಯಾಗಿರಬೇಕು ಎಂಬ ಕನಸುಗಳಾ? ದೂರವಾದ ನಂತರದ ಚಡಪಡಿಕೆಯಾ? ಇದೆಲ್ಲದರ ಸಂಗಮವೇ “ಇಬ್ಬನಿ ತಬ್ಬಿದ ಇಳೆಯಲಿ’. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಬೇಷರತ್ತಾಗಿ ಪ್ರೀತಿಸುವುದನ್ನು ಸಂಭ್ರಮಿಸುವ ಚಿತ್ರ. ನಿನ್ನೆ, ಇಂದು ಮತ್ತು ನಾಳೆಯ ಪ್ರೀತಿಯನ್ನು ತೋರಿಸುವ ಚಿತ್ರ. ಪ್ರೇಕ್ಷಕರು ಚಿತ್ರವನ್ನು ನೋಡುತ್ತಾ, ಹಾಡುತ್ತಾ, ನಲಿಯುತ್ತಾ, ತಮ್ಮನ್ನೇ ತಾವು ಮರೆಯುವಂತಹ ಚಿತ್ರ ಎಂದಿರುವ ಚಿತ್ರತಂಡ, ಕಾಲೇಜಿನಿಂದ ಪ್ರಾರಂಭವಾಗುವ ಈ ಕಥೆಯು ಪ್ರೌಢಾವಸ್ಥೆಯಲ್ಲಿ ಅಂತ್ಯವಾಗುತ್ತದೆ. ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಚಿತ್ರವು ಸೂಕ್ಷ್ಮವಾಗಿ ತೋರಿಸಲಿದ್ದು, ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರ ದೃಶ್ಯಗಳು ಸಹ ಅಷ್ಟೇ ಪ್ರಮುಖ ಪಾತ್ರವಹಿಸುತ್ತದೆ. ಅಷ್ಟೇ ಅಲ್ಲ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿರಲಿದೆ ಎಂದಿದೆ.

ಈ ಹಿಂದೆ ರಕ್ಷಿತ್‌ ಶೆಟ್ಟಿ ಅವರ “ಸೆವೆನ್‌ ಆಡ್ಸ್‌’ ಚಿತ್ರಕಥಾ ವಿಭಾಗದಲ್ಲಿ ಸಕ್ರಿಯವಾಗಿ “ಕಿರಿಕ್‌ ಪಾರ್ಟಿ’ ಮತ್ತು “ಅವನೇ ಶ್ರೀಮನ್ನಾರಾಯಣ’ ಚಿತ್ರಗಳ ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದ ಮತ್ತು “ಕಥಾಸಂಗಮ’ ಚಿತ್ರದ ‘ರೇನ್‌ಬೋ ಲ್ಯಾಂಡ್‌’ ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್‌ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

ಈ ಚಿತ್ರದ ಕಥೆ ಹೊಸತನ ಕೇಳುವುದರಿಂದ, ಹೊಸ ಕಲಾವಿದರು ಮತ್ತು ತಂತ್ರಜ್ಞರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ನಾಯಕ-ನಾಯಕಿಯಾಗಿ ವಿಹಾನ್‌ ಮತ್ತು ಅಂಕಿತಾ ಅಮರ್‌ ಆಯ್ಕೆಯಾಗಿದ್ದು, ಸದ್ಯದಲ್ಲೇ ಎರಡನೆಯ ನಾಯಕಿಯ ಅಧಿಕೃತ ಘೋಷಣೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಇದೊಂದು ಸಂಗೀತಮಯ ಪ್ರೇಮಕಥೆಯಾಗಿದ್ದು, ಗಗನ್‌ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. “ನ್ಯೂಯಾರ್ಕ್‌ ಫಿಲಂ ಅಕಾಡೆಮಿ’ಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್‌ ಸೆಲ್ವರಾಜನ್‌, ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಹಿಂದೆ “ಕಥಾ ಸಂಗಮ’ ಚಿತ್ರದ “ಗಿರ್ಗಿಟ್ಲೆ’ ಕಥೆಯನ್ನು ನಿರ್ದೇಶಿಸದ್ದ ಶಶಿಕುಮಾರ್‌, ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಂದಹಾಗೆ, “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 2023ರ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.