ಭರಣಿ ಸನ್‌ ಆಫ್ ಪಾರ್ವತಮ್ಮ 


Team Udayavani, Aug 15, 2018, 12:07 PM IST

8.jpg

ಹರಿಪ್ರಿಯಾ ಅಭಿನಯದ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರದ ಬಗ್ಗೆ ಗೊತ್ತು. ಆದರೆ, “ಪಾರ್ವತಮ್ಮನ ಮಗ’ ಚಿತ್ರದ ಬಗ್ಗೆ ಗೊತ್ತಾ? ಅದೇ ಈ ಸುದ್ದಿಯ ವಿಶೇಷ. ಈ ಹಿಂದೆ “ಲೂಸ್‌ ಮಾದ’ ಖ್ಯಾತಿಯ ಯೋಗಿ ಅವರ ಸಂಬಂಧಿ ಮಾಧವ ಚಿತ್ರರಂಗಕ್ಕೆ ನಾಯಕರಾಗಿ ಎಂಟ್ರಿಯಾಗುತ್ತಿದ್ದಾರೆ ಎಂಬ ಸುದ್ದಿಯನ್ನು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆಗ ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿರಲಿಲ್ಲ. ನಾಯಕಿಯ ಆಯ್ಕೆಯೂ ಆಗಿರಲಿಲ್ಲ. ಈಗ ಆ ಎರಡಕ್ಕೂ ಉತ್ತರ ಸಿಕ್ಕಿದೆ.

ಅಂದಹಾಗೆ, ಚಿತ್ರಕ್ಕೆ “ಭರಣಿ’ ಎಂದು ನಾಮಕರಣ ಮಾಡಲಾಗಿದೆ. “ಪಾರ್ವತಮ್ಮನ ಮಗ’ ಎಂಬ ಅಡಿಬರಹವೂ ಇಲ್ಲಿದೆ. ಇಲ್ಲಿ “ಭರಣಿ’ ಎನ್ನುವುದಕ್ಕಿಂತ “ಪಾರ್ವತಮ್ಮನ ಮಗ’ ಎಂಬುದು ಹೈಲೆಟ್‌. ಅಲ್ಲಿಗೆ ಇದೊಂದು ತಾಯಿ ಮಗನ ಬಾಂಧವ್ಯ ಬಿಂಬಿಸುವ ಅಪ್ಪಟ ದೇಸಿ ಚಿತ್ರ ಎಂಬುದನ್ನು ಸಾರುತ್ತದೆ. ಇನ್ನು, ಚನಾನಿ ರಾಜ ಈ ಚಿತ್ರದ ನಿರ್ದೇಶಕರು. “ಅದ್ಧೂರಿ’, “ರಾಟೆ’, “ಕಿಸ್‌’ “ಬಹದ್ದೂರ್‌’ ಮತ್ತು “ಭರ್ಜರಿ’ ಚಿತ್ರಗಳ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಇದೆ. ಇದು ಅವರ ಮೊದಲ ಚಿತ್ರ. ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ರಾಜಮೌಳಿ ನಿರ್ದೇಶನದ “ಯಮದೊಂಗ’ ಚಿತ್ರದಲ್ಲಿ ಕಲಾ ವಿಭಾಗದಲ್ಲಿ ಕೆಲಸ
ಮಾಡಿದ್ದಾರೆ.

ಈ ಚಿತ್ರದ ಫೋಟೋಶೂಟ್‌ಗಾಗಿಯೇ ಕೇರಳಕ್ಕೆ ಹೋಗಿದ್ದ ನಿರ್ದೇಶಕರು, ಅಲ್ಲಿ ಆನೆಯೊಂದಿಗೆ ನಾಯಕ, ನಾಯಕಿಯ ಫೋಟೋಶೂಟ್‌ ಮಾಡಿಸಿದ್ದಾರೆ. “ಆನೆ ಕೂಡ ಚಿತ್ರದ ಒಂದು ಭಾಗವಾಗಿದ್ದು, ಚಿತ್ರದ ಹೈಲೆಟ್‌ ಗಳಲ್ಲೊಂದು. ಆನೆ ಚಿತ್ರದಲ್ಲಿ ಶೇ.30 ರಷ್ಟು ಭಾಗ ಕಾಣಿಸಿಕೊಳ್ಳಲಿದೆ. ಆನೆಗಾಗಿಯೇ ಕಳೆದ ನಾಲ್ಕು ತಿಂಗಳಿನಿಂದ ಕಾಯಬೇಕಾಯಿತು. ಕಾರಣ, ಪರ್ಮಿಷನ್‌ ಸಿಗಲಿಲ್ಲ. ಕೆಲ ದಿನಗಳ ಹಿಂದಷ್ಟೇ ಪರ್ಮಿಷನ್‌ ಸಿಕ್ಕಿದ್ದರಿಂದ ಕೇರಳಕ್ಕೆ ಹೋಗಿ ಆನೆಯೊಂದಿಗೆ ಫೋಟೋಶೂಟ್‌ ಮಾಡಿಸಿಕೊಂಡು ಬಂದಿದ್ದೇವೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಚನಾನಿರಾಜ.

ಇಲ್ಲಿ ಪಾರ್ವತಮ್ಮ ಮತ್ತು ಅವನ ಮಗ ನಡುವಿನ ಪ್ರೀತಿ, ವಾತ್ಸಲ್ಯ ಮುಖ್ಯವಾಗಿರಲಿದೆ. ಜೊತೆಗೊಂದು ಪ್ರೀತಿಯೂ ಇರಲಿದೆ. ಚಿತ್ರದಲ್ಲಿ ಸ್ವಾತಿ ಕೊಂಡೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸುಮಾರು 45 ದಿನಗಳ ಕಾಲ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕತ್ತೆಹೊಳೆ  ಗ್ರಾಮದಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆಯಂತೆ. ಎ.ಪಿ.ಅರ್ಜುನ್‌, ಚೇತನ್‌ಕುಮಾರ್‌ ಗೀತೆ ರಚಿಸಿದ್ದಾರೆ. ಮಾಸ್ತಿ ಸಂಭಾಷಣೆ ಬರೆದರೆ, ವಿಕ್ರಮ್‌ ಚಕ್ರವರ್ತಿ ಸಂಗೀತವಿದೆ. ಈ ಚಿತ್ರವನ್ನು ಯೋಗೀಶ್‌ ನಿರ್ಮಾಣ ಮಾಡುತ್ತಿದ್ದಾರೆ. 

ಚಿತ್ರದಲ್ಲಿ ಚಿಕ್ಕಣ್ಣ,ಸಿತಾರಾ ಸೇರಿದಂತೆ ಇತರೆ ಕಲಾವಿದರು ನಟಿಸಲಿದ್ದಾರೆ. ಸೆಪ್ಟೆಂಬರ್‌ನಿಂದ ಚಿತ್ರೀಕರಣ ಶುರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.