ಎಸ್‌.ನಾರಾಯಣ್‌ ಪುತ್ರ ಪವನ್‌ ಹೀರೋ

ಮುತ್ತು ರತ್ನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ

Team Udayavani, Nov 30, 2019, 7:00 AM IST

muthu_ratna

ಹಿರಿಯ ನಿರ್ದೇಶಕ ಎಸ್‌.ನಾರಾಯಣ್‌ ಅವರ ಪುತ್ರ ಪಂಕಜ್‌ ಹೀರೋ ಆಗಿದ್ದು ಗೊತ್ತೇ ಇದೆ. ಅವರ ಮತ್ತೊಬ್ಬ ಪುತ್ರ ಪವನ್‌ ಹೀರೋ ಆಗುತ್ತಿದ್ದಾರೆ ಎಂಬ ಮಾತು ಆಗಾಗ ಓಡಾಡುತ್ತಲೇ ಇತ್ತು. ಆ ಮಾತು ಈಗ ನಿಜವಾಗಿದೆ. ಹೌದು, ಪವನ್‌ ಈಗ ಹೊಸ ಚಿತ್ರಕ್ಕೆ ಹೀರೋ. ಆ ಚಿತ್ರಕ್ಕೆ “ಚಿ.ರಾ. ಮುತ್ತು ಚಿ.ಸೌ.ರತ್ನ’ ಎಂಬ ಹೆಸರಿಡಲಾಗಿದೆ. ಈ “ಮುತ್ತು ರತ್ನ’ದ ಹಿಂದೆ ನಿರ್ದೇಶಕ ಶ್ರೀಕಾಂತ್‌ ಹುಣಸೂರು ನಿಂತಿದ್ದಾರೆ. ಇವರಿಗೆ ಇದು ಮೊದಲ ನಿರ್ದೇಶನದ ಚಿತ್ರ.

ಇದಕ್ಕೂ ಮೊದಲು “ಜೋಗಿ’ ಪ್ರೇಮ್‌ ಜೊತೆ ಕೆಲಸ ಮಾಡಿದ್ದಾರೆ. ಹಲವು ಧಾರಾವಾಹಿಗಳಲ್ಲೂ ಕೆಲಸ ಮಾಡಿದ ಅನುಭವ ಶ್ರೀಕಾಂತ್‌ ಹುಣಸೂರು ಅವರಿಗಿದೆ. ಚಿತ್ರದ ಶೀರ್ಷಿಕೆ ಹೇಳುವಂತೆ, ಇದೊಂದು ಲವ್‌ ಕಮ್‌ ಅರೇಂಜ್‌ ಮ್ಯಾರೇಜ್‌ ಸ್ಟೋರಿಯನ್ನು ಹೇಳುತ್ತದೆ. ಚಿತ್ರದ ಒನ್‌ಲೈನ್‌ ಸ್ಟೋರಿ ಬಗ್ಗೆ ಹೇಳುವ ನಿರ್ದೇಶಕ ಶ್ರೀಕಾಂತ್‌ ಹುಣಸೂರು, “ಇದೊಂದು ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಲವ್‌ಸ್ಟೋರಿ. ಅವಿದ್ಯಾವಂತ ಹುಡುಗನೊಬ್ಬ, ಆ ಊರಿನ ಪಾಳೇಗಾರನ ಮಗಳನ್ನು ಪ್ರೀತಿಸುವ ಕಥೆ ಹೊಂದಿದೆ.

ಗೊತ್ತು ಗುರಿ ಇಲ್ಲದ, ಬದುಕಿನ ಬಗ್ಗೆ ಕಾಳಜಿಯೇ ಇರದ ಹುಡುಗ ಲೈಫ‌ಲ್ಲಿ ಆ ಹುಡುಗಿ ಎಂಟ್ರಿಯಾದಾಗ, ಏನೆಲ್ಲಾ ಅವಘಡಗಳು ನಡೆಯುತ್ತವೆ. ಆಕೆ ಅವನ ಜೊತೆ ಇದ್ದಾಗ, ಹೇಗೆಲ್ಲಾ ಬದಲಾವಣೆಗಳಾಗುತ್ತವೆ ಎಂಬುದು ಚಿತ್ರದ ಕಥೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಶ್ರೀಕಾಂತ್‌. ಪವನ್‌ಗೆ ನಾಯಕಿಯಾಗಿ ಅಂಜನಾ ಕಾಣಿಸಿಕೊಳ್ಳುತ್ತಿದ್ದು, ಇದು ಅವರ ಮೊದಲ ಚಿತ್ರ. ಉಳಿದಂತೆ ಚಿತ್ರದಲ್ಲಿ ಚರಣ್‌ರಾಜ್‌, ನಾಗಾಭರಣ, ಸುಚೇಂದ್ರ ಪ್ರಸಾದ್‌, ರವಿಶಂಕರ್‌ಗೌಡ, ರಾಜೇಶ್‌ ನಟರಂಗ, ಗಿರಿ, ವೀಣಾಸುಂದರ್‌ ಇತರರು ನಟಿಸುತ್ತಿದ್ದಾರೆ’ ಎಂಬುದು ನಿರ್ದೇಶಕರ ಹೇಳಿಕೆ.

ಸುಮಾರು 45 ದಿನಗಳ ಕಾಲ ಕೊಳ್ಳೆಗಾಲ, ಚಾಮರಾಜನಗರ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ದೇವಕಿ ಚಿತ್ರ ನಿರ್ಮಿಸುತ್ತಿದ್ದು, ಇದು ಇವರ ಮೊದಲ ನಿರ್ಮಾಣದ ಚಿತ್ರ. ರಘುನಿಡುವಳ್ಳಿ ಸಂಭಾಷಣೆ ಬರೆದರೆ, ಲೋಕೇಶ್‌ ಸಂಗೀತವಿದೆ. ಚೇತನ್‌ಕುಮಾರ್‌, ಅರಸು ಅಂತಾರೆ, ಸಂತೊಷ್‌ ನಾಯಕ್‌ ಸಾಹಿತ್ಯವಿದೆ. ಕೃಷ್ಣ ಮಂಡ್ಯ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಡಿಸೆಂಬರ್‌ 1 ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.