ಇಂದು ಪಾರ್ವತಮ್ಮ ಟ್ರೇಲರ್‌ ಬಿಡುಗಡೆ

ಮೇ.24 ರಿಂದ ಹರಿಪ್ರಿಯಾ ತನಿಖೆ ಶುರು

Team Udayavani, May 14, 2019, 3:00 AM IST

parvatamma-(1)

ಇತ್ತೀಚೆಗಷ್ಟೇ ನಟ ಶ್ರೀಮುರಳಿ ಅವರು ಬಿಡುಗಡೆ ಮಾಡಿದ್ದ ಹರಿಪ್ರಿಯಾ ಅಭಿನಯದ “ಡಾಟರ್‌ ಅಫ್ ಪಾರ್ವತಮ್ಮ’ ಚಿತ್ರದ ಲಿರಿಕಲ್‌ ವಿಡಿಯೋಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಚಿತ್ರತಂಡ ಮೇ.14 (ಇಂದು) ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುತ್ತಿದೆ. ಈ ಚಿತ್ರಕ್ಕೆ ಗೀತೆಯೊಂದನ್ನು ರಚಿಸಿದ್ದ ನಟ ಧನಂಜಯ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುತ್ತಿದ್ದಾರೆ.

ಪಿಆರ್‌ಕೆ ಯುಟ್ಯೂಬ್‌ ಚಾನೆಲ್‌ನಲ್ಲಿ ಮಧ್ಯಾಹ್ನ ಟ್ರೇಲರ್‌ ಅಪ್‌ಲೋಡ್‌ ಆಗಲಿದೆ. ಎನರ್ಜಿಟಿಕ್‌ ಟೈಟಲ್‌ನ ಚಿತ್ರ ಇದಾಗಿರುವುದರಿಂದ ಪಾರ್ವತಮ್ಮ ಪಾತ್ರದಲ್ಲಿ ಸುಮಲತಾ ಅಂಬರೀಶ್‌ ಕಾಣಿಸಿಕೊಂಡಿರುವುದು ಚಿತ್ರಕ್ಕೆ ಇನ್ನಷ್ಟು ತೂಕ ಹೆಚ್ಚಿದೆ ಎಂಬುದು ಚಿತ್ರತಂಡದ ಹೇಳಿಕೆ.

“ಚಿತ್ರದಲ್ಲಿ ಪಾರ್ವತಮ್ಮನ ಮಗಳಾಗಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಅವರ 25 ನೇ ಚಿತ್ರ ಎಂಬುದು ವಿಶೇಷ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದ್ದು, ಹರಿಪ್ರಿಯಾ ಅವರು ಇದೇ ಮೊದಲ ಬಾರಿಗೆ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಅಷ್ಟೇ ಅಲ್ಲ, ಅವರಿಲ್ಲಿ ಭರ್ಜರಿ ಸ್ಟಂಟ್ಸ್‌ ಕೂಡ ಮಾಡಿದ್ದಾರೆ.

ಆರ್‌ಎಕ್ಸ್‌ 100 ಬೈಕ್‌ ಓಡಿಸುವುದರ ಜೊತೆಗೆ ರೌಡಿಗಳನ್ನು ಕ್ರಿಕೆಟ್‌ ಮೈದಾನದಲ್ಲಿ ಕ್ರಿಕೆಟ್‌ ಬ್ಯಾಟ್‌ ಹಿಡಿದು ಹಿಗ್ಗಾಮುಗ್ಗಾ ಚಚ್ಚಿರುವುದು ಸಿನಿಮಾದ ಹೈಲಟ್‌’ ಎನ್ನುವ ನಿರ್ದೇಶ ಶಂಕರ್‌, ಈಗಾಗಲೇ ಚಿತ್ರದ ಲಿರಿಕಲ್‌ ವಿಡಿಯೋ ನೋಡಿ ಶ್ರೀಮುರಳಿ, ಪ್ರೇಮ್‌, ಅಭಿಷೇಕ್‌ ಅಂಬರೀಶ್‌, ಪವನ್‌ ಒಡೆಯರ್‌, ಗುರುನಂದನ್‌ ಹಾಗೂ ತೆಲುಗು ನಟ ಸುಮನ್‌ ಸೇರಿದಂತೆ ಹಲವರು ನಟ,ನಿರ್ದೇಶಕರು ಮೆಚ್ಚಿಕೊಂಡಿದ್ದಾರೆ ಎನ್ನುತ್ತಾರೆ.

ಇದು ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಚಿತ್ರ. ಸೆಂಟಿಮೆಂಟ್‌, ಎಮೋಷನ್ಸ್‌, ಲವ್‌, ಆ್ಯಕ್ಷನ್ಸ್‌, ಕಾಮಿಡಿ, ಥ್ರಿಲ್ಲರ್‌ ಎಲ್ಲವೂ ಇಲ್ಲಿದೆ. ಎರಡು ಫೈಟ್ಸ್‌, ಭರ್ಜರಿ ಚೇಸ್‌ ದೃಶ್ಯಗಳಿವೆ. ಅಮ್ಮ-ಮಗಳು ಕಾಂಬಿನೇಷನ್‌ ಚಿತ್ರದ ಹೈಲೈಟ್‌. ಇಲ್ಲಿ ಭಾವನೆಗಳ ಜೊತೆಗೆ ಭಾವುಕ ಅಂಶಗಳೂ ತುಂಬಿಕೊಂಡಿವೆ. ಇದು ಒಂದು ವರ್ಗಕ್ಕೆ ಸೀಮಿತವಾದ ಸಿನಿಮಾವಲ್ಲ, ಕುಟುಂಬ ಸಮೇತ ಬಂದು ನೋಡಬಹುದು.

ಚಿತ್ರ ನೋಡಿದವರಿಗೆ ಒಬ್ಬ ಅಮ್ಮನಿಗೆ ಇಂತಹ ಮಗಳಿರಬೇಕು. ಒಬ್ಬ ಮಗಳಿಗೆ ಇಂತಹ ಅಮ್ಮ ಇರಬೇಕು ಅಂತೆನಿಸದೇ ಇರದು. ಅಷ್ಟೊಂದು ಮೌಲ್ಯಗಳು ತುಂಬಿರುವ ಚಿತ್ರ ಎಂಬುದು ಚಿತ್ರತಂಡದ ಮಾತು. ಮಿಥುನ್‌ ಮುಕುಂದನ್‌ ಸಂಗೀತದಲ್ಲಿ ಎರಡು ಹಾಡುಗಳು ಚಿತ್ರದಲ್ಲಿವೆ. ಅರುಳ್‌ ಕೆ. ಸೋಮುಸುಂದರಂ ಅವರ ಛಾಯಾಗ್ರಹಣವಿದೆ.

ವಿನೋದ್‌ ಸಾಹಸವಿದೆ. ಚಿತ್ರದಲಿ ಸೂರಜ್‌ ಗೌಡ, ಪ್ರಭು, ತರಂಗ ವಿಶ್ವ, ರಾಘವೇಂದ್ರ, ಶ್ರೀಧರ್‌, ಸುಧಿ ಇತರರು ನಟಿಸಿದ್ದಾರೆ. ಚಿತ್ರವನ್ನು ಶಶಿಧರ್‌ ಕೆ.ಎಂ ನಿರ್ಮಿಸಿದ್ದಾರೆ. ಇವರೊಂದಿಗೆ ನಿರ್ಮಾಣದಲ್ಲಿ ಕೃಷ್ಣ, ಮಧು, ಸಂದೀಪ್‌ ಸಾಥ್‌ ನೀಡಿದ್ದಾರೆ. ಮೇ. 24 ರಂದು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪಾರ್ವತಮ್ಮನ ದರ್ಶನವಾಗಲಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.